ಬ್ರೇಕಿಂಗ್ ನ್ಯೂಸ್
11-09-22 03:08 pm HK News Desk ಕರಾವಳಿ
ಕುಂದಾಪುರ, ಸೆ.11: ಓಣಂ ರಜೆ ಹಿನ್ನೆಲೆಯಲ್ಲಿ ಕೇರಳದಿಂದ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ನದಿಯಲ್ಲಿ ತೀರ್ಥಸ್ನಾನ ಮಾಡುತ್ತಿದ್ದಾಗ ಮುಳುಗಿದ ಮಗನ ರಕ್ಷಣೆಗೆ ಹೋಗಿ ತಾನೇ ನೀರು ಪಾಲಾದ ಘಟನೆ ನಡೆದಿದೆ.
ಕೇರಳದ ತಿರುವನಂತಪುರಂ ಜಿಲ್ಲೆಯ ಕಾಚಗಡ ನಿವಾಸಿ ಚಾಂದಿನಿ ಶೇಖರ್ (42) ನೀರು ಪಾಲಾದ ಮಹಿಳೆ. ಚಾಂದಿಶೇಖರ್ ಪತಿ ಮುರುಗನ್ ಮತ್ತು ಮಕ್ಕಳೊಂದಿಗೆ ಓಣಂ ಹಬ್ಬದ ಹಿನ್ನೆಲೆಯಲ್ಲಿ ಮೂಕಾಂಬಿಕೆಯ ದರ್ಶನಕ್ಕಾಗಿ ಕೊಲ್ಲೂರಿಗೆ ಬಂದಿದ್ದರು. ಕುಟುಂಬವು ಕೊಲ್ಲೂರಿನ ಯಮುನಾ ವಿಹಾರ್ ವಸತಿ ಗೃಹದಲ್ಲಿ ಉಳಿದುಕೊಂಡಿದ್ದರು.
ಶನಿವಾರ ಸಂಜೆ 5.15ರ ಸುಮಾರಿಗೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಗ ಆದಿತ್ಯನ್ ನದಿಯ ನೀರಿನ ಸೆಳೆತಕ್ಕೆ ಒಳಗಾಗಿದ್ದಾನೆ. ಜೊತೆಗಿದ್ದ ತಾಯಿ ಮಗನ ರಕ್ಷಣೆಗೆ ಮುಂದಾಗಿದ್ದು ನೀರಿಗೆ ಧುಮುಕಿದ್ದಾರೆ. ನಂತರ ತಂದೆ ಮುರುಗನ್ ಕೂಡ ನೀರಿಗೆ ಹಾರಿದ್ದು ಇಬ್ಬರ ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರು ಸೇರಿ ಮುರುಗನ್ ಹಾಗೂ ಮಗ ಆದಿತ್ಯನ್ ಅವರನ್ನು ರಕ್ಷಣೆ ಮಾಡಲಾಗಿದೆ. ಆದರೆ ನದಿ ನೀರಿನಲ್ಲಿ ಕೊಚ್ಚಿ ಹೋದ ಚಾಂದಿ ಶೇಖರ್ ನೀರು ಪಾಲಾಗಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿರುವ ಮಹಿಳೆಗಾಗಿ ಅಗ್ನಿಶಾಮಕ ದಳ ಹಾಗೂ ಕೊಲ್ಲೂರು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala woma drowns in the river while saving her son who was drowning in Kundapur Kollur. The deceased has been identified as Chandini Shekar (42).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm