ಬ್ರೇಕಿಂಗ್ ನ್ಯೂಸ್
11-09-22 08:31 pm HK News Desk ಕರಾವಳಿ
ಬೆಂಗಳೂರು, ಸೆ.11: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ದೇಶಕ್ಕಾಗಿ ರಕ್ತ ಕೊಟ್ಟಿದ್ದಾರೆ. ಅವರನ್ನು ಕೊಂದ ಹಂತಕರು ಹೇಡಿಗಳು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಶನಿವಾರ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ 'ಜನಸ್ಪಂದನ' ಕಾರ್ಯಕ್ರಮದಲ್ಲಿ ಮಾತನಾಡಿದ ಇರಾನಿ, ಜನರ ಮನಸ್ಸಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವುದು ಹಂತಕರ ಉದ್ದೇಶವಾಗಿತ್ತು. ಪ್ರವೀಣ್ ತಮ್ಮ ರಕ್ತವನ್ನು ದೇಶಕ್ಕಾಗಿ ನೀಡಿದ್ದಾರೆ. ಅವರ ಭಾವಚಿತ್ರವನ್ನು ಇಲ್ಲಿ ಇರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಿದ ಸಂಘಟಕರನ್ನು ಅಭಿನಂದಿಸುತ್ತೇನೆ ಎಂದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭಯೋತ್ಪಾದಕ ಯಾಕೂಬ್ ಮೆಮನ್ ಸಮಾಧಿಯನ್ನು ಅಲಂಕರಿಸಲಾಗಿತ್ತು. ಇದನ್ನು ಪ್ರಶ್ನಿಸುವ ಧೈರ್ಯ ರಾಹುಲ್ ಗಾಂಧಿಗೆ ಇಲ್ಲ. ರಾಹುಲ್ ಗಾಂಧಿ ನಿಜವಾಗಿಯೂ ಭಯೋತ್ಪಾದನೆಯನ್ನು ವಿರೋಧಿಸುವುದಾದರೆ ಇದನ್ನು ಖಂಡಿಸಲು ಏಕೆ ವಿಫಲರಾದರು ಎಂದು ಇರಾನಿ ಪ್ರಶ್ನಿಸಿದರು.
ಭಾರತ್ ಜೋಡೋ ಯಾತ್ರೆಯಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದವರನ್ನು ಕಾಂಗ್ರೆಸ್ ಸೇರಿಸಿದೆ. ಇದು ದೇಶವಿರೋಧಿ ಕೃತ್ಯ. ದೇಶದ ವಿರುದ್ಧ ಘೋಷಣೆ ಕೂಗಿದವರನ್ನು ಬೆಂಬಲಿಸುವುದು ದೇಶಕ್ಕೆ ಮಾಡುವ ದ್ರೋಹ. ಈ ದೇಶವಿರೋಧಿ ಕೃತ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಬೇಕು. ಕಾಂಗ್ರೆಸ್ ಕರ್ನಾಟಕದ ಜನರ ವಿರುದ್ಧ ತಾರತಮ್ಯ ಮಾಡುತ್ತಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕೇಂದ್ರ ಹಣಕಾಸು ಆಯೋಗದ ಮೂಲಕ ಕರ್ನಾಟಕಕ್ಕೆ 2000 ಕೋಟಿ ರೂ. ನೀಡಿತ್ತು. ಆದರೆ ಡಬಲ್ ಇಂಜಿನ್ ಸರಕಾರ ನಡೆಸುತ್ತಿರುವ ಬಿಜೆಪಿ ರಾಜ್ಯಕ್ಕೆ 5000 ಕೋಟಿ ರೂ. ನೀಡಿದೆ ಎಂದು ತಿಳಿಸಿದರು.
Union Minister for Women and Child Development, Smriti Irani, on Saturday termed the killers of BJP Yuva Morcha activist Praveen Kumar Nettaru, who was hacked to death by bike-borne miscreants on July 26 in Dakshina Kannada district, as cowards.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
21-06-25 08:58 pm
Mangaluru Correspondent
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm