ಬ್ರೇಕಿಂಗ್ ನ್ಯೂಸ್
30-08-22 10:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಫಾಜಿಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ತೋರಿಕೆಗೆ ಮಾತ್ರ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಕೃತ್ಯದ ಹಿಂದೆ ಯಾರಿದ್ದಾರೆ, ಯಾರೆಲ್ಲ ಸೇರಿ ಸಂಚು ನಡೆಸಿದ್ದಾರೆ ಎಂಬ ಬಗ್ಗೆ ತನಿಖೆ ಆಗಿಲ್ಲ. ಕೃತ್ಯದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಫಾಝಿಲ್ ತಂದೆ ಫಾರೂಕ್ ಕಣ್ಣೀರು ಹಾಕಿದ್ದಾರೆ. ನನ್ನ ಮಗನಿಗೆ ಬಂದಿರುವ ಸ್ಥಿತಿ ಇನ್ಯಾರಿಗೂ ಬರಬಾರದು. ಇವರನ್ನು ಶಿಕ್ಷಿಸದೆ ಬಿಟ್ಟರೆ ಮತ್ತೆ ಇಂತಹದ್ದೇ ಕೃತ್ಯ ನಡೆಯುತ್ತದೆ ಎಂದು ಹೇಳಿದ್ದಾರೆ.
ಸುರತ್ಕಲ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಫಾರೂಕ್ ಅವರು, 27 ವರ್ಷ ಹಳೆಯ ಕಾರಿನಲ್ಲಿ ಏಳು ಮಂದಿ ಆರೋಪಿಗಳು ಪರಾರಿಯಾಗಲು ಸಾಧ್ಯನಾ? ಇದ್ರ ಹಿಂದೆ ರಾಜಕೀಯ ವ್ಯಕ್ತಿಗಳ ಕೈವಾಡ ಇದೆ. ಷಡ್ಯಂತ್ರ ನಡೆಸಿ ಮಗನನ್ನು ಕೊಂದಿದ್ದಾರೆ. ಕೃತ್ಯಕ್ಕೆ ಸಹಕಾರ ನೀಡಿದ ನೆಪದಲ್ಲಿ ಪಲ್ಲಮಜಲು ನಿವಾಸಿಯನ್ನು ಬಂಧಿಸಲಾಗಿದೆ. ಆದರೆ ಆತನನ್ನು ನೋಡಿದರೆ, ಆತ ಹಣ ನೀಡೋದಲ್ಲ. ಚಹಾ ಕುಡಿಯಲು ಆತನಿಗೇ ಯಾರಾದ್ರೂ ಹಣ ನೀಡಬೇಕು ಎನ್ನುವಂತಿದ್ದಾನೆ. ಅಂಥವರು ಕೃತ್ಯಕ್ಕೆ ಹಣ ಸಹಾಯ ಮಾಡಿದ್ದಾರೆ ಎಂದರೆ ನಂಬುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಇಲ್ಲಿನ ಪೊಲೀಸ್ ಅಧಿಕಾರಿಗಳು ಸರಿಯಾಗಿದ್ದಾರೆ, ಸರಿಯಾಗಿಲ್ಲ ಎಂದು ಹೇಳುವುದಿಲ್ಲ. ಆದರೆ ರಾಜಕೀಯದವರು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ. ಕೃತ್ಯದ ಹಿಂದೆ ಕಾಣದ ಕೈಗಳ ಸಹಕಾರ ಇದೆ. ಅವರನ್ನು ಬಂಧಿಸಿಲ್ಲ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂರು ವಾಹನಗಳ ಮಾಲೀಕರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಆಯುಧಗಳನ್ನು ಪೂರೈಸಿದ್ದು ಯಾರು ಎಂದು ಹೇಳಿಲ್ಲ. ಕೇವಲ ಸಿಸಿಟಿವಿ ಫೂಟೇಜ್ ಹಿಡಿದು ನಾಮಕಾವಸ್ತೆಗೆ ಪ್ರಕರಣವನ್ನು ಮುಗಿಸಿದ್ದಾರೆ. ಕೊಲೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಮ್ಮಲ್ಲು ಕೆಲವು ದಾಖಲೆಗಳಿವೆ. ಪೊಲೀಸರು ಕೇಳಿದರೆ ಆ ದಾಖಲೆಗಳನ್ನು ನೀಡಲು ಸಿದ್ಧರಿದ್ದೇವೆ, ಫಾಝಿಲ್ ಕೊಲೆಯ ಹಿಂದೆ ಇರುವ ಕಾಣದ ಕೈಗಳನ್ನು ಪೊಲೀಸರು ಹೊರತರಬೇಕು ಎಂದವರು ಆಗ್ರಹಿಸಿದರು.
Farooq, father of youngster Fazil who was brutally hacked to death in Surathkal, alleged that more arrests need to be done in his son's murder case.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 06:44 pm
HK News Desk
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am
ಅಕ್ರಮ ಸಂಬಂಧವೇ ರಕ್ತಪಾತಕ್ಕೆ ಕಾರಣ.. ನನ್ನ ಹತ್ಯೆಗೆ...
06-02-26 06:36 pm