ಬ್ರೇಕಿಂಗ್ ನ್ಯೂಸ್
25-08-22 10:22 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 25 : ಮಹಾತ್ಮ ಗಾಂಧಿಯವರನ್ನು ಹತ್ಯೆ ಮಾಡಿದವರನ್ನು ವೈಭವೀಕರಿಸುವ ಕಾಲ ಬಂದಿದೆ. ನೆಹರು ಕುಟುಂಬ ದೇಶಕ್ಕಾಗಿ ಮಾಡಿರುವ ಕೆಲಸವನ್ನು ಗೌಣ ಮಾಡಿಸುವ ಪ್ರಯತ್ನ ನಡೆಯುತ್ತಿದೆ. ಈ ರೀತಿ ನೈಜ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಮಾಜಿ ಸಚಿವ, ಕೆಪಿಸಿಸಿ ಕಾರ್ಯದರ್ಶಿ ರಮಾನಾಥ ರೈ ಹೇಳಿದ್ದಾರೆ.
ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯ ಸಂದರ್ಭದಲ್ಲಿ ರಾಜ್ಯ ಸರಕಾರ ನೀಡಿರುವ ಜಾಹೀರಾತಿನಲ್ಲಿ ಪ್ರಥಮ ಪ್ರಧಾನಿಯ ಫೋಟೋವನ್ನೇ ಕಣ್ಮರೆಯಾಗಿಸಿರುವುದು ನಿಜವಾದ ದೇಶಭಕ್ತರಿಗೆ ನೋವು ತರುವ ವಿಚಾರ. ಬ್ರಿಟಿಷರು ದೇಶವನ್ನು ಬಿಟ್ಟು ಹೋದಾಗ ದೇಶವನ್ನು ವಿಭಜನೆ ಮಾಡಿಯೇ ಪಾಕಿಸ್ತಾನಕ್ಕೆ ಮೊದಲು ಸ್ವಾತಂತ್ರ್ಯ ನೀಡಿ ಮರುದಿನ ನಮಗೆ ನೀಡಿದ್ದರು. ಅಂದು ಸ್ವಾತಂತ್ರ್ಯ ಹೋರಾಟಗಾರರು ಅನುಭವಿಸಿದ್ದನ್ನು ಕಣ್ಣಾರೆ ಕಂಡಿದ್ದರೆ ಇಂತಹ ಅವಮಾನ ಮಾಡಲು ಸಾಧ್ಯವಿರಲಿಲ್ಲ. ಬ್ರಿಟಿಷರು ಬಿಟ್ಟು ಹೋದಾಗ ದೇಶದಲ್ಲಿ ಯಾವುದೇ ವ್ಯವಸ್ಥೆಗಳಿರಲಿಲ್ಲ. ನೆಹರೂ ಅವರು ದೇಶದ ಪ್ರಥಮ ಪ್ರಧಾನಿಯಾಗಿ ಅನೇಕ ಅಣೆಕಟ್ಟು, ವಿಶ್ವವಿದ್ಯಾನಿಲಯ ನಿರ್ಮಾಣ ಮಾಡಿದ್ದಾರೆ.
ದ.ಕ. ಜಿಲ್ಲೆಯಲ್ಲೂ ಶ್ರೀನಿವಾಸ ಮಲ್ಯರ ಮೇಲಿನ ಪ್ರೀತಿ, ಅಭಿಮಾನದಿಂದ ನೆಹರೂರವರು ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66 ಮತ್ತು 75, ವಿಮಾನ ನಿಲ್ದಾಣ, ಎನ್ಎಂಪಿಟಿ, ಎನ್ಐಟಿಕೆಯಂತಹ ಸಂಸ್ಥೆಗಳು ಶ್ರೀನಿವಾಸ ಮಲ್ಯರು ನೆಹರೂ ಅವರ ಮೂಲಕ ಮಾಡಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇಂದು ಆ ವಿಮಾನ ನಿಲ್ದಾಣವನ್ನು ಮಾರಾಟ ಮಾಡಲಾಗಿದೆ. ಎನ್ಎಂಪಿಟಿ ಮಾರಾಟ ಹಂತದಲ್ಲಿದೆ. ಬ್ಯಾಂಕ್ಗಳನ್ನು ಈಗಾಗಲೇ ಮಾರಾಟ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಎಲ್ಐಸಿ, ರೈಲ್ವೇಯನ್ನೂ ಖಾಸಗಿಯವರಿಗೆ ನೀಡಲು ತಯಾರಿ ನಡೆದಿದೆ ಎಂದು ರಮಾನಾಥ ರೈ ಹೇಳಿದರು.
ಸ್ವಾತಂತ್ರ್ಯಕ್ಕಾಗಿ ಯಾರೆಲ್ಲಾ ಹೋರಾಟ ನಡೆಸಿದ್ದಾರೆ. ಈ ನಡುವೆ ಕೆಲವರು ಹೋರಾಟವನ್ನು ಮಧ್ಯದಲ್ಲಿ ಬಿಟ್ಟು ಹೋಗಿದ್ದಾರೆ. ಸ್ವಾತಂತ್ರ್ಯದ ಹೋರಾಟಕ್ಕೆ ಒಂದು ಗುರಿ ಇತ್ತು. ಅದನ್ನು ತಲುಪಬೇಕು. ಆ ಬಗ್ಗೆ ಇತಿಹಾಸ ಹೇಳುತ್ತದೆ. ವಾಟ್ಸಾಪ್ಗಳಲ್ಲಿ ಹೇಳುವ ಇತಿಹಾಸ ಬಗ್ಗೆ ಮಾತನಾಡುವುದಿಲ್ಲ. ಆದರೆ ದೇಶದ ಪ್ರಮುಖ ಬರಹಗಾರರು ಸ್ವಾತಂತ್ರ್ಯ ದೊರೆತ ಸಂದರ್ಭದ ಇತಿಹಾಸವನ್ನು ಬರೆದಿದ್ದಾರೆ. ಅದರಲ್ಲಿ ಸ್ವಾತಂತ್ರ್ಯ ಹೋರಾಟದ ನೈಜ ಹೋರಾಟಗಾರರು ಯಾರೆಂಬುದು ತಿಳಿಯುತ್ತದೆ. ಸೂಲಿಬೆಲೆ ಬರೆದ ಪುಸ್ತಕದಿಂದ ಅಲ್ಲ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ರಮಾನಾಥ ರೈ ಪ್ರತಿಕ್ರಿಯಿಸಿದರು.
ಗೋಷ್ಠಿಯಲ್ಲಿ ಮುಖಂಡರಾದ ಶಶಿಧರ ಹೆಗ್ಡೆ, ಸಾಹುಲ್ ಹಮೀದ್, ವಿಶ್ವಾಸ್ ಕುಮಾರ್ ದಾಸ್, ಶ್ಯಾಲೆಟ್ ಪಿಂಟೋ, ಸುಧೀರ್ ಟಿ.ಕೆ., ಸಲೀಂ, ಪ್ರಕಾಶ್ ಸಾಲಿಯಾನ್, ನೀರಜ್ ಪಾಲ್, ಜೋಕಿಂ, ಬೇಬಿ ಕುಂದರ್, ಸುಭಾಶ್ಚಂದ್ರ, ಮಲ್ಲಿಕಾ ಪಕಳ, ಉಮೇಶ್ ದಂಡಕೇರಿ, ನಝೀರ್ ಬಜಾಲ್, ಶಬೀರ್ ಮೊದಲಾದವರು ಉಪಸ್ಥಿತರಿದ್ದರು.
Mangalore Whatever Neharu did BJP is selling and enjoying them slams Ramanath Rai.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm