ಬ್ರೇಕಿಂಗ್ ನ್ಯೂಸ್
06-09-22 10:30 pm Mangalore Correspondent ಕರಾವಳಿ
ಮಂಗಳೂರು, ಸೆ.6: ಮಣಿಪಾಲ್ ಗ್ರೂಪ್ ಆಫ್ ಗ್ಲೋಬಲ್ ಎಜುಕೇಶನ್ ಅಧ್ಯಕ್ಷ, ಪದ್ಮಶ್ರೀ ಪುರಸ್ಕೃತ, ಹೆಸರಾಂತ ಉದ್ಯಮಿ ಟಿವಿ ಮೋಹನದಾಸ್ ಪೈ ಅವರ ತಾಯಿ ವಿಮಲಾ ಪೈ ನಿಧನರಾಗಿದ್ದಾರೆ.
ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದವರಾದ ವಿಮಲಾ ಪೈ ವೃತ್ತಿಯಲ್ಲಿ ಶಿಕ್ಷಕಿಯಾಗಿದ್ದರು. 1956ರಲ್ಲಿ ಮಂಗಳೂರಿನ ಟಿ ವೆಂಕಟರಮಣ ಪೈ ಅವರನ್ನು ವಿವಾಹವಾಗಿದ್ದರು. ಕರ್ನಾಟಕದ ವಿವಿಧೆಡೆ 35 ವರ್ಷಗಳ ಕಾಲ ಶಿಕ್ಷಕಿಯಾಗಿದ್ದು ನಿವೃತ್ತರಾಗಿದ್ದರು. ಇವರಿಗೆ ಟಿವಿ ಮೋಹನದಾಸ್ ಪೈ, ರಾಮಚಂದ್ರ ಪೈ ಮತ್ತು ಸುಧಾ ಪೈ ಎಂಬ ಮೂವರು ಮಕ್ಕಳಿದ್ದಾರೆ. ಪತಿಯ ಜೊತೆಗೆ ಸುದೀರ್ಘ ಅವಧಿಯಿಂದ ಬೆಂಗಳೂರಿನಲ್ಲೇ ನೆಲೆಸಿದ್ದರು. ಮಕ್ಕಳ ಪೈಕಿ ಮೋಹನದಾಸ್ ಪೈ ವಿಶೇಷ ಸಾಧನೆ ಮಾಡಿದ್ದಾರೆ.

ವಿಮಲಾ ಪೈ ಉದಾರ ದಾನಿಗಳಾಗಿದ್ದರು. ಹಲವಾರು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿ ಪ್ರೋತ್ಸಾಹಿಸಿದ್ದರು. ಅವರ ಪತಿ ಟಿವಿ ರಮಣ ಪೈ ಮಂಗಳೂರಿನ ಕೆನರಾ ಶಿಕ್ಷಣ ಸಂಸ್ಥೆಯ ಹಳೆ ವಿದ್ಯಾರ್ಥಿಯಾಗಿದ್ದರು. ಅವರ ಸ್ಮರಣಾರ್ಥ ತಾಯಿ ವಿಮಲಾ ಪೈಯವರ ಆಸೆಯಂತೆ, ಮಂಗಳೂರಿನಲ್ಲಿ ಟಿವಿ ರಮಣ ಪೈ ಸಭಾಂಗಣ ನಿರ್ಮಿಸಿದ್ದ ಮೋಹನದಾಸ ಪೈ, ಅದನ್ನು ಕೆನರಾ ಸಂಸ್ಥೆಗೆ ಬಿಟ್ಟು ಕೊಟ್ಟಿದ್ದರು.
ವಿಮಲಾ ಪೈ ಅವರು ಸಮಾಜಕ್ಕೆ ನೀಡಿರುವ ಕೊಡುಗೆಗಳು ಚಿರಸ್ಮರಣೀಯವಾಗಿವೆ. ಅವರ ಅಗಲಿಕೆಯ ಹಿನ್ನಲೆಯಲ್ಲಿ ಅವರ ಸಾಧನೆ, ಕೊಡುಗೆಗಳನ್ನು ಸ್ಮರಿಸಿ ಕೆನರಾ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಎಂ.ರಂಗನಾಥ್ ಭಟ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
Mangalore Padma Shri Awardee Mohandas Pai mother Vimala passes away. She was a teacher for about 35 years. T. V. Mohandas Pai is a Padma Shri Awardee and current Chairman of Manipal Global Education. He was a former director of Infosys, and Head – Administration, Education and Research, Financial, Human Resources of Infosys Leadership Institute
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 08:14 pm
Mangalore Correspondent
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm
ಬೆಂಗಳೂರು ಏರ್ಪೋರ್ಟ್ ನಲ್ಲಿ ಕೋಟ್ಯಂತರ ಮೌಲ್ಯದ ಚಿನ್...
07-02-26 12:31 pm
MLA Vedavyas Kamath, Mangalore: ಶಾಸಕ ವೇದವ್ಯಾಸ...
07-02-26 11:47 am