ಬ್ರೇಕಿಂಗ್ ನ್ಯೂಸ್
24-08-22 12:11 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 24: ರಾತ್ರಿ ವೇಳೆ ಧ್ವನಿವರ್ಧಕ ಬಳಕೆಗೆ ಮಿತಿ ಹೇರಿದ್ದು ಯಕ್ಷಗಾನ ಮೇಳಕ್ಕೂ ತಟ್ಟಿದೆ. ರಾಜ್ಯ ಸರಕಾರದ ಆದೇಶದಂತೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆರು ಯಕ್ಷಗಾನ ಮೇಳಗಳ ಪ್ರದರ್ಶನವನ್ನು ಕಾಲಮಿತಿಗೆ ಬದಲಾಯಿಸಲು ಆಡಳಿತ ಮಂಡಳಿ ನಿರ್ಣಯ ಕೈಗೊಂಡಿದೆ.
ಇಡೀ ರಾತ್ರಿ ಯಕ್ಷಗಾನ ನಡೆಸುವ ಬದಲು ಸಂಜೆಯಿಂದ ರಾತ್ರಿ 11 ಗಂಟೆ ವೇಳೆಗೆ ಮುಗಿಸಲು ನಿರ್ಧರಿಸಲಾಗಿದೆ. ರಾತ್ರಿ ಗಂಟೆ 10.30 ರಿಂದ 50 ಡೆಸಿಬಲ್ಗಿಂತ ಹೆಚ್ಚಿನ ಮಿತಿಯ ಧ್ವನಿವರ್ಧಕ ಬಳಸಬಾರದು ಎಂದು ಸರಕಾರದಿಂದ ಈಗಾಗಲೇ ದೇವಸ್ಥಾನಗಳಿಗೆ ಸೂಚನೆ ಬಂದಿದೆ. ಈ ನಿಟ್ಟಿನಲ್ಲಿ ಯಕ್ಷಗಾನ ಪ್ರದರ್ಶನದ ಸಮಯವನ್ನು ಬದಲಾಯಿಸಲು ಕಟೀಲು ದೇವಳದ ಯಕ್ಷಗಾನ ಮೇಳಗಳ ಆಡಳಿತ ಮಂಡಳಿಯೂ ನಿರ್ಧಾರಕ್ಕೆ ಬಂದಿದೆ.
ಪ್ರತಿ ವರ್ಷ ನವೆಂಬರ್ ನಿಂದ ತೊಡಗಿ ಮೇ ಕೊನೆಯ ವರೆಗೆ ಆರು ತಿಂಗಳ ಕಾಲ ಯಕ್ಷಗಾನ ಮೇಳಗಳ ತಿರುಗಾಟ ಇರುತ್ತದೆ. ರಾತ್ರಿ 10ರಿಂದ ತೊಡಗಿ ಬೆಳಗ್ಗಿನ ಆರು ಗಂಟೆ ವರೆಗೂ ಯಕ್ಷಗಾನ ಇರುತ್ತದೆ. ಆದರೆ ಧ್ವನಿವರ್ಧಕಕ್ಕೆ ಮಿತಿ ಹೇರಿರುವುದು ಮತ್ತು ರಾತ್ರಿಯಿಡೀ ಪ್ರೇಕ್ಷಕರ ಸಂಖ್ಯೆಯೂ ಕಡಿಮೆಯಾಗಿದ್ದರಿಂದ ಕಾಲಮಿತಿ ಯಕ್ಷಗಾನ ಹೆಚ್ಚು ಪ್ರಚಲಿತವಾಗುತ್ತಿದೆ. ಇದೇ ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಸಂಜೆ 5.30ರಿಂದ ರಾತ್ರಿ 10.30ರ ವರೆಗೆ ಕಟೀಲು ಮೇಳದ ಯಕ್ಷಗಾನ ಸೇವೆ ನಡೆಸಲು ನಿರ್ಧರಿಸಲಾಗಿದೆ ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷ ಕೊಡೆತ್ತೂರು ಗುತ್ತು ಸನತ್ ಕುಮಾರ ಶೆಟ್ಟಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
Mangalore Kateel Mela Yakshagana artistes anxious after loudspeaker order. Artistes, especially those dabbling in folklore, are on tenterhooks over the recent state government circular on the use of loudspeakers.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am