ಬ್ರೇಕಿಂಗ್ ನ್ಯೂಸ್
06-10-20 11:45 am Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೆಡೆ ಕೊರೊನಾ ಸೋಂಕು ಎಲ್ಲೆಂದರಲ್ಲಿ ಹರಡುತ್ತಿದೆ. ಆದರೆ, ಜಿಲ್ಲಾಡಳಿತ ಕೆಲವೊಂದು ಚಟುವಟಿಕೆಗಳಿಗೆ ಅ.15ರ ಬಳಿಕ ಮುಕ್ತ ಅವಕಾಶ ನೀಡುವ ಸುಳಿವು ನೀಡಿದೆ.
ಅ.15ರ ಬಳಿಕ ಕೆಲವೊಂದು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗುವುದು. ಆದರೆ ಕೋವಿಡ್ ನಿಯಮಗಳಲ್ಲಿ ಯಾವುದೇ ಸಡಿಲಿಕೆ ಇರುವುದಿಲ್ಲ. ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಇತ್ಯಾದಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಲೇಬೇಕು ಎಂದು ಜಿಲ್ಲಾಧಿಕಾರಿ ಡಾ| ಕೆ.ವಿ. ರಾಜೇಂದ್ರ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪ್ರಮುಖವಾಗಿ ಶಾಲೆ, ಕಾಲೇಜು ಸೇರಿದಂತೆ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳ ಚಟುವಟಿಕೆಗಳಿಗೆ ಅ.15ರ ನಂತರ ಹಂತ-ಹಂತವಾಗಿ ಅನುಮತಿ ಸಿಗಲಿದೆ. ಕಂಟೈನ್ಮೆಂಟ್ ವಲಯ ಹೊರತುಪಡಿಸಿ ಇತರೆಡೆ ಈಜುಕೊಳ, ಸಿನೆಮಾ ಮಂದಿರ/ ರಂಗಮಂದಿರ/ ಮಲ್ಟಿಪ್ಲೆಕ್ಸ್ಗಳನ್ನು, ಮನೋರಂಜನಾ ಉದ್ಯಾನಗಳು ಮತ್ತು ಇನ್ನಿತರ ಚಟುವಟಿಕೆಗೆ ಷರತ್ತು ಸಹಿತ ಅನುಮತಿ ನೀಡಲಾಗುತ್ತದೆ. ಒಳಾಂಗಣ ಸ್ಥಳಗಳಲ್ಲಿ 200 ಜನರ ಪರಿಮಿತಿಗೆ ಒಳಪಟ್ಟು ಸಭಾಭವನದ ಒಟ್ಟು ಸಾಮರ್ಥ್ಯದ ಗರಿಷ್ಠ ಶೇ. 50ರಷ್ಟಕ್ಕೆ ಅನುಮತಿ ದೊರೆಯಲಿದೆ.
ಜಿಲ್ಲೆಯೊಳಗೆ ಹಾಗೂ ಜಿಲ್ಲೆಯ ಹೊರಗೆ ಓಡಾಟಕ್ಕೆ ಯಾವುದೇ ನಿರ್ಬಂಧವಿರುವುದಿಲ್ಲ. ಅಂತಾರಾಷ್ಟ್ರೀಯ ವಿಮಾನ ಪ್ರಯಾಣದ ಮೇಲೆ ನಿರ್ಬಂಧ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
13-09-26 10:11 pm
HK News
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
AI Centre in Madiyala: ಮಡಿಯಾಲದಲ್ಲಿ ಎಐ ಉನ್ನತ ಶ...
13-09-26 07:53 pm
ಬೆಳ್ತಂಗಡಿ ; ಹೆಬ್ಬಾವನ್ನು ನುಂಗಿ ಮನೆಯ ತೋಟದಲ್ಲಿ ಅ...
12-09-26 03:09 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ಮೂಲಸೌಲಭ್ಯ, ಕೈಗಾ...
12-09-26 10:53 am
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm