ಬ್ರೇಕಿಂಗ್ ನ್ಯೂಸ್
06-09-22 11:54 am Mangalore Correspondent ಕರಾವಳಿ
ಉಳ್ಳಾಲ, ಆ.6 : ತೆಂಗಿನ ಕಾಯಿ ಕೀಳಲು ಮರವೇರಿದ್ದ ವೇಳೆ ಗೂಡು ಕಟ್ಟಿದ್ದ ಕಣಜದ ಹುಳುಗಳು ದಾಳಿ ನಡೆಸಿದ ಪರಿಣಾಮ ಕಾಯಿ ಕೀಳುವವ ಗಂಭೀರ ಗಾಯಗೊಂಡಿದ್ದಲ್ಲದೆ, ರಸ್ತೆಯಲ್ಲಿ ಹೋಗುತ್ತಿದ್ದ ತಂದೆ, ಮಗಳಿಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ತೊಕ್ಕೊಟ್ಟು ಸಮೀಪದ ಉಳ್ಳಾಲ ಬೈಲು ಎಂಬಲ್ಲಿ ನಡೆದಿದೆ.
ಉಳ್ಳಾಲ ಬೈಲು ನಿವಾಸಿ ಜಿತನ್ ರೆಸ್ಕಿನ(40) ಕಣಜದ ಹುಳುವಿನ ದಾಳಿಯಿಂದ ಗಂಭೀರ ಗಾಯಗೊಂಡು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಜಿತನ್ ಅವರು ವೃತ್ತಿಪರ ತೆಂಗಿನ ಕಾಯಿ ಕೀಳುವವರಾಗಿದ್ದು ಇಂದು ಬೆಳಗ್ಗೆ ಉಳ್ಳಾಲ ಬೈಲಿನ ಭವಾನಿ ಎಂಬವರ ಮನೆಯಲ್ಲಿ ಮರವೇರುವ ಯಂತ್ರದ ಮೂಲಕ ಕಾಯಿ ಕೀಳುತ್ತಿದ್ದ ವೇಳೆ ಮರದಲ್ಲಿ ಗೂಡು ಕಟ್ಟಿದ್ದ ಕಣಜದ ಹುಳುಗಳು ಏಕಾಏಕಿ ದಾಳಿ ನಡೆಸಿ ಕಚ್ಚಿ ಗಾಯಗೊಳಿಸಿವೆ. ನೊಣಗಳ ದಾಳಿಯ ರಭಸಕ್ಕೆ ಜಿತನ್ ಅವರು ಮರದಿಂದ ಕೆಳಕ್ಕೆ ಬಿದ್ದು ಗಂಭೀರ ಗಾಯಗೊಂಡಿದ್ದಾರೆ. ಪಕ್ಕದ ರಸ್ತೆಯಲ್ಲಿ ಮಗಳನ್ನ ಶಾಲಾ ವಾಹನಕ್ಕೆ ಬಿಡಲು ತೆರಳುತ್ತಿದ್ದ ಸ್ಥಳೀಯ ಬಾಡಿಗೆ ಮನೆ ನಿವಾಸಿ ಪ್ರವೀಣ್ ಪೂಜಾರಿ ಮತ್ತು ಅವರ ಮಗಳು ಧೃತಿ(7)ಗೂ ಹುಳುಗಳು ದಾಳಿ ನಡೆಸಿ ಗಾಯಗೊಳಿಸಿವೆ.

ಪ್ರವೀಣ್ ತಲೆಗೆ ಹುಳಗಳು ಕಚ್ಚಿ ಗಾಯಗೊಳಿಸಿದ್ದು ಅವರ ಪುಟ್ಟ ಮಗಳು ಧೃತಿಗೂ ಗಾಯಗಳಾಗಿದ್ದು ತೊಕ್ಕೊಟ್ಟು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗಿದ್ದು ಅಪಾಯದಿಂದ ಪಾರಾಗಿದ್ದಾರೆ.ಸ್ಥಳೀಯ ಕೌನ್ಸಿಲರ್ ನಮಿತಾ ಗಟ್ಟಿ ಅವರು ಅಪಾಯಕಾರಿ ಕಣಜದ ಗೂಡನ್ನ ತೆರವುಗೊಳಿಸುವುದಾಗಿ ಹೇಳಿದ್ದಾರೆ.
Mangalore Blister beetle insect attack three injured in Ullal.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am