ಬ್ರೇಕಿಂಗ್ ನ್ಯೂಸ್
04-09-22 06:07 pm Mangalore Correspondent ಕರಾವಳಿ
ಮಂಗಳೂರು, ಸೆ.4: ಪಂಚವಟಿ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿ ಹೆಸರಲ್ಲಿ ಸಾವಿರಾರು ಮಂದಿಗೆ ಮೋಸ ಎಸಗಲಾಗಿದ್ದು, ಈ ಬಗ್ಗೆ ಮಂಗಳೂರಿನ ಪೊಲೀಸರಿಗೆ ದೂರು ನೀಡಿದರೂ ಎಫ್ಐಆರ್ ದಾಖಲಾಗಿಲ್ಲ. ಕೂಡಲೇ ಸೊಸೈಟಿ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲಿಸಿ ಆರೋಪಿತರನ್ನು ಬಂಧಿಸುವಂತೆ ಆಗ್ರಹಿಸಿ ಸೆ.5ರಂದು ಬೆಳಗ್ಗೆ ಹತ್ತು ಗಂಟೆಗೆ ನಗರದ ಕ್ಲಾಕ್ ಟವರ್ ಎದುರಲ್ಲಿ ಪ್ರತಿಭಟನೆ ಆಯೋಜಿಸಲಾಗಿದೆ.

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಆಶ್ರಯದಲ್ಲಿ ಸಂತ್ರಸ್ತರ ಪ್ರತಿಭಟನೆ ನಡೆಯಲಿದೆ. ನೂರಾರು ಸಂತ್ರಸ್ತರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕೆಆರ್ ಎಸ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಲೆಕ್ಸಾಂಡರ್ ಡಿಸೋಜ ತಿಳಿಸಿದ್ದಾರೆ. ಮಂಗಳೂರು, ಉಡುಪಿ, ಬೆಂಗಳೂರು, ತುಮಕೂರು, ಮೈಸೂರು ಸೇರಿದಂತೆ ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಕಚೇರಿ ಹೊಂದಿದ್ದ ಪಂಚವಟಿ ಸೊಸೈಟಿಯಲ್ಲಿ ಸಾವಿರಾರು ಮಂದಿ ಕೋಟ್ಯಂತರ ರೂಪಾಯಿ ಹಣ ಹೂಡಿಕೆ ಮಾಡಿದ್ದರು. ಆದರೆ ಸೊಸೈಟಿಯವರು ದಿಢೀರ್ ಆಗಿ ಕಚೇರಿಯನ್ನು ಬಂದ್ ಮಾಡಿದ್ದು, ಭಾರೀ ಮೋಸ ಮಾಡಿದ್ದಾರೆ.

ಇದರಿಂದಾಗಿ ಆರ್ ಡಿ, ಡಿಪಾಸಿಟ್ ಎಂದು ಹಣ ಹೂಡಿಕೆ ಮಾಡಿದ್ದ ಬಡವರು ಈಗ ಬೀದಿಗೆ ಬೀಳುವಂತಾಗಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಅಂದಾಜು ಒಂದೂವರೆ ಸಾವಿರಕ್ಕೂ ಹೆಚ್ಚು ಮಂದಿ ಹಣ ಕಳಕೊಂಡಿದ್ದಾರೆ. ಕಳೆದ ಎರಡು ವರ್ಷಗಳಿಂದ ಸೊಸೈಟಿ ನಷ್ಟ ತೋರಿಸಿ ಕಚೇರಿ ಮುಚ್ಚಿದ್ದು, ಕಂಪನಿ ಡೈರೆಕ್ಟರ್ ಗಳು ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ, ಎಫ್ಐಆರ್ ದಾಖಲಿಸದೆ ಮೀನ ಮೇಷ ಎಣಿಸುತ್ತಿದ್ದಾರೆ. ಕೂಡಲೇ ಆರೋಪಿಗಳನ್ನು ಬಂಧಿಸಿ, ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿ ನಮ್ಮ ಹಣವನ್ನು ಹಿಂತಿರುಗಿಸಬೇಕು ಎಂದು ಸಂತ್ರಸ್ತರು ಒತ್ತಾಯ ಮಾಡಿದ್ದಾರೆ.
Panchawati Multistate Co Operative Credit Society cheats in crores, protest held by those who have lost their money on September 5th at Clock tower in Mangalore to take strict action against the directors and give justice to the oppressed. Recently Headline Karnataka exposed the scam of crores by Panchawathi.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am