ಬ್ರೇಕಿಂಗ್ ನ್ಯೂಸ್
06-10-20 08:47 pm Mangalore Correspondent ಕರಾವಳಿ
ಮಂಗಳೂರು, ಅಕ್ಟೋಬರ್ 6: ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೋವಿಡ್ 19 ನಿಯಮಗಳನ್ನು ಅಳವಡಿಸಿಕೊಂಡು ನವೆಂಬರ್ ಅಂತ್ಯದ ವೇಳೆಗೆ ತಿರುಗಾಟಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಸೇರಿದಂತೆ 20ಕ್ಕೂ ಹೆಚ್ಚು ವೃತ್ತಿಪರ ತೆಂಕುತಿಟ್ಟಿನ ಯಕ್ಷಗಾನ ಮೇಳಗಳಿದ್ದು, ಸರಿ ಸುಮಾರು ಒಂದು ಸಾವಿರಕ್ಕೂ ಹೆಚ್ಚು ಕೆಲಸಗಾರರಿದ್ದಾರೆ. ಈ ಬಾರಿ ಕೊರೊನಾದಿಂದಾಗಿ ಯಕ್ಷಗಾನ ನಡೆಯದೆ ಕಲಾವಿದರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಮತ್ತೆ ತಿರುಗಾಟಕ್ಕೆ ಸಮಯ ಬಂದರೂ, ಸರಕಾರದ ಕಡೆಯಿಂದ ಸೂಚನೆ ಬಂದಿರಲಿಲ್ಲ. ಈ ನಿಟ್ಟಿನಲ್ಲಿ ಯಕ್ಷಗಾನ ಮೇಳಗಳ ತಿರುಗಾಟಕ್ಕೆ ಅವಕಾಶ ನೀಡಬೇಕೆಂದು ಮುಜರಾಯಿ ಸಚಿವರಿಗೆ ಕಲಾವಿದರು ಮತ್ತು ಮೇಳದ ವ್ಯವಸ್ಥಾಪಕರು ಸೇರಿ ಮನವಿ ಸಲ್ಲಿಸಿದ್ದರು.

ಕಲಾವಿದರ ಪರವಾಗಿ ಭಾಗವತ ಪಟ್ಲ ಸತೀಶ್ ಶೆಟ್ಟಿ, ಸರಪಾಡಿ ಅಶೋಕ್ ಶೆಟ್ಟಿ, ಉಜಿರೆ ಅಶೋಕ್ ಭಟ್, ರಾಜ್ಯೋತ್ಸವ ಪ್ರಶಸ್ತಿ ವಿಜೇತ ಹಾಸ್ಯ ಕಲಾವಿದ ಸೀತಾರಾಮ್ ಕುಮಾರ್ ಸೇರಿದಂತೆ ಕಲಾವಿದರು ಮತ್ತು ಮೇಳದ ಪ್ರಮುಖರು ಸಚಿವರನ್ನು ಭೇಟಿಯಾಗಿದ್ದರು. ವೃತ್ತಿಪರ ಯಕ್ಷಗಾನ ಮೇಳಗಳು ನಿಂತಲ್ಲಿ ಕಲಾವಿದರ ಬದುಕು ದುಸ್ತರ ಆಗಲಿದೆ. ಈಗಾಗಲೇ ಕೋವಿಡ್ ಕಾರಣದಿಂದ ನೊಂದ ಕಲಾವಿದರ ನೆರವಿಗೆ ಸರ್ಕಾರ ಸಹಾಯಹಸ್ತ ಚಾಚಬೇಕು ಎಂದು ಮನವಿ ಮಾಡಿದರು. ಈ ಬಗ್ಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಟೀಲು, ಬಪ್ಪನಾಡು, ಸಸಿಹಿತ್ಲು ಮೇಳಗಳ ಸಹಿತ ಕಲಾವಿದರು ಮತ್ತು ವೃತ್ತಿಪರ ಮೇಳಗಳ ಸಮಸ್ಯೆಗಳನ್ನು ವಿವರಿಸಿದರು.
ಈಗಿರುವ ಮೇಳಗಳಲ್ಲಿ ಯಾವುದೇ ಆದರೂ ನಿಲುಗಡೆಯಾದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಸಂಪನ್ಮೂಲವಿರುವ ದೇವಳದ ಮೂಲಕ ಹೆಚ್ಚುವರಿ ಮೇಳಗಳನ್ನು ರಚಿಸಲು ಇಲಾಖೆ ಪರಿಶೀಲಿಸ ಬೇಕೆಂಬ ಮನವಿ ಸಭೆಯಲ್ಲಿ ಕೇಳಿಬಂತು.
ಸರ್ಕಾರದ ಪರವಾಗಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿಯವರು ಇಂತಹ ಪರಿಸ್ಥಿತಿಯಲ್ಲಿ ಯಕ್ಷಗಾನ ಮೇಳಗಳ ಕೊನೆಯ ಕಲಾವಿದನಿಗೂ ತೊಂದರೆ ಆಗದಂತೆ ಸರ್ಕಾರ ಕಲಾವಿದರ ಬೆಂಬಲಕ್ಕೆ ನಿಲ್ಲಲಿದೆ ಎಂದರು. ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಮತ್ತು ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಉಪಸ್ಥಿತರಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm