ಬ್ರೇಕಿಂಗ್ ನ್ಯೂಸ್
06-09-22 10:30 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಣಿಪಾಲ್ ಗ್ರೂಪ್ ಆಫ್ ಗ್ಲೋಬಲ್ ಎಜುಕೇಶನ್ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ, ಹೆಸರಾಂತ ಉದ್ಯಮಿ ಟಿವಿ ಮೋಹನದಾಸ್ ಪೈ ಅವರ ತಾಯಿ ವಿಮಲಾ ಪೈ ನಿಧನರಾಗಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದವರಾದ ವಿಮಲಾ ಪೈ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದರು. 1956ರಲ್ಲಿ ಮಂಗಳೂರಿನ ಟಿ ವೆಂಕಟರಮಣ ಪೈ ಅವರನ್ನು ವಿವಾಹವಾಗಿದ್ದರು. ಕರ್ನಾಟಕದ ವಿವಿಧೆಡೆ 35 ವರ್ಷಗಳ ಕಾಲ ಶಿಕ್ಷಕಿಯಾಗಿದ್ದು ನಿವೃತ್ತರಾಗಿದ್ದರು. ಇವರಿಗೆ ಟಿವಿ ಮೋಹನದಾಸ್ ಪೈ, ರಾಮಚಂದ್ರ ಪೈ ಮತ್ತು ಸುಧಾ ಪೈ ಎಂಬ ಮೂವರು ಮಕ್ಕಳಿದ್ದಾರೆ. ಪತಿಯ ಜೊತೆಗೆ ಸುದೀರ್ಘ ಅವಧಿಯಿಂದ ಬೆಂಗಳೂರಿನಲ್ಲೇ ನೆಲೆಸಿದ್ದರು. ಮಕ್ಕಳ ಪೈಕಿ ಮೋಹನದಾಸ್ ಪೈ ವಿಶೇಷ ಸಾಧನೆ ಮಾಡಿದ್ದಾರೆ.
ವಿಮಲಾ ಪೈ ಉದಾರ ದಾನಿಗಳಾಗಿದ್ದರು. ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಿದ್ದರು. ಅವರ ಪತಿ ಟಿವಿ ರಮಣ ಪೈ ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯಾಗಿದ್ದರು. ಅವರ ಸ್ಮರಣಾರ್ಥ ತಾಯಿ ವಿಮಲಾ ಪೈಯವರ ಆಸೆಯಂತೆ, ಮಂಗಳೂರಿನಲ್ಲಿ ಟಿವಿ ರಮಣ ಪೈ ಸಭಾಂಗಣ ನಿರ್ಮಿಸಿದ್ದ ಮೋಹನದಾಸ ಪೈ, ಅದನ್ನು ಕೆನರಾ ಸಂಸ್ಥೆಗೆ ಬಿಟ್ಟು ಕೊಟ್ಟಿದ್ದರು.
ವಿಮಲಾ ಪೈ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳು ಚಿರಸ್ಮರಣೀಯವಾಗಿವೆ. ಅವರ ಅಗಲಿಕೆಯ ಹಿನ್ನಲೆಯಲ್ಲಿ ಅವರ ಸಾಧನೆ, ಕೊಡುಗೆಗಳನ್ನು ಸ್ಮರಿಸಿ ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಎಂ.ರಂಗನಾಥ್ ಭಟ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Mangalore Padma Shri Awardee Mohandas Pai mother Vimala passes away. She was a teacher for about 35 years. T. V. Mohandas Pai is a Padma Shri Awardee and current Chairman of Manipal Global Education. He was a former director of Infosys, and Head – Administration, Education and Research, Financial, Human Resources of Infosys Leadership Institute
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm