ಬ್ರೇಕಿಂಗ್ ನ್ಯೂಸ್
30-08-22 10:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಫಾಜಿಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ತೋರಿಕೆಗೆ ಮಾತ್ರ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಕೃತ್ಯದ ಹಿಂದೆ ಯಾರಿದ್ದಾರೆ, ಯಾರೆಲ್ಲ ಸೇರಿ ಸಂಚು ನಡೆಸಿದ್ದಾರೆ ಎಂಬ ಬಗ್ಗೆ ತನಿಖೆ ಆಗಿಲ್ಲ. ಕೃತ್ಯದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಫಾಝಿಲ್ ತಂದೆ ಫಾರೂಕ್ ಕಣ್ಣೀರು ಹಾಕಿದ್ದಾರೆ. ನನ್ನ ಮಗನಿಗೆ ಬಂದಿರುವ ಸ್ಥಿತಿ ಇನ್ಯಾರಿಗೂ ಬರಬಾರದು. ಇವರನ್ನು ಶಿಕ್ಷಿಸದೆ ಬಿಟ್ಟರೆ ಮತ್ತೆ ಇಂತಹದ್ದೇ ಕೃತ್ಯ ನಡೆಯುತ್ತದೆ ಎಂದು ಹೇಳಿದ್ದಾರೆ.
ಸುರತ್ಕಲ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಫಾರೂಕ್ ಅವರು, 27 ವರ್ಷ ಹಳೆಯ ಕಾರಿನಲ್ಲಿ ಏಳು ಮಂದಿ ಆರೋಪಿಗಳು ಪರಾರಿಯಾಗಲು ಸಾಧ್ಯನಾ? ಇದ್ರ ಹಿಂದೆ ರಾಜಕೀಯ ವ್ಯಕ್ತಿಗಳ ಕೈವಾಡ ಇದೆ. ಷಡ್ಯಂತ್ರ ನಡೆಸಿ ಮಗನನ್ನು ಕೊಂದಿದ್ದಾರೆ. ಕೃತ್ಯಕ್ಕೆ ಸಹಕಾರ ನೀಡಿದ ನೆಪದಲ್ಲಿ ಪಲ್ಲಮಜಲು ನಿವಾಸಿಯನ್ನು ಬಂಧಿಸಲಾಗಿದೆ. ಆದರೆ ಆತನನ್ನು ನೋಡಿದರೆ, ಆತ ಹಣ ನೀಡೋದಲ್ಲ. ಚಹಾ ಕುಡಿಯಲು ಆತನಿಗೇ ಯಾರಾದ್ರೂ ಹಣ ನೀಡಬೇಕು ಎನ್ನುವಂತಿದ್ದಾನೆ. ಅಂಥವರು ಕೃತ್ಯಕ್ಕೆ ಹಣ ಸಹಾಯ ಮಾಡಿದ್ದಾರೆ ಎಂದರೆ ನಂಬುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಇಲ್ಲಿನ ಪೊಲೀಸ್ ಅಧಿಕಾರಿಗಳು ಸರಿಯಾಗಿದ್ದಾರೆ, ಸರಿಯಾಗಿಲ್ಲ ಎಂದು ಹೇಳುವುದಿಲ್ಲ. ಆದರೆ ರಾಜಕೀಯದವರು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ. ಕೃತ್ಯದ ಹಿಂದೆ ಕಾಣದ ಕೈಗಳ ಸಹಕಾರ ಇದೆ. ಅವರನ್ನು ಬಂಧಿಸಿಲ್ಲ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂರು ವಾಹನಗಳ ಮಾಲೀಕರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಆಯುಧಗಳನ್ನು ಪೂರೈಸಿದ್ದು ಯಾರು ಎಂದು ಹೇಳಿಲ್ಲ. ಕೇವಲ ಸಿಸಿಟಿವಿ ಫೂಟೇಜ್ ಹಿಡಿದು ನಾಮಕಾವಸ್ತೆಗೆ ಪ್ರಕರಣವನ್ನು ಮುಗಿಸಿದ್ದಾರೆ. ಕೊಲೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಮ್ಮಲ್ಲು ಕೆಲವು ದಾಖಲೆಗಳಿವೆ. ಪೊಲೀಸರು ಕೇಳಿದರೆ ಆ ದಾಖಲೆಗಳನ್ನು ನೀಡಲು ಸಿದ್ಧರಿದ್ದೇವೆ, ಫಾಝಿಲ್ ಕೊಲೆಯ ಹಿಂದೆ ಇರುವ ಕಾಣದ ಕೈಗಳನ್ನು ಪೊಲೀಸರು ಹೊರತರಬೇಕು ಎಂದವರು ಆಗ್ರಹಿಸಿದರು.
Farooq, father of youngster Fazil who was brutally hacked to death in Surathkal, alleged that more arrests need to be done in his son's murder case.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm