ಬ್ರೇಕಿಂಗ್ ನ್ಯೂಸ್
11-09-22 03:08 pm HK News Desk ಕರಾವಳಿ
ಕುಂದಾಪುರ, ಸೆ.11: ಓಣಂ ರಜೆ ಹಿನ್ನೆಲೆಯಲ್ಲಿ ಕೇರಳದಿಂದ ಪ್ರಸಿದ್ಧ ಯಾತ್ರಾಸ್ಥಳ ಕೊಲ್ಲೂರಿಗೆ ಆಗಮಿಸಿದ್ದ ಮಹಿಳೆಯೊಬ್ಬರು ನದಿಯಲ್ಲಿ ತೀರ್ಥಸ್ನಾನ ಮಾಡುತ್ತಿದ್ದಾಗ ಮುಳುಗಿದ ಮಗನ ರಕ್ಷಣೆಗೆ ಹೋಗಿ ತಾನೇ ನೀರು ಪಾಲಾದ ಘಟನೆ ನಡೆದಿದೆ.
ಕೇರಳದ ತಿರುವನಂತಪುರಂ ಜಿಲ್ಲೆಯ ಕಾಚಗಡ ನಿವಾಸಿ ಚಾಂದಿನಿ ಶೇಖರ್ (42) ನೀರು ಪಾಲಾದ ಮಹಿಳೆ. ಚಾಂದಿಶೇಖರ್ ಪತಿ ಮುರುಗನ್ ಮತ್ತು ಮಕ್ಕಳೊಂದಿಗೆ ಓಣಂ ಹಬ್ಬದ ಹಿನ್ನೆಲೆಯಲ್ಲಿ ಮೂಕಾಂಬಿಕೆಯ ದರ್ಶನಕ್ಕಾಗಿ ಕೊಲ್ಲೂರಿಗೆ ಬಂದಿದ್ದರು. ಕುಟುಂಬವು ಕೊಲ್ಲೂರಿನ ಯಮುನಾ ವಿಹಾರ್ ವಸತಿ ಗೃಹದಲ್ಲಿ ಉಳಿದುಕೊಂಡಿದ್ದರು.
ಶನಿವಾರ ಸಂಜೆ 5.15ರ ಸುಮಾರಿಗೆ ಕೊಲ್ಲೂರಿನ ಸೌಪರ್ಣಿಕಾ ನದಿಯಲ್ಲಿ ಸ್ನಾನ ಮಾಡುತ್ತಿದ್ದಾಗ ಮಗ ಆದಿತ್ಯನ್ ನದಿಯ ನೀರಿನ ಸೆಳೆತಕ್ಕೆ ಒಳಗಾಗಿದ್ದಾನೆ. ಜೊತೆಗಿದ್ದ ತಾಯಿ ಮಗನ ರಕ್ಷಣೆಗೆ ಮುಂದಾಗಿದ್ದು ನೀರಿಗೆ ಧುಮುಕಿದ್ದಾರೆ. ನಂತರ ತಂದೆ ಮುರುಗನ್ ಕೂಡ ನೀರಿಗೆ ಹಾರಿದ್ದು ಇಬ್ಬರ ರಕ್ಷಣೆಗೆ ಮುಂದಾಗಿದ್ದಾರೆ. ಸ್ಥಳೀಯರು ಸೇರಿ ಮುರುಗನ್ ಹಾಗೂ ಮಗ ಆದಿತ್ಯನ್ ಅವರನ್ನು ರಕ್ಷಣೆ ಮಾಡಲಾಗಿದೆ. ಆದರೆ ನದಿ ನೀರಿನಲ್ಲಿ ಕೊಚ್ಚಿ ಹೋದ ಚಾಂದಿ ಶೇಖರ್ ನೀರು ಪಾಲಾಗಿದ್ದಾರೆ. ಸೌಪರ್ಣಿಕಾ ನದಿಯಲ್ಲಿ ಕೊಚ್ಚಿ ಹೋಗಿರುವ ಮಹಿಳೆಗಾಗಿ ಅಗ್ನಿಶಾಮಕ ದಳ ಹಾಗೂ ಕೊಲ್ಲೂರು ಪೊಲೀಸರು ಸ್ಥಳೀಯರ ಸಹಕಾರದೊಂದಿಗೆ ಶೋಧ ಕಾರ್ಯವನ್ನು ನಡೆಸುತ್ತಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kerala woma drowns in the river while saving her son who was drowning in Kundapur Kollur. The deceased has been identified as Chandini Shekar (42).
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
06-02-26 10:58 pm
HK News Desk
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
ಮೇಘಾಲಯದಲ್ಲಿ ಕರಾಳ ದುರಂತ ; 'ಅಕ್ರಮ' ಕಲ್ಲಿದ್ದಲು ಗ...
06-02-26 09:54 am
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm