ಬ್ರೇಕಿಂಗ್ ನ್ಯೂಸ್
05-09-22 09:45 pm Mangalore Correspondent ಕರಾವಳಿ
ಮಂಗಳೂರು, ಸೆ.5: ಪಂಚವಟಿ ಮಲ್ಟಿ ಸ್ಟೇಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದಿರುವ ಅಕ್ರಮ ಮತ್ತು ವಂಚನೆ ಖಂಡಿಸಿ, ಹಣ ಕಳಕೊಂಡ ಸಂತ್ರಸ್ತರು ನೂರಾರು ಸಂಖ್ಯೆಯಲ್ಲಿ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ಸಂತ್ರಸ್ತರು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಕೂಡಲೇ ಪಂಚವಟಿ ಸೊಸೈಟಿ ನಿರ್ದೇಶಕರ ವಿರುದ್ಧ ಎಫ್ಐಆರ್ ದಾಖಲಿಸಿ, ಆರೋಪಿಗಳನ್ನು ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ಬೆಳಗ್ಗೆ 10 ಗಂಟೆಯಿಂದ 12.30ರ ವರೆಗೂ ಪ್ರತಿಭಟನೆ ನಡೆದಿದ್ದು, ಉಡುಪಿ, ಕಿನ್ನಿಗೋಳಿ, ಮೂಡುಬಿದ್ರೆಯಿಂದ ಆಗಮಿಸಿದ ಸಂತ್ರಸ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.












ಬಳಿಕ ಪಂಚವಟಿ ಸೊಸೈಟಿ ವಿರುದ್ಧ ಧಿಕ್ಕಾರ ಕೂಗುತ್ತಾ ಕ್ಲಾಕ್ ಟವರ್ ಬಳಿಯಿಂದ ಕಮಿಷನರ್ ಕಚೇರಿಗೆ ಮೆರವಣಿಗೆಯಲ್ಲಿ ತೆರಳಿದ್ದು, ಕಮಿಷನರ್ ಶಶಿಕುಮಾರ್ ಅನುಪಸ್ಥಿತಿಯಲ್ಲಿ ಡಿಸಿಪಿ ಅವರಲ್ಲಿ ಮನವಿ ಪತ್ರ ನೀಡಿದ್ದಾರೆ. ಪಂಚವಟಿ ಸೊಸೈಟಿಯಿಂದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಒಂದೂವರೆ ಸಾವಿರಕ್ಕೂ ಹೆಚ್ಚು ಮಂದಿಗೆ ವಂಚನೆ ಆಗಿದೆ. ಕೋಟ್ಯಂತರ ರೂಪಾಯಿ ಹಣ ಕಳಕೊಂಡಿದ್ದಾರೆ. ಮಂಗಳೂರಿನಲ್ಲಿ ನಿರ್ದೇಶಕರಾಗಿದ್ದ ಸುಮತಿ ಹೆಗ್ಡ ಮತ್ತು ಮ್ಯಾನೇಜರ್ ಆಗಿದ್ದ ಅಕ್ಷತಾ ಅವರನ್ನು ಬಂಧಿಸಿ ಅವರ ಬಳಿಯಿರುವ ಆಸ್ತಿಯನ್ನು ಮುಟ್ಟುಗೋಲು ಹಾಕಬೇಕು. ಬೆಂಗಳೂರಿನಲ್ಲಿರುವ ಸೊಸೈಟಿ ಕಚೇರಿಯನ್ನೂ ಮುಚ್ಚಲಾಗಿದ್ದು, ಎಂಡಿ ಆಗಿದ್ದ ಎನ್.ಎಚ್. ರಾಜು ಅವರನ್ನೂ ಬಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.




2016ರಲ್ಲಿ ಮಂಗಳೂರಿನ ಮಲ್ಲಿಕಟ್ಟೆಯಲ್ಲಿ ಆರಂಭಗೊಂಡಿದ್ದ ಪಂಚವಟಿ ಸೊಸೈಟಿಯಲ್ಲಿ ಸಾವಿರಾರು ಮಂದಿ ಆರ್ ಡಿ, ಡಿಪಾಸಿಟ್ ರೂಪದಲ್ಲಿ ಹಣ ಇಟ್ಟಿದ್ದಾರೆ. ಐದು ವರ್ಷ, 9 ವರ್ಷ ಡಿಪಾಸಿಟ್ ಇಟ್ಟಲ್ಲಿ ಡಬಲ್ ಆಗುತ್ತೆ ಎಂದು ನಂಬಿಸಿದ್ದರಿಂದ ಸಾವಿರಾರು ಮಂದಿ ಲಕ್ಷಾಂತರ ರೂ. ಹಣವನ್ನು ಡಿಪಾಸಿಟ್ ಇಟ್ಟಿದ್ದಾರೆ. ಆದರೆ ಎರಡು ವರ್ಷಗಳ ಹಿಂದೆ ದಿಢೀರ್ ಆಗಿ ಸೊಸೈಟಿ ಕಚೇರಿಯನ್ನು ಬಂದ್ ಮಾಡಿದ್ದಾರೆ. ಇದರಿಂದ ಹಣ ಇಟ್ಟಿದ್ದವರಿಗೆ ವಂಚನೆ ಆಗಿದೆ. ಬಹಳಷ್ಟು ಮಂದಿ ಹಣ ಇಟ್ಟವರಿಗೆ ನಕಲಿ ಬಾಂಡ್ ಕೊಟ್ಟು ಮೋಸ ಮಾಡಲಾಗಿದೆ ಎಂದು ಸಂತ್ರಸ್ತರು ಅಲವತ್ತುಕೊಂಡಿದ್ದಾರೆ.
Mangalore Panchawati Multistate CoOperative Credit Society fraud hundreds join in protest near clock tower in the leadership of KRS political party.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm