ಬ್ರೇಕಿಂಗ್ ನ್ಯೂಸ್
05-09-22 04:26 pm Mangalore Correspondent ಕರಾವಳಿ
ಉಳ್ಳಾಲ, ಆ.5 : ಒಲ್ಲದ ವರನನ್ನ ಮನೆಯವರ ಒತ್ತಾಯಕ್ಕೆ ಮದುವೆಯಾಗಿದ್ದ ನವ ವಿವಾಹಿತ ಯುವತಿ ಹಸೆಮಣೆಯೇರಿದ 15 ದಿವಸದಲ್ಲೇ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಅಂಬ್ಲಮೊಗರು ಗ್ರಾಮದ ಕೋಟ್ರಗುತ್ತು ನಿವಾಸಿ ರಶ್ಮಿ ವಿಶ್ವಕರ್ಮ (24) ಮೃತ ಯುವತಿ.
ಕಳೆದ ಆಗಸ್ಟ್ 21 ರಂದು ಅಂಬ್ಲಮೊಗರಿನ ರಶ್ಮಿಯನ್ನು ಗಂಜಿಮಠ ಮೂಲದ ದುಬೈಯಲ್ಲಿ ಇಂಜಿನಿಯರ್ ಆಗಿರುವ ಸಂದೀಪ್ ಎಂಬವರಿಗೆ ಮದುವೆ ಮಾಡಲಾಗಿತ್ತು. ಏಳು ತಿಂಗಳ ಹಿಂದೆ ಸಂದೀಪ್ ಮತ್ತು ರಶ್ಮಿ ವಿವಾಹ ನಿಶ್ಚಯವಾಗಿದ್ದು ರಶ್ಮಿ ಒಲ್ಲದ ಮನಸ್ಸಲ್ಲೇ ವಿವಾಹವಾಗಿದ್ದರು ಎನ್ನಲಾಗಿದೆ.

ಈ ನಡುವೆ, ಕಳೆದ ಸೆ.3 ರಂದು ಮಂಗಳೂರಿನ ಕೋಡಿಕಲ್ ನಲ್ಲಿರುವ ರಶ್ಮಿಯ ಅಕ್ಕನ ಮನೆಯಲ್ಲಿ ನವ ವಿವಾಹಿತ ಜೋಡಿಗೆ ಔತಣ ಕೂಟ ಏರ್ಪಡಿಸಿದ್ದರು. ಅಂದು ಬೆಳಗ್ಗೆ ರಶ್ಮಿ ತನ್ನ ಮನೆಯವರಲ್ಲಿ ತಾನು ಇಲಿ ಪಾಷಾಣ ಸೇವಿಸಿರುವುದಾಗಿ ಹೇಳಿದ್ದರಂತೆ. ವಾಂತಿ ಮಾಡಿ ಅಸ್ವಸ್ಥಳಾಗಿದ್ದ ರಶ್ಮಿಯನ್ನ ಕುಟುಂಬಸ್ಥರು ದೇರಳಕಟ್ಟೆ ಖಾಸಗಿ ಅಸ್ಪತ್ರೆಗೆ ಸೇರಿಸಿದ್ದರು. ಇಂದು ಮುಂಜಾನೆ ರಶ್ಮಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ರಶ್ಮಿಯ ಪತಿ ಸಂದೀಪ್ ಅವರು ಮೂಲತಃ ಗಂಜಿ ಮಠದವರಾಗಿದ್ದರೂ ಅವರ ಕುಟುಂಬ ಮುಂಬೈಯಲ್ಲಿ ನೆಲೆಸಿತ್ತು. ಮದುವೆ ಆದ ಬಳಿಕ ರಶ್ಮಿ ಗಂಡನ ಜೊತೆ ಹೋಗದೇ ತವರು ಮನೆಯಲ್ಲಿಯೇ ಇದ್ದಳು ಎನ್ನಲಾಗುತ್ತಿದೆ. ಕೊಣಾಜೆ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
Ullal 24 year old girl commits suicide in just 24 days of her marriage in Mangalore by consuming poison. The deceased has been identified as Rashmi. She was married to Engineer husband on August 21st who was working in Dubai. She wasn't happy with her husband that's the reason she has taken this extreme step it is said.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm