ಬ್ರೇಕಿಂಗ್ ನ್ಯೂಸ್
03-09-22 09:06 pm Mangalore Correspondent ಕರಾವಳಿ
ಉಳ್ಳಾಲ, ಆ.3 : ಕೈರಂಗಳ ಶಾರದಾ ಗಣಪತಿ ವಿದ್ಯಾಕೇಂದ್ರ ಸಂಚಾಲಕರೂ, ಧಾರ್ಮಿಕ ಮುಖಂಡರಾದ ಟಿ.ಜಿ ರಾಜಾರಾಂ ಭಟ್ ಅವರು ದಾನಿಗಳ ನೆರವಿಂದ ಅಶಕ್ತರಿಗಾಗಿ ಆರಂಭಿಸಿದ "ಆಸರೆ" ನೆರವಿನ ಹಸ್ತದ ಎರಡನೇ ಯೋಜನೆಯಡಿ ಗದಗ ಮೂಲದ ದಿ.ಶರಣಪ್ಪ ಅವರ ಕುಟುಂಬಕ್ಕೆ ಸುಸಜ್ಜಿತ ಗ್ರಾನೈಟ್ ನೆಲದ ತಾರಸಿ ಮನೆಯನ್ನ ನಿರ್ಮಿಸಿ ಕೊಟ್ಟಿದ್ದಾರೆ.
ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಗದಗ ಮೂಲದ ದಿ.ಶರಣಪ್ಪ ಅವರ ಮಕ್ಕಳಿಗೆ ನಿರ್ಮಿಸಿದ ಸುಸಜ್ಜಿತ "ಆಸರೆ" ಮನೆಯ ಕೀಲಿ ಕೈಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರು ಶನಿವಾರ ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಅವರು ರಾಜಾರಾಮ್ ಭಟ್ ಅವರ ಕನಸಿನ ಅಶಕ್ತರ ಪಾಲಿನ ಆಶಾಕಿರಣವಾದ ಆಸರೆ ಮನೆಗಳು ದಾನಿಗಳು ಹಾಗೂ ಶ್ರಮಜೀವಿಗಳ ಕೊಡುಗೆ ಎಂದರು. ಪ್ರಸ್ತುತ ನಮ್ಮ ದೇಶದಲ್ಲಿ ಜನರು ಹಕ್ಕು ಮಾತ್ರ ಕೇಳುತ್ತಿದ್ದಾರೆಯೇ ಹೊರತು ತಮ್ಮ ಕರ್ತವ್ಯ, ಜವಬ್ದಾರಿಗಳನ್ನ ಮರೆಯುತ್ತಿದ್ದಾರೆ. ನೆರವಿನ ಆಸರೆಯಂತಹ ಕಾರ್ಯಕ್ರಮಗಳು ಸದಾ ಕಾಲ ಜನಮನ್ನಣೆಗೆ ಪಾತ್ರವಾಗಲಿದೆ ಎಂದರು.





ಆಸರೆ ಯೋಜನೆಯ ಮನೆಗಳ ನಿರ್ಮಾಣದ ರೂವಾರಿ ಟಿ.ಜಿ. ರಾಜಾರಾಂ ಭಟ್ ಮಾತನಾಡಿ, ನಮ್ಮ ಯೋಜನೆಯ ಮೊದಲ ಮನೆಯನ್ನ ನರಿಂಗಾನ ಗ್ರಾಮದ ಅಂಬುಗದ ನಾರಾಯಣ ಪೂಜಾರಿಯವರಿಗೆ ನಿರ್ಮಿಸಿ ಕೊಡಲಾಗಿತ್ತು. ಇದೀಗ ಎರಡನೇ ಮನೆಯನ್ನ ಶರಣಪ್ಪ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ನೂಜಿಪಡ್ಪುವಿನ ಮಾಧವ ಪೂಜಾರಿಯವರಿಗೆ ಮೂರನೇ ಮನೆ, ಚೇಳೂರಿನ ಸುರೇಶ್ ಪೂಜಾರಿಗೆ ನಾಲ್ಕನೇ ಮನೆ ಹಾಗೂ ಐದನೆಯದಾಗಿ ತಲೆಮುಗೇರಿನ ಕಮಲಾ ಪೂಜಾರ್ತಿ ಅವರ ಕುಟುಂಬಕ್ಕೆ ನಿರ್ಮಿಸಿ ಕೊಡಲು ಯೋಜನೆ ರೂಪಿಸಲಾಗಿದೆ. ದಾನಿಗಳ ನೆರವು, ದುಡಿದ ಸಂಬಳ ಪಡೆಯದ ಗುತ್ತಿಗೆದಾರರು, ಶ್ರಮದಾನಗೈದ ಶ್ರಮಜೀವಿಗಳ ನೆರವಿನಿಂದ ನಿರ್ಮಾಣವಾಗುತ್ತಿರುವ ಆಸರೆ ಮನೆಗಳನ್ನ ಇನ್ನಷ್ಟು ನಿರ್ಮಿಸುವ ಮಹಾದಾಸೆ ಇರಿಸಿರುವುದಾಗಿ ಹೇಳಿದರು.



ಆಸರೆ ಯೋಜನೆಯ ಎರಡನೇ ಫಲಾನುಭವಿ ದಿ.ಶರಣಪ್ಪ ಅವರ ಪುತ್ರ ಈಶ್ವರ್ ಮಾತನಾಡಿ, ನಮ್ಮ ಕುಟುಂಬ ಕಳೆದ ಮೂವತ್ತು ವರುಷಗಳಿಂದಲೂ ಇಲ್ಲಿ ನೆಲೆಸಿದೆ. ಇರೋಕೊಂದು ಸ್ವಲ್ಪ ಜಾಗ, ಅದರಲ್ಲಿ ತರ್ಪಾಲಿನ ಜೋಪಡಿಯಲ್ಲಿ ನಮ್ಮ ಕುಟುಂಬ ವಾಸವಿತ್ತು. ರಾಜಾರಾಂ ಭಟ್ ಅವರು ನಮಗೆ ವಾಸ್ತು ಪ್ರಕಾರ, ದೊಡ್ಡವರಂತೆಯೇ ಇರುವ ಸುಸಜ್ಜಿತ ಮನೆ ನಿರ್ಮಿಸಿ ಕೊಟ್ಟಿದ್ದು , ಅವರನ್ನ ಜೀವನ ಪರ್ಯಂತ ನಾವು ಮರೆಯೋದಿಲ್ಲವೆಂದು ಹೇಳಿದರು.
ಕೈರಂಗಳ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಚೌಟ ಉಳಿಪಾಡಿಗುತ್ತು, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.
TJ Raja ram Bhatc constructs story building for the poor family at Ballepuni
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm