ಬ್ರೇಕಿಂಗ್ ನ್ಯೂಸ್
03-09-22 08:03 pm Mangalore Correspondent ಕರಾವಳಿ
ಉಳ್ಳಾಲ, ಆ.3: ಒಂದು ಕಾಲದಲ್ಲಿ ಹಿಂದೂ ಯುವ ಸೇನೆಯಲ್ಲಿ ಪ್ರಭಾವಿ ಮುಖಂಡರಾಗಿ ಗುರುತಿಸಿಕೊಂಡಿದ್ದ ಜಯಂತ್ ಎಸ್. ಕುಂಪಲ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕುಂಪಲದ ಕೃಷ್ಣನಗರ ಎರಡನೇ ಅಡ್ಡ ರಸ್ತೆಯ ಬಾಡಿಗೆ ನಿವಾಸದಲ್ಲಿ ಯಾರೂ ಇಲ್ಲದ ವೇಳೆ ಜಯಂತ್ (49) ಅವರು ಶನಿವಾರ ಅಪರಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪತ್ನಿ ಸಂಜೆ ಕೆಲಸ ಮುಗಿಸಿ ಮನೆಗೆ ಹಿಂತಿರುಗಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಜಯಂತ್ ಅವರು ಬಾಡಿಗೆ ಮನೆಯ ಒಳಗಡೆ ಹಾಲ್ ನಲ್ಲಿಯೇ ಚೂಡಿದಾರದ ಶಾಲಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿದ್ದಾರೆ.
ಜಯಂತ್ ಅವರು ಸಕ್ರಿಯ ಹಿಂದು ಸಂಘಟನೆ ಕಾರ್ಯಕರ್ತರಾಗಿದ್ದು ಹಣಕಾಸು ನಷ್ಟದ ಬಳಿಕ ತೊಕ್ಕೊಟ್ಟಿನಲ್ಲಿ ರಿಕ್ಷಾ ಚಲಾಯಿಸುತ್ತಿದ್ದರು. ನಿನ್ನೆ ಮಂಗಳೂರಿನ ಬಂಗ್ರ ಕೂಳೂರಲ್ಲಿ ನಡೆದ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರು ಜನರ ನಡುವೆ ತನ್ನ ಸ್ಮಾರ್ಟ್ ಫೋನನ್ನ ಕಳಕೊಂಡಿದ್ದರು. ಈ ಬಗ್ಗೆ ಇಂದು ಮಧ್ಯಾಹ್ನದ ವರೆಗೂ ಅನೇಕ ಸ್ನೇಹಿತರಲ್ಲಿ ಹೇಳಿಕೊಂಡಿದ್ದರು.
ಮೃತ ಜಯಂತ್ ಅವರು ಕುಂಪಲ, ಹನುಮಾನ್ ನಗರದ ವೀರಾಂಜನೇಯ ವ್ಯಾಯಾಮ ಶಾಲೆ ಬಳಿಯ ತನ್ನ ಜಾಗದಲ್ಲಿ ಹೊಸತಾಗಿ ಗೃಹ ನಿರ್ಮಾಣ ಮಾಡುತ್ತಿದ್ದರು. ಕಾಮಗಾರಿ ಸಂಪೂರ್ಣಗೊಳ್ಳುತ್ತಿದ್ದ ವೇಳೆಯೇ ಅವರು ಆತ್ಮಹತ್ಯೆಗೈದಿದ್ದು ಅವರ ಪತ್ನಿ , ಇಬ್ಬರು ಗಂಡು ಮಕ್ಕಳನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ.
ಉಳ್ಳಾಲ ಪೊಲೀಸ್ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿ ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
Mangalore Hindu yuvasena leader Jayanth Kumpala commits suicide in Ullal. He had attended Modis program held by Bjp at Gold finch city and had lost his cell phone. He was telling his friends about it but suddenly afternoon he was found hanging at his house.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm