ಬ್ರೇಕಿಂಗ್ ನ್ಯೂಸ್
30-08-22 10:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಫಾಜಿಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ತೋರಿಕೆಗೆ ಮಾತ್ರ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಕೃತ್ಯದ ಹಿಂದೆ ಯಾರಿದ್ದಾರೆ, ಯಾರೆಲ್ಲ ಸೇರಿ ಸಂಚು ನಡೆಸಿದ್ದಾರೆ ಎಂಬ ಬಗ್ಗೆ ತನಿಖೆ ಆಗಿಲ್ಲ. ಕೃತ್ಯದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಫಾಝಿಲ್ ತಂದೆ ಫಾರೂಕ್ ಕಣ್ಣೀರು ಹಾಕಿದ್ದಾರೆ. ನನ್ನ ಮಗನಿಗೆ ಬಂದಿರುವ ಸ್ಥಿತಿ ಇನ್ಯಾರಿಗೂ ಬರಬಾರದು. ಇವರನ್ನು ಶಿಕ್ಷಿಸದೆ ಬಿಟ್ಟರೆ ಮತ್ತೆ ಇಂತಹದ್ದೇ ಕೃತ್ಯ ನಡೆಯುತ್ತದೆ ಎಂದು ಹೇಳಿದ್ದಾರೆ.
ಸುರತ್ಕಲ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಫಾರೂಕ್ ಅವರು, 27 ವರ್ಷ ಹಳೆಯ ಕಾರಿನಲ್ಲಿ ಏಳು ಮಂದಿ ಆರೋಪಿಗಳು ಪರಾರಿಯಾಗಲು ಸಾಧ್ಯನಾ? ಇದ್ರ ಹಿಂದೆ ರಾಜಕೀಯ ವ್ಯಕ್ತಿಗಳ ಕೈವಾಡ ಇದೆ. ಷಡ್ಯಂತ್ರ ನಡೆಸಿ ಮಗನನ್ನು ಕೊಂದಿದ್ದಾರೆ. ಕೃತ್ಯಕ್ಕೆ ಸಹಕಾರ ನೀಡಿದ ನೆಪದಲ್ಲಿ ಪಲ್ಲಮಜಲು ನಿವಾಸಿಯನ್ನು ಬಂಧಿಸಲಾಗಿದೆ. ಆದರೆ ಆತನನ್ನು ನೋಡಿದರೆ, ಆತ ಹಣ ನೀಡೋದಲ್ಲ. ಚಹಾ ಕುಡಿಯಲು ಆತನಿಗೇ ಯಾರಾದ್ರೂ ಹಣ ನೀಡಬೇಕು ಎನ್ನುವಂತಿದ್ದಾನೆ. ಅಂಥವರು ಕೃತ್ಯಕ್ಕೆ ಹಣ ಸಹಾಯ ಮಾಡಿದ್ದಾರೆ ಎಂದರೆ ನಂಬುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಇಲ್ಲಿನ ಪೊಲೀಸ್ ಅಧಿಕಾರಿಗಳು ಸರಿಯಾಗಿದ್ದಾರೆ, ಸರಿಯಾಗಿಲ್ಲ ಎಂದು ಹೇಳುವುದಿಲ್ಲ. ಆದರೆ ರಾಜಕೀಯದವರು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ. ಕೃತ್ಯದ ಹಿಂದೆ ಕಾಣದ ಕೈಗಳ ಸಹಕಾರ ಇದೆ. ಅವರನ್ನು ಬಂಧಿಸಿಲ್ಲ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂರು ವಾಹನಗಳ ಮಾಲೀಕರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಆಯುಧಗಳನ್ನು ಪೂರೈಸಿದ್ದು ಯಾರು ಎಂದು ಹೇಳಿಲ್ಲ. ಕೇವಲ ಸಿಸಿಟಿವಿ ಫೂಟೇಜ್ ಹಿಡಿದು ನಾಮಕಾವಸ್ತೆಗೆ ಪ್ರಕರಣವನ್ನು ಮುಗಿಸಿದ್ದಾರೆ. ಕೊಲೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಮ್ಮಲ್ಲು ಕೆಲವು ದಾಖಲೆಗಳಿವೆ. ಪೊಲೀಸರು ಕೇಳಿದರೆ ಆ ದಾಖಲೆಗಳನ್ನು ನೀಡಲು ಸಿದ್ಧರಿದ್ದೇವೆ, ಫಾಝಿಲ್ ಕೊಲೆಯ ಹಿಂದೆ ಇರುವ ಕಾಣದ ಕೈಗಳನ್ನು ಪೊಲೀಸರು ಹೊರತರಬೇಕು ಎಂದವರು ಆಗ್ರಹಿಸಿದರು.
Farooq, father of youngster Fazil who was brutally hacked to death in Surathkal, alleged that more arrests need to be done in his son's murder case.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
10-04-26 12:35 pm
Dinesh Kumar, Mangaluru
Besant Evening College, BPL Cricket: ಬೆಸೆಂಟ್...
07-04-26 01:22 pm
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm