ಬ್ರೇಕಿಂಗ್ ನ್ಯೂಸ್
05-09-22 10:38 pm Mangalore Correspondent ಕರಾವಳಿ
ಮಂಗಳೂರು, ಸೆ.5: ಈ ಬಾರಿ ನಾರಾಯಣ ಗುರುಗಳ ರಾಜ್ಯ ಮಟ್ಟದ ಜಯಂತಿಯನ್ನು ಸೆ.10ರಂದು ಮಂಗಳೂರಿನಲ್ಲಿ ಆಚರಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಪೂರ್ವಭಾವಿ ಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರತಿ ವರ್ಷವೂ ಬೆಂಗಳೂರಿನಲ್ಲಿ ರಾಜ್ಯ ಮಟ್ಟದ ಜಯಂತಿಯನ್ನು ಆಚರಿಸಲಾಗುತ್ತಿತ್ತು, ಆದರೆ ಈ ಬಾರಿ ಮಂಗಳೂರು ನಗರದಲ್ಲಿ ನಾರಾಯಣ ಗುರುಗಳ ಜಯಂತಿಯನ್ನು ಆಚರಿಸಲಾಗುವುದು, ಇದು ಒಂದು ಸಮುದಾಯಕ್ಕೆ ಸೀಮಿತವಾದ ಆಚರಣೆಯಲ್ಲ, ಎಲ್ಲಾ ಸಮುದಾಯಗಳೂ ಒಟ್ಟಾಗಿ ಸೇರಿ ಆಚರಿಸಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಜನತೆಯ ಸಹಭಾಗಿತ್ವ ಅತ್ಯಗತ್ಯವಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದರು.
ಜಯಂತಿ ಪ್ರಯುಕ್ತ ಸೆ.10ರ ಸಂಜೆ 4ಕ್ಕೆ ರಾಜ್ಯ ಹಾಗೂ ಜಿಲ್ಲಾ ಮಟ್ಟದ ವೈವಿಧ್ಯಮಯ ಕಲಾತಂಡಗಳಿಂದ ಮೆರವಣಿಗೆ ಆಯೋಜಿಸಲಾಗುವುದು. ನಾರಾಯಣ ಗುರುಗಳ ಚರಿತ್ರೆ ಬಿಂಬಿಸುವ ಚಿತ್ರ ಪ್ರದರ್ಶನವನ್ನು ಕೂಡ ಏರ್ಪಡಿಸಲಾಗುವುದು. ಸಂಜೆ 6ಕ್ಕೆ ಟಿ.ಎಂ.ಎ. ಪೈ ಭವನದಲ್ಲಿ ಸಭಾ ಕಾರ್ಯಕ್ರಮ ಆಯೋಜಿಸಲಾಗುವುದು. ರಾಜ್ಯದ ಮುಖ್ಯಮಂತ್ರಿಗೆ ಆಹ್ವಾನ ನೀಡಲಾಗುವುದು ಎಂದರು.
ಶಾಸಕರಾದ ವೇದವ್ಯಾಸ ಕಾಮತ್, ಡಾ.ವೈ ಭರತ್ ಶೆಟ್ಟಿ, ಹರೀಶ್ ಕುಮಾರ್, ಮೇಯರ್ ಪ್ರೇಮಾನಂದ ಶೆಟ್ಟಿ, ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ., ಜಿಪಂ ಸಿಇಒ ಡಾ.ಕುಮಾರ್, ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ, ಸಹಾಯಕ ಆಯುಕ್ತ ಮದನ್ ಮೋಹನ್ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಸ್ವಾಗತಿಸಿದರು.
Narayana Guru state level program to be held in Mangalore says Sunil Kumar
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm