ಬ್ರೇಕಿಂಗ್ ನ್ಯೂಸ್
06-10-20 04:04 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 06: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ ದಾಳಿ ನಡೆಸಿದ್ದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಿಂದ ಮೆರವಣಿಗೆ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅಜ್ಜರಕಾಡಿನ ಸೈನಿಕ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಅಲ್ಲಿ ಸುಮಾರು ಅರ್ಧ ಗಂಟೆ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಜೆಪಿಯವರು ಕಾಂಗ್ರೆಸ್ ಮುಖಂಡರ ಬಾಯಿ ಮುಚ್ಚಿಸಲು ಯತ್ನಿಸುತ್ತಿದ್ದಾರೆ. ಪದೇ ಪದೇ ಸಿಬಿಐ ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡರ ಧೈರ್ಯ ಕುಂದಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆದರೆ ಬಿಜೆಪಿಯ ಈ ಪ್ರಯತ್ನ ಫಲ ನೀಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಡಿ.ಕೆ ಶಿವಕುಮಾರ್ ನಮ್ಮ ಮುಖಂಡರು. ಅವರ ಪರವಾಗಿ ನಾವೆಲ್ಲ ಇದ್ದೇವೆ, ಡಿ.ಕೆ ಶಿವಕುಮಾರ್ ಯಾವತ್ತಿದ್ದರೂ ಬಂಡೆಯೇ. ಅವರ ಅಷ್ಟೂ ಕಚೇರಿಗಳ ಮೇಲೆ ದಾಳಿ ನಡೆಸಿದಾಗ ಅವರಿಗೆ ಸಿಕ್ಕಿದ್ದು ಕೇವಲ 57 ಲಕ್ಷ ರುಪಾಯಿ ಮಾತ್ರ. ದೆಹಲಿ, ಬೆಂಗಳೂರು, ಮುಂಬೈ ಎಲ್ಲ ಸೇರಿ ಇಷ್ಟೇ ಸಿಕ್ಕಿದ್ದು ಅಲ್ಲವೇ ಎಂದು ಪ್ರಶ್ನೆ ಮಾಡಿದ್ರು.
ಒಂದ್ವೇಳೆ ಇದೇ ರೀತಿ ಬಿಜೆಪಿ ಪಕ್ಷದ ಶಾಸಕರು ಮತ್ತು ಮಂತ್ರಿಗಳ ಮನೆ ಮೇಲೆ ದಾಳಿ ನಡೆಸಿದರೆ ಕೋಟ್ಯಂತರ ರೂ. ಸಿಗುತ್ತದೆ. ತಾಕತ್ತಿದ್ದರೆ ಆ ಕೆಲಸ ಮಾಡಿ ಎಂದು ಉಡುಪಿ ಕಾಂಗ್ರೆಸ್ ಮುಖಂಡರು ಸವಾಲು ಹಾಕಿದರು. ಅರ್ಧ ತಾಸು ರಸ್ತೆ ತಡೆ ನಡೆಸಿದ ಪ್ರತಿಭಟನಕಾರರನ್ನು ಬಳಿಕ ಪೊಲೀಸರು ಬಂಧಿಸಿ, ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ , ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ, ಹರೀಶ ಕಿಣಿ, ಯತೀಶ್ ಕರ್ಕೇರ, ನವೀನ್ಚಂದ್ರ ಶೆಟ್ಟಿ, ಗೀತಾ ವಾಗ್ಲೆ, ಮುರಳಿ ಶೆಟ್ಟಿ, ವೆರೊನಿಕಾ ಕಾರ್ನೆಲಿಯೊ, ಜ್ಯೋತಿ ಹೆಬ್ಬಾರ್, ರೋಶನಿ ಓಲಿವರ್ ಮತ್ತಿತರರು ಇದ್ದರು.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm