ಬ್ರೇಕಿಂಗ್ ನ್ಯೂಸ್
11-09-22 03:08 pm HK News Desk ಕರಾವಳಿ
ಕುಂದಾಪುರ, ಸೆ.11: ಓಣಂ ರಜೆ ಹಿನ್ನೆಲೆಯಲ್ಲಿ ಕೇರಳದಿಂದ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ನದಿಯಲ್ಲಿ ತೀರ್ಥಸ್ನಾನ ಮಾಡುತ್ತಿದ್ದಾಗ ಮುಳುಗಿದ ಮಗನ ರಕ್ಷಣೆಗೆ ಹೋಗಿ ತಾನೇ ನೀರು ಪಾಲಾದ ಘಟನೆ ನಡೆದಿದೆ.
ಕೇರಳದ ತಿರುವನಂತಪುರಂ ಜಿಲ್ಲೆಯ ಕಾಚಗಡ ನಿವಾಸಿ ಚಾಂದಿನಿ ಶೇಖರ್ (42) ನೀರು ಪಾಲಾದ ಮಹಿಳೆ. ಚಾಂದಿಶೇಖರ್ ಪತಿ ಮುರುಗನ್ ಮತ್ತು ಮಕ್ಕಳೊಂದಿಗೆ ಓಣಂ ಹಬ್ಬದ ಹಿನ್ನೆಲೆಯಲ್ಲಿ ಮೂಕಾಂಬಿಕೆಯ ದರ್ಶನಕ್ಕಾಗಿ ಕೊಲ್ಲೂರಿಗೆ ಬಂದಿದ್ದರು. ಕುಟುಂಬವು ಕೊಲ್ಲೂರಿನ ಯಮುನಾ ವಿಹಾರ್ ವಸತಿ ಗೃಹದಲ್ಲಿ ಉಳಿದುಕೊಂಡಿದ್ದರು.
ಶನಿವಾರ ಸಂಜೆ 5.15ರ ಸುಮಾರಿಗೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಗ ಆದಿತ್ಯನ್ ನದಿಯ ನೀರಿನ ಸೆಳೆತಕ್ಕೆ ಒಳಗಾಗಿದ್ದಾನೆ. ಜೊತೆಗಿದ್ದ ತಾಯಿ ಮಗನ ರಕ್ಷಣೆಗೆ ಮುಂದಾಗಿದ್ದು ನೀರಿಗೆ ಧುಮುಕಿದ್ದಾರೆ. ನಂತರ ತಂದೆ ಮುರುಗನ್ ಕೂಡ ನೀರಿಗೆ ಹಾರಿದ್ದು ಇಬ್ಬರ ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರು ಸೇರಿ ಮುರುಗನ್ ಹಾಗೂ ಮಗ ಆದಿತ್ಯನ್ ಅವರನ್ನು ರಕ್ಷಣೆ ಮಾಡಲಾಗಿದೆ. ಆದರೆ ನದಿ ನೀರಿನಲ್ಲಿ ಕೊಚ್ಚಿ ಹೋದ ಚಾಂದಿ ಶೇಖರ್ ನೀರು ಪಾಲಾಗಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿರುವ ಮಹಿಳೆಗಾಗಿ ಅಗ್ನಿಶಾಮಕ ದಳ ಹಾಗೂ ಕೊಲ್ಲೂರು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala woma drowns in the river while saving her son who was drowning in Kundapur Kollur. The deceased has been identified as Chandini Shekar (42).
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am