ಬ್ರೇಕಿಂಗ್ ನ್ಯೂಸ್
03-09-22 09:06 pm Mangalore Correspondent ಕರಾವಳಿ
ಉಳ್ಳಾಲ, ಆ.3 : ಕೈರಂಗಳ ಶಾರದಾ ಗಣಪತಿ ವಿದ್ಯಾಕೇಂದ್ರ ಸಂಚಾಲಕರೂ, ಧಾರ್ಮಿಕ ಮುಖಂಡರಾದ ಟಿ.ಜಿ ರಾಜಾರಾಂ ಭಟ್ ಅವರು ದಾನಿಗಳ ನೆರವಿಂದ ಅಶಕ್ತರಿಗಾಗಿ ಆರಂಭಿಸಿದ "ಆಸರೆ" ನೆರವಿನ ಹಸ್ತದ ಎರಡನೇ ಯೋಜನೆಯಡಿ ಗದಗ ಮೂಲದ ದಿ.ಶರಣಪ್ಪ ಅವರ ಕುಟುಂಬಕ್ಕೆ ಸುಸಜ್ಜಿತ ಗ್ರಾನೈಟ್ ನೆಲದ ತಾರಸಿ ಮನೆಯನ್ನ ನಿರ್ಮಿಸಿ ಕೊಟ್ಟಿದ್ದಾರೆ.
ಬಾಳೆಪುಣಿ ಗ್ರಾಮದ ಕುಕ್ಕುದಕಟ್ಟೆ ಎಂಬಲ್ಲಿ ಗದಗ ಮೂಲದ ದಿ.ಶರಣಪ್ಪ ಅವರ ಮಕ್ಕಳಿಗೆ ನಿರ್ಮಿಸಿದ ಸುಸಜ್ಜಿತ "ಆಸರೆ" ಮನೆಯ ಕೀಲಿ ಕೈಯನ್ನು ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರು ಶನಿವಾರ ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಈ ವೇಳೆ ಮಾತನಾಡಿದ ಅವರು ರಾಜಾರಾಮ್ ಭಟ್ ಅವರ ಕನಸಿನ ಅಶಕ್ತರ ಪಾಲಿನ ಆಶಾಕಿರಣವಾದ ಆಸರೆ ಮನೆಗಳು ದಾನಿಗಳು ಹಾಗೂ ಶ್ರಮಜೀವಿಗಳ ಕೊಡುಗೆ ಎಂದರು. ಪ್ರಸ್ತುತ ನಮ್ಮ ದೇಶದಲ್ಲಿ ಜನರು ಹಕ್ಕು ಮಾತ್ರ ಕೇಳುತ್ತಿದ್ದಾರೆಯೇ ಹೊರತು ತಮ್ಮ ಕರ್ತವ್ಯ, ಜವಬ್ದಾರಿಗಳನ್ನ ಮರೆಯುತ್ತಿದ್ದಾರೆ. ನೆರವಿನ ಆಸರೆಯಂತಹ ಕಾರ್ಯಕ್ರಮಗಳು ಸದಾ ಕಾಲ ಜನಮನ್ನಣೆಗೆ ಪಾತ್ರವಾಗಲಿದೆ ಎಂದರು.





ಆಸರೆ ಯೋಜನೆಯ ಮನೆಗಳ ನಿರ್ಮಾಣದ ರೂವಾರಿ ಟಿ.ಜಿ. ರಾಜಾರಾಂ ಭಟ್ ಮಾತನಾಡಿ, ನಮ್ಮ ಯೋಜನೆಯ ಮೊದಲ ಮನೆಯನ್ನ ನರಿಂಗಾನ ಗ್ರಾಮದ ಅಂಬುಗದ ನಾರಾಯಣ ಪೂಜಾರಿಯವರಿಗೆ ನಿರ್ಮಿಸಿ ಕೊಡಲಾಗಿತ್ತು. ಇದೀಗ ಎರಡನೇ ಮನೆಯನ್ನ ಶರಣಪ್ಪ ಅವರ ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ನೂಜಿಪಡ್ಪುವಿನ ಮಾಧವ ಪೂಜಾರಿಯವರಿಗೆ ಮೂರನೇ ಮನೆ, ಚೇಳೂರಿನ ಸುರೇಶ್ ಪೂಜಾರಿಗೆ ನಾಲ್ಕನೇ ಮನೆ ಹಾಗೂ ಐದನೆಯದಾಗಿ ತಲೆಮುಗೇರಿನ ಕಮಲಾ ಪೂಜಾರ್ತಿ ಅವರ ಕುಟುಂಬಕ್ಕೆ ನಿರ್ಮಿಸಿ ಕೊಡಲು ಯೋಜನೆ ರೂಪಿಸಲಾಗಿದೆ. ದಾನಿಗಳ ನೆರವು, ದುಡಿದ ಸಂಬಳ ಪಡೆಯದ ಗುತ್ತಿಗೆದಾರರು, ಶ್ರಮದಾನಗೈದ ಶ್ರಮಜೀವಿಗಳ ನೆರವಿನಿಂದ ನಿರ್ಮಾಣವಾಗುತ್ತಿರುವ ಆಸರೆ ಮನೆಗಳನ್ನ ಇನ್ನಷ್ಟು ನಿರ್ಮಿಸುವ ಮಹಾದಾಸೆ ಇರಿಸಿರುವುದಾಗಿ ಹೇಳಿದರು.



ಆಸರೆ ಯೋಜನೆಯ ಎರಡನೇ ಫಲಾನುಭವಿ ದಿ.ಶರಣಪ್ಪ ಅವರ ಪುತ್ರ ಈಶ್ವರ್ ಮಾತನಾಡಿ, ನಮ್ಮ ಕುಟುಂಬ ಕಳೆದ ಮೂವತ್ತು ವರುಷಗಳಿಂದಲೂ ಇಲ್ಲಿ ನೆಲೆಸಿದೆ. ಇರೋಕೊಂದು ಸ್ವಲ್ಪ ಜಾಗ, ಅದರಲ್ಲಿ ತರ್ಪಾಲಿನ ಜೋಪಡಿಯಲ್ಲಿ ನಮ್ಮ ಕುಟುಂಬ ವಾಸವಿತ್ತು. ರಾಜಾರಾಂ ಭಟ್ ಅವರು ನಮಗೆ ವಾಸ್ತು ಪ್ರಕಾರ, ದೊಡ್ಡವರಂತೆಯೇ ಇರುವ ಸುಸಜ್ಜಿತ ಮನೆ ನಿರ್ಮಿಸಿ ಕೊಟ್ಟಿದ್ದು , ಅವರನ್ನ ಜೀವನ ಪರ್ಯಂತ ನಾವು ಮರೆಯೋದಿಲ್ಲವೆಂದು ಹೇಳಿದರು.
ಕೈರಂಗಳ ವ್ಯವಸಾಯ ಸೇವಾ ಸಹಕಾರ ಸಂಘದ ಅಧ್ಯಕ್ಷ ಮಹೇಶ್ ಚೌಟ ಉಳಿಪಾಡಿಗುತ್ತು, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ರೈ ಬೋಳಿಯಾರ್ ಮೊದಲಾದವರು ಉಪಸ್ಥಿತರಿದ್ದರು.
TJ Raja ram Bhatc constructs story building for the poor family at Ballepuni
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:07 pm
HK News Desk
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm