ಬ್ರೇಕಿಂಗ್ ನ್ಯೂಸ್
11-09-22 03:08 pm HK News Desk ಕರಾವಳಿ
ಕುಂದಾಪುರ, ಸೆ.11: ಓಣಂ ರಜೆ ಹಿನ್ನೆಲೆಯಲ್ಲಿ ಕೇರಳದಿಂದ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ನದಿಯಲ್ಲಿ ತೀರ್ಥಸ್ನಾನ ಮಾಡುತ್ತಿದ್ದಾಗ ಮುಳುಗಿದ ಮಗನ ರಕ್ಷಣೆಗೆ ಹೋಗಿ ತಾನೇ ನೀರು ಪಾಲಾದ ಘಟನೆ ನಡೆದಿದೆ.
ಕೇರಳದ ತಿರುವನಂತಪುರಂ ಜಿಲ್ಲೆಯ ಕಾಚಗಡ ನಿವಾಸಿ ಚಾಂದಿನಿ ಶೇಖರ್ (42) ನೀರು ಪಾಲಾದ ಮಹಿಳೆ. ಚಾಂದಿಶೇಖರ್ ಪತಿ ಮುರುಗನ್ ಮತ್ತು ಮಕ್ಕಳೊಂದಿಗೆ ಓಣಂ ಹಬ್ಬದ ಹಿನ್ನೆಲೆಯಲ್ಲಿ ಮೂಕಾಂಬಿಕೆಯ ದರ್ಶನಕ್ಕಾಗಿ ಕೊಲ್ಲೂರಿಗೆ ಬಂದಿದ್ದರು. ಕುಟುಂಬವು ಕೊಲ್ಲೂರಿನ ಯಮುನಾ ವಿಹಾರ್ ವಸತಿ ಗೃಹದಲ್ಲಿ ಉಳಿದುಕೊಂಡಿದ್ದರು.
ಶನಿವಾರ ಸಂಜೆ 5.15ರ ಸುಮಾರಿಗೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಗ ಆದಿತ್ಯನ್ ನದಿಯ ನೀರಿನ ಸೆಳೆತಕ್ಕೆ ಒಳಗಾಗಿದ್ದಾನೆ. ಜೊತೆಗಿದ್ದ ತಾಯಿ ಮಗನ ರಕ್ಷಣೆಗೆ ಮುಂದಾಗಿದ್ದು ನೀರಿಗೆ ಧುಮುಕಿದ್ದಾರೆ. ನಂತರ ತಂದೆ ಮುರುಗನ್ ಕೂಡ ನೀರಿಗೆ ಹಾರಿದ್ದು ಇಬ್ಬರ ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರು ಸೇರಿ ಮುರುಗನ್ ಹಾಗೂ ಮಗ ಆದಿತ್ಯನ್ ಅವರನ್ನು ರಕ್ಷಣೆ ಮಾಡಲಾಗಿದೆ. ಆದರೆ ನದಿ ನೀರಿನಲ್ಲಿ ಕೊಚ್ಚಿ ಹೋದ ಚಾಂದಿ ಶೇಖರ್ ನೀರು ಪಾಲಾಗಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿರುವ ಮಹಿಳೆಗಾಗಿ ಅಗ್ನಿಶಾಮಕ ದಳ ಹಾಗೂ ಕೊಲ್ಲೂರು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala woma drowns in the river while saving her son who was drowning in Kundapur Kollur. The deceased has been identified as Chandini Shekar (42).
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 01:01 pm
HK News Staffer
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm