ಬ್ರೇಕಿಂಗ್ ನ್ಯೂಸ್
06-10-20 04:04 pm Udupi Correspondent ಕರಾವಳಿ
ಉಡುಪಿ, ಅಕ್ಟೋಬರ್ 06: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಸಿಬಿಐ ದಾಳಿ ನಡೆಸಿದ್ದನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಭಾರೀ ಸಂಖ್ಯೆಯಲ್ಲಿ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಿದ್ದಾರೆ.
ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಿಂದ ಮೆರವಣಿಗೆ ಹೊರಟ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಅಜ್ಜರಕಾಡಿನ ಸೈನಿಕ ಸ್ಮಾರಕದ ಬಳಿ ಪ್ರತಿಭಟನೆ ನಡೆಸಿದರು. ಅಲ್ಲಿ ಸುಮಾರು ಅರ್ಧ ಗಂಟೆ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಉಪ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಜೆಪಿಯವರು ಕಾಂಗ್ರೆಸ್ ಮುಖಂಡರ ಬಾಯಿ ಮುಚ್ಚಿಸಲು ಯತ್ನಿಸುತ್ತಿದ್ದಾರೆ. ಪದೇ ಪದೇ ಸಿಬಿಐ ದಾಳಿ ನಡೆಸುವ ಮೂಲಕ ಕಾಂಗ್ರೆಸ್ ಮುಖಂಡರ ಧೈರ್ಯ ಕುಂದಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಆದರೆ ಬಿಜೆಪಿಯ ಈ ಪ್ರಯತ್ನ ಫಲ ನೀಡಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.



ಡಿ.ಕೆ ಶಿವಕುಮಾರ್ ನಮ್ಮ ಮುಖಂಡರು. ಅವರ ಪರವಾಗಿ ನಾವೆಲ್ಲ ಇದ್ದೇವೆ, ಡಿ.ಕೆ ಶಿವಕುಮಾರ್ ಯಾವತ್ತಿದ್ದರೂ ಬಂಡೆಯೇ. ಅವರ ಅಷ್ಟೂ ಕಚೇರಿಗಳ ಮೇಲೆ ದಾಳಿ ನಡೆಸಿದಾಗ ಅವರಿಗೆ ಸಿಕ್ಕಿದ್ದು ಕೇವಲ 57 ಲಕ್ಷ ರುಪಾಯಿ ಮಾತ್ರ. ದೆಹಲಿ, ಬೆಂಗಳೂರು, ಮುಂಬೈ ಎಲ್ಲ ಸೇರಿ ಇಷ್ಟೇ ಸಿಕ್ಕಿದ್ದು ಅಲ್ಲವೇ ಎಂದು ಪ್ರಶ್ನೆ ಮಾಡಿದ್ರು.
ಒಂದ್ವೇಳೆ ಇದೇ ರೀತಿ ಬಿಜೆಪಿ ಪಕ್ಷದ ಶಾಸಕರು ಮತ್ತು ಮಂತ್ರಿಗಳ ಮನೆ ಮೇಲೆ ದಾಳಿ ನಡೆಸಿದರೆ ಕೋಟ್ಯಂತರ ರೂ. ಸಿಗುತ್ತದೆ. ತಾಕತ್ತಿದ್ದರೆ ಆ ಕೆಲಸ ಮಾಡಿ ಎಂದು ಉಡುಪಿ ಕಾಂಗ್ರೆಸ್ ಮುಖಂಡರು ಸವಾಲು ಹಾಕಿದರು. ಅರ್ಧ ತಾಸು ರಸ್ತೆ ತಡೆ ನಡೆಸಿದ ಪ್ರತಿಭಟನಕಾರರನ್ನು ಬಳಿಕ ಪೊಲೀಸರು ಬಂಧಿಸಿ, ಪೊಲೀಸ್ ವ್ಯಾನ್ ನಲ್ಲಿ ಕರೆದೊಯ್ದರು.
ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ , ಕಾಂಗ್ರೆಸ್ ಮುಖಂಡರಾದ ಕಿಶನ್ ಹೆಗ್ಡೆ, ಹರೀಶ ಕಿಣಿ, ಯತೀಶ್ ಕರ್ಕೇರ, ನವೀನ್ಚಂದ್ರ ಶೆಟ್ಟಿ, ಗೀತಾ ವಾಗ್ಲೆ, ಮುರಳಿ ಶೆಟ್ಟಿ, ವೆರೊನಿಕಾ ಕಾರ್ನೆಲಿಯೊ, ಜ್ಯೋತಿ ಹೆಬ್ಬಾರ್, ರೋಶನಿ ಓಲಿವರ್ ಮತ್ತಿತರರು ಇದ್ದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am