ಬ್ರೇಕಿಂಗ್ ನ್ಯೂಸ್
01-09-22 10:26 pm Mangalore Correspondent ಕರಾವಳಿ
ಉಳ್ಳಾಲ, ಸೆ.1 : ದೇರಳಕಟ್ಟೆಯ ಕಣಚೂರು ಆಸ್ಪತ್ರೆಯಲ್ಲಿ ಉತ್ತರ ಕರ್ನಾಟಕ ಮೂಲದ ಕೂಲಿ ಕಾರ್ಮಿಕರನ್ನ ರೋಗಿಗಳಂತೆ ಮಲಗಿಸಿ ಮಜೂರಿ ನೀಡದೆ ವಂಚಿಸಿರುವುದರ ವಿರುದ್ಧ ಉಳ್ಳಾಲ ಠಾಣೆಯಲ್ಲಿ ದೂರು ದಾಖಲಾಗಿದ್ದು ಇಂತಹ ಗಂಭೀರ ಮೆಡಿಕಲ್ ಮಾಫಿಯಾದ ವಿರುದ್ದ ಸಿಬಿಐ ತನಿಖೆ ನಡೆಯಬೇಕೆಂಬ ಆಗ್ರಹ ವ್ಯಕ್ತವಾಗಿದೆ.
ಮಂಗಳೂರಿನ ಕಾವೂರಲ್ಲಿ ಬಿಡಾರ ಹೂಡಿರುವ ಉತ್ತರ ಕರ್ನಾಟಕ ಮೂಲದ ಕಟ್ಟಡ ಕಾಮಗಾರಿ ಕೂಲಿ ಕಾರ್ಮಿಕರನ್ನ ಕಳೆದ ಆಗಸ್ಟ್ 10 ರಂದು ಮಧ್ಯವರ್ತಿಗಳಾದ ಪ್ರಸನ್ನ ಶೆಣೈ , ಬಸವರಾಜ್, ಲಕ್ಷ್ಮಿ ಎಂಬವರು ಕಣಚೂರು ಆಸ್ಪತ್ರೆಯ ಬಸ್ಸಿನಲ್ಲಿ ಸಣ್ಣ ಮಕ್ಕಳನ್ನೂ ಸೇರಿಸಿ ಒಟ್ಟು ನೂರು ಮಂದಿಯನ್ನ ದಿವಸಕ್ಕೆ ತಲೆಗೆ ಒಂದು ಸಾವಿರ ಸಂಬಳ ಕೊಟ್ಟು ಕೆಲಸ ಕೊಡಿಸೋದಾಗಿ ಕೊಂಡೊಯ್ದು ಆಸ್ಪತ್ರೆಯಲ್ಲಿ ಮಲಗಿಸಿದ್ದರು ಎಂಬ ಆರೋಪ ಕೇಳಿಬಂದಿದೆ. ಕಣಚೂರು ಆಸ್ಪತ್ರೆಗೆ ಹೋದ ಕೂಲಿ ಕಾರ್ಮಿಕರಿಗೆ ಆಸ್ಪತ್ರೆಯ ಕಾರ್ಡ್ ಕೊಟ್ಟು, ಕೈ , ಕಾಲುಗಳಿಗೆ ಬ್ಯಾಂಡೇಜ್ ಸುತ್ತಿಸಿ ಬೆಡ್ಡಲ್ಲಿ ರೋಗಿಗಳಂತೆ ಹತ್ತು ದಿವಸ ಮಲಗುವುದಲ್ಲದೆ, ಕೆಲವರಲ್ಲಿ ತಮಗೆ ಬಿಪಿ, ಶುಗರ್ ಇದೆ ಎಂದು ಸುಳ್ಳು ಹೇಳುವಂತೆ ಮಧ್ಯವರ್ತಿಗಳು ಸೂಚಿಸಿದ್ದರು ಎನ್ನಲಾಗಿದೆ.



ಅಲ್ಲದೆ, ಸಣ್ಣ ಮಕ್ಕಳನ್ನ ಪ್ರತ್ಯೇಕ ವಾರ್ಡಲ್ಲಿ ಮಲಗಿಸಿದ್ದರು. ಆಗಸ್ಟ್ 21 ರಂದು ಕಾರ್ಮಿಕರಿಗೆ ತಲಾ 4 ಸಾವಿರ ರೂಪಾಯಿಗಳನ್ನ ಕೊಟ್ಟು ಕಳುಹಿಸಿದ್ದು ಬಾಕಿ ಇದ್ದ 6 ಸಾವಿರ ಹಣವನ್ನ ನೀಡದೆ ವಂಚಿಸಿದ್ದಾರೆ.ಸಂತ್ರಸ್ತ ಕೂಲಿ ಕಾರ್ಮಿಕರು ದಿಕ್ಕು ಕಾಣದೆ ನಿನ್ನೆ ಉಳ್ಳಾಲ ಠಾಣೆಗೆ ವಂಚಕರ ವಿರುದ್ಧ ದೂರು ನೀಡಲು ತೆರಳಿದ್ದರು. ಆದರೆ ಠಾಣೆಯ ಪಿಎಸ್ ಐ ಪ್ರದೀಪ್ ಅವರು ಅಮಾಯಕ ಕೂಲಿ ಕಾರ್ಮಿಕರನ್ನ ಠಾಣೆಯಿಂದ ಹೊರಗಟ್ಟಿ ದರ್ಪ ಮೆರೆದಿದ್ದರು. ನೊಂದ ಕೂಲಿ ಕಾರ್ಮಿಕರಿಗೆ ಸ್ಥಳೀಯ ಸಾಮಾಜಿಕ ಕಾರ್ಯಕರ್ತ ರಿಯಾಝ್ ಎಂಬವರು ನಿನ್ನೆ ರಾತ್ರಿ ಉಳಿಯಲು ಜಾಗ, ಊಟ, ಇಂದು ಬೆಳಗ್ಗಿನ ಉಪಹಾರದ ವ್ಯವಸ್ಥೆ ಮಾಡಿದ್ದರು.


ಪ್ರಕರಣದಲ್ಲಿ ಸಂತ್ರಸ್ತರ ಪರವಾಗಿ ನಿಂತ ಶಶಿಧರ್ ಶೆಟ್ಟಿ ಅವರು ಉಳ್ಳಾಲ ಪೊಲೀಸರಲ್ಲಿ ಮಾತುಕತೆ ನಡೆಸಿ ತಪ್ಪಿತಸ್ಥರ ವಿರುದ್ಧ ಸಂತ್ರಸ್ತರಿಂದ ದೂರು ದಾಖಲಿಸಿದ್ದಾರೆ. ಈ ವೇಳೆ ಮಾತನಾಡಿದ ಅವರು ಇಂಡಿಯನ್ ಮೆಡಿಕಲ್ ಕೌನ್ಸಿಲ್ ಗೆ ಸದಸ್ಯರಾಗಲು ಕೋಟಿ ನೀಡಿ ಬಂದವರು ಅದನ್ನ ಮತ್ತೆ ವಾಪಸ್ ಪಡೆಯಲು ಈ ರೀತಿಯ ಕೆಲಸಕ್ಕೆ ಕೈ ಹಾಕುತ್ತಿದ್ದಾರೆ. ಮೆಡಿಕಲ್ ಕಾಲೇಜುಗಳು ಕೂಲಿ ಕಾರ್ಮಿಕರನ್ನ ಆಸ್ಪತ್ರೆಯಲ್ಲಿ ಮಲಗಿಸಿ ಅವರನ್ನ ಐ.ಎಂಸಿ ಸಂದರ್ಶನ ವೇಳೆ ರೋಗಿಗಳಂತೆ ತೋರಿಸಿ ತಮ್ಮ ಮೆಡಿಕಲ್ ಸೀಟ್ ಗಳನ್ನ ಜಾಸ್ತಿ ಮಾಡುವ ದಂಧೆ ವಿರುದ್ಧ ಈ ಹಿಂದೆಯೇ ಧ್ವನಿ ಎತ್ತಿದ್ದೆ. ಇದೀಗ ಉಳ್ಳಾಲದಲ್ಲಿ ಅದು ಸಾಕ್ಷ್ಯ ಸಮೇತ ಸಾಬೀತಾಗಿದೆ. ಇದು ಸಣ್ಣ ವಿಚಾರ ಅಲ್ಲ, ಈ ಬಗ್ಗೆ ತಾನು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದು ಹಗರಣದ ಬಗ್ಗೆ ಸಿಬಿಐ ತನಿಖೆ ಆಗಬೇಕೆಂದು ಅವರು ಒತ್ತಾಯಿಸಿದ್ದಾರೆ.

ನೂರು ಕೂಲಿ ಕಾರ್ಮಿಕರಿಗೆ ಒಟ್ಟು 6 ಲಕ್ಷ ರೂಪಾಯಿ ಮಜೂರಿ ನೀಡದೆ ಸತಾಯಿಸಿದ ಐನಾತಿಗಳ ವಿರುದ್ಧ ಇದೀಗ ಸಂತ್ರಸ್ತರು ಉಳ್ಳಾಲ ಠಾಣೆಯಲ್ಲಿ ದೂರು ದಾಖಲಿಸಿದ್ದು, ಸಾಮಾಜಿಕ ಕಾರ್ಯಕರ್ತರು ಅಲ್ಲದೆ ಸಿಪಿಐಎಂ ಪಕ್ಷದ ಮುಖಂಡರಾದ ಜಯಂತ್ ನಾಯ್ಕ್, ಇಬ್ರಾಹಿಂ ಅಂಬ್ಲಮೊಗರು, ರಫೀಕ್ ಹರೇಕಳ ಅವರ ಸಹಕಾರದಿಂದ ಸಂತ್ರಸ್ತರು ಮತ್ತೆ ತಮ್ಮ ಬಿಡಾರ ಕಾವೂರಿಗೆ ತೆರಳಿದ್ದಾರೆ.
Poor families fight for justice against Kanachur hospital continues case registered at Ullal police station.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm