ಬ್ರೇಕಿಂಗ್ ನ್ಯೂಸ್
06-10-20 04:04 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 06: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ ದಾಳಿ ನಡೆಸಿದ್ದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಿಂದ ಮೆರವಣಿಗೆ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅಜ್ಜರಕಾಡಿನ ಸೈನಿಕ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಅಲ್ಲಿ ಸುಮಾರು ಅರ್ಧ ಗಂಟೆ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಜೆಪಿಯವರು ಕಾಂಗ್ರೆಸ್ ಮುಖಂಡರ ಬಾಯಿ ಮುಚ್ಚಿಸಲು ಯತ್ನಿಸುತ್ತಿದ್ದಾರೆ. ಪದೇ ಪದೇ ಸಿಬಿಐ ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡರ ಧೈರ್ಯ ಕುಂದಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆದರೆ ಬಿಜೆಪಿಯ ಈ ಪ್ರಯತ್ನ ಫಲ ನೀಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಡಿ.ಕೆ ಶಿವಕುಮಾರ್ ನಮ್ಮ ಮುಖಂಡರು. ಅವರ ಪರವಾಗಿ ನಾವೆಲ್ಲ ಇದ್ದೇವೆ, ಡಿ.ಕೆ ಶಿವಕುಮಾರ್ ಯಾವತ್ತಿದ್ದರೂ ಬಂಡೆಯೇ. ಅವರ ಅಷ್ಟೂ ಕಚೇರಿಗಳ ಮೇಲೆ ದಾಳಿ ನಡೆಸಿದಾಗ ಅವರಿಗೆ ಸಿಕ್ಕಿದ್ದು ಕೇವಲ 57 ಲಕ್ಷ ರುಪಾಯಿ ಮಾತ್ರ. ದೆಹಲಿ, ಬೆಂಗಳೂರು, ಮುಂಬೈ ಎಲ್ಲ ಸೇರಿ ಇಷ್ಟೇ ಸಿಕ್ಕಿದ್ದು ಅಲ್ಲವೇ ಎಂದು ಪ್ರಶ್ನೆ ಮಾಡಿದ್ರು.
ಒಂದ್ವೇಳೆ ಇದೇ ರೀತಿ ಬಿಜೆಪಿ ಪಕ್ಷದ ಶಾಸಕರು ಮತ್ತು ಮಂತ್ರಿಗಳ ಮನೆ ಮೇಲೆ ದಾಳಿ ನಡೆಸಿದರೆ ಕೋಟ್ಯಂತರ ರೂ. ಸಿಗುತ್ತದೆ. ತಾಕತ್ತಿದ್ದರೆ ಆ ಕೆಲಸ ಮಾಡಿ ಎಂದು ಉಡುಪಿ ಕಾಂಗ್ರೆಸ್ ಮುಖಂಡರು ಸವಾಲು ಹಾಕಿದರು. ಅರ್ಧ ತಾಸು ರಸ್ತೆ ತಡೆ ನಡೆಸಿದ ಪ್ರತಿಭಟನಕಾರರನ್ನು ಬಳಿಕ ಪೊಲೀಸರು ಬಂಧಿಸಿ, ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ , ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ, ಹರೀಶ ಕಿಣಿ, ಯತೀಶ್ ಕರ್ಕೇರ, ನವೀನ್ಚಂದ್ರ ಶೆಟ್ಟಿ, ಗೀತಾ ವಾಗ್ಲೆ, ಮುರಳಿ ಶೆಟ್ಟಿ, ವೆರೊನಿಕಾ ಕಾರ್ನೆಲಿಯೊ, ಜ್ಯೋತಿ ಹೆಬ್ಬಾರ್, ರೋಶನಿ ಓಲಿವರ್ ಮತ್ತಿತರರು ಇದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm