ಬ್ರೇಕಿಂಗ್ ನ್ಯೂಸ್
06-10-20 08:47 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 6: ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೋವಿಡ್ 19 ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯದ ವೇಳೆಗೆ ತಿರುಗಾಟಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿದ್ದು, ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕೆಲಸಗಾರರಿದ್ದಾರೆ. ಈ ಬಾರಿ ಕೊರೊನಾದಿಂದಾಗಿ ಯಕ್ಷಗಾನ ನಡೆಯದೆ ಕಲಾವಿದರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮತ್ತೆ ತಿರುಗಾಟಕ್ಕೆ ಸಮಯ ಬಂದರೂ, ಸರಕಾರದ ಕಡೆಯಿಂದ ಸೂಚನೆ ಬಂದಿರಲಿಲ್ಲ. ಈ ನಿಟ್ಟಿನಲ್ಲಿ ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಅವಕಾಶ ನೀಡಬೇಕೆಂದು ಮುಜರಾಯಿ ಸಚಿವರಿಗೆ ಕಲಾವಿದರು ಮತ್ತು ಮೇಳದ ವ್ಯವಸ್ಥಾಪಕರು ಸೇರಿ ಮನವಿ ಸಲ್ಲಿಸಿದ್ದರು.

ಕಲಾವಿದರ ಪರವಾಗಿ ಭಾಗವತ ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಉಜಿರೆ ಅಶೋಕ್ ಭಟ್, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಸ್ಯ ಕಲಾವಿದ ಸೀತಾರಾಮ್ ಕುಮಾರ್ ಸೇರಿದಂತೆ ಕಲಾವಿದರು ಮತ್ತು ಮೇಳದ ಪ್ರಮುಖರು ಸಚಿವರನ್ನು ಭೇಟಿಯಾಗಿದ್ದರು. ವೃತ್ತಿಪರ ಯಕ್ಷಗಾನ ಮೇಳಗಳು ನಿಂತಲ್ಲಿ ಕಲಾವಿದರ ಬದುಕು ದುಸ್ತರ ಆಗಲಿದೆ. ಈಗಾಗಲೇ ಕೋವಿಡ್ ಕಾರಣದಿಂದ ನೊಂದ ಕಲಾವಿದರ ನೆರವಿಗೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಮೇಳಗಳ ಸಹಿತ ಕಲಾವಿದರು ಮತ್ತು ವೃತ್ತಿಪರ ಮೇಳಗಳ ಸಮಸ್ಯೆಗಳನ್ನು ವಿವರಿಸಿದರು.
ಈಗಿರುವ ಮೇಳಗಳಲ್ಲಿ ಯಾವುದೇ ಆದರೂ ನಿಲುಗಡೆಯಾದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಸಂಪನ್ಮೂಲವಿರುವ ದೇವಳದ ಮೂಲಕ ಹೆಚ್ಚುವರಿ ಮೇಳಗಳನ್ನು ರಚಿಸಲು ಇಲಾಖೆ ಪರಿಶೀಲಿಸ ಬೇಕೆಂಬ ಮನವಿ ಸಭೆಯಲ್ಲಿ ಕೇಳಿಬಂತು.
ಸರ್ಕಾರದ ಪರವಾಗಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಇಂತಹ ಪರಿಸ್ಥಿತಿಯಲ್ಲಿ ಯಕ್ಷಗಾನ ಮೇಳಗಳ ಕೊನೆಯ ಕಲಾವಿದನಿಗೂ ತೊಂದರೆ ಆಗದಂತೆ ಸರ್ಕಾರ ಕಲಾವಿದರ ಬೆಂಬಲಕ್ಕೆ ನಿಲ್ಲಲಿದೆ ಎಂದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಉಪಸ್ಥಿತರಿದ್ದರು.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am