ಬ್ರೇಕಿಂಗ್ ನ್ಯೂಸ್
30-08-22 10:19 pm Mangalore Correspondent ಕರಾವಳಿ
ಮಂಗಳೂರು, ಆಗಸ್ಟ್ 30: ಫಾಜಿಲ್ ಹತ್ಯೆ ಪ್ರಕರಣದಲ್ಲಿ ಪೊಲೀಸರು ತೋರಿಕೆಗೆ ಮಾತ್ರ ಆರೋಪಿಗಳನ್ನು ಬಂಧಿಸಿದ್ದಾರೆ. ಆದರೆ ಕೃತ್ಯದ ಹಿಂದೆ ಯಾರಿದ್ದಾರೆ, ಯಾರೆಲ್ಲ ಸೇರಿ ಸಂಚು ನಡೆಸಿದ್ದಾರೆ ಎಂಬ ಬಗ್ಗೆ ತನಿಖೆ ಆಗಿಲ್ಲ. ಕೃತ್ಯದ ಹಿಂದೆ ಕಾಣದ ಕೈಗಳು ಕೆಲಸ ಮಾಡಿವೆ ಎಂದು ಫಾಝಿಲ್ ತಂದೆ ಫಾರೂಕ್ ಕಣ್ಣೀರು ಹಾಕಿದ್ದಾರೆ. ನನ್ನ ಮಗನಿಗೆ ಬಂದಿರುವ ಸ್ಥಿತಿ ಇನ್ಯಾರಿಗೂ ಬರಬಾರದು. ಇವರನ್ನು ಶಿಕ್ಷಿಸದೆ ಬಿಟ್ಟರೆ ಮತ್ತೆ ಇಂತಹದ್ದೇ ಕೃತ್ಯ ನಡೆಯುತ್ತದೆ ಎಂದು ಹೇಳಿದ್ದಾರೆ.
ಸುರತ್ಕಲ್ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಫಾರೂಕ್ ಅವರು, 27 ವರ್ಷ ಹಳೆಯ ಕಾರಿನಲ್ಲಿ ಏಳು ಮಂದಿ ಆರೋಪಿಗಳು ಪರಾರಿಯಾಗಲು ಸಾಧ್ಯನಾ? ಇದ್ರ ಹಿಂದೆ ರಾಜಕೀಯ ವ್ಯಕ್ತಿಗಳ ಕೈವಾಡ ಇದೆ. ಷಡ್ಯಂತ್ರ ನಡೆಸಿ ಮಗನನ್ನು ಕೊಂದಿದ್ದಾರೆ. ಕೃತ್ಯಕ್ಕೆ ಸಹಕಾರ ನೀಡಿದ ನೆಪದಲ್ಲಿ ಪಲ್ಲಮಜಲು ನಿವಾಸಿಯನ್ನು ಬಂಧಿಸಲಾಗಿದೆ. ಆದರೆ ಆತನನ್ನು ನೋಡಿದರೆ, ಆತ ಹಣ ನೀಡೋದಲ್ಲ. ಚಹಾ ಕುಡಿಯಲು ಆತನಿಗೇ ಯಾರಾದ್ರೂ ಹಣ ನೀಡಬೇಕು ಎನ್ನುವಂತಿದ್ದಾನೆ. ಅಂಥವರು ಕೃತ್ಯಕ್ಕೆ ಹಣ ಸಹಾಯ ಮಾಡಿದ್ದಾರೆ ಎಂದರೆ ನಂಬುವುದು ಹೇಗೆ ಎಂದು ಪ್ರಶ್ನಿಸಿದ್ದಾರೆ.
ಇಲ್ಲಿನ ಪೊಲೀಸ್ ಅಧಿಕಾರಿಗಳು ಸರಿಯಾಗಿದ್ದಾರೆ, ಸರಿಯಾಗಿಲ್ಲ ಎಂದು ಹೇಳುವುದಿಲ್ಲ. ಆದರೆ ರಾಜಕೀಯದವರು ಪೊಲೀಸರ ಕೈ ಕಟ್ಟಿ ಹಾಕಿದ್ದಾರೆ. ಕೃತ್ಯದ ಹಿಂದೆ ಕಾಣದ ಕೈಗಳ ಸಹಕಾರ ಇದೆ. ಅವರನ್ನು ಬಂಧಿಸಿಲ್ಲ ಎಂದು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮೂರು ವಾಹನಗಳ ಮಾಲೀಕರು ಯಾರು ಎಂಬುದನ್ನು ಬಹಿರಂಗಪಡಿಸಿಲ್ಲ. ಆಯುಧಗಳನ್ನು ಪೂರೈಸಿದ್ದು ಯಾರು ಎಂದು ಹೇಳಿಲ್ಲ. ಕೇವಲ ಸಿಸಿಟಿವಿ ಫೂಟೇಜ್ ಹಿಡಿದು ನಾಮಕಾವಸ್ತೆಗೆ ಪ್ರಕರಣವನ್ನು ಮುಗಿಸಿದ್ದಾರೆ. ಕೊಲೆಯ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ನಮ್ಮಲ್ಲು ಕೆಲವು ದಾಖಲೆಗಳಿವೆ. ಪೊಲೀಸರು ಕೇಳಿದರೆ ಆ ದಾಖಲೆಗಳನ್ನು ನೀಡಲು ಸಿದ್ಧರಿದ್ದೇವೆ, ಫಾಝಿಲ್ ಕೊಲೆಯ ಹಿಂದೆ ಇರುವ ಕಾಣದ ಕೈಗಳನ್ನು ಪೊಲೀಸರು ಹೊರತರಬೇಕು ಎಂದವರು ಆಗ್ರಹಿಸಿದರು.
Farooq, father of youngster Fazil who was brutally hacked to death in Surathkal, alleged that more arrests need to be done in his son's murder case.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am