ಬ್ರೇಕಿಂಗ್ ನ್ಯೂಸ್
11-09-22 08:31 pm HK News Desk ಕರಾವಳಿ
ಬೆಂಗಳೂರು, ಸೆ.11: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ದೇಶಕ್ಕಾಗಿ ರಕ್ತ ಕೊಟ್ಟಿದ್ದಾರೆ. ಅವರನ್ನು ಕೊಂದ ಹಂತಕರು ಹೇಡಿಗಳು ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.
ಶನಿವಾರ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದ್ದ 'ಜನಸ್ಪಂದನ' ಕಾರ್ಯಕ್ರಮದಲ್ಲಿ ಮಾತನಾಡಿದ ಇರಾನಿ, ಜನರ ಮನಸ್ಸಿನಲ್ಲಿ ಭಯೋತ್ಪಾದನೆಯನ್ನು ಸೃಷ್ಟಿಸುವುದು ಹಂತಕರ ಉದ್ದೇಶವಾಗಿತ್ತು. ಪ್ರವೀಣ್ ತಮ್ಮ ರಕ್ತವನ್ನು ದೇಶಕ್ಕಾಗಿ ನೀಡಿದ್ದಾರೆ. ಅವರ ಭಾವಚಿತ್ರವನ್ನು ಇಲ್ಲಿ ಇರಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಿದ ಸಂಘಟಕರನ್ನು ಅಭಿನಂದಿಸುತ್ತೇನೆ ಎಂದರು.
ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಭಯೋತ್ಪಾದಕ ಯಾಕೂಬ್ ಮೆಮನ್ ಸಮಾಧಿಯನ್ನು ಅಲಂಕರಿಸಲಾಗಿತ್ತು. ಇದನ್ನು ಪ್ರಶ್ನಿಸುವ ಧೈರ್ಯ ರಾಹುಲ್ ಗಾಂಧಿಗೆ ಇಲ್ಲ. ರಾಹುಲ್ ಗಾಂಧಿ ನಿಜವಾಗಿಯೂ ಭಯೋತ್ಪಾದನೆಯನ್ನು ವಿರೋಧಿಸುವುದಾದರೆ ಇದನ್ನು ಖಂಡಿಸಲು ಏಕೆ ವಿಫಲರಾದರು ಎಂದು ಇರಾನಿ ಪ್ರಶ್ನಿಸಿದರು.
ಭಾರತ್ ಜೋಡೋ ಯಾತ್ರೆಯಲ್ಲಿ ಭಾರತ ವಿರೋಧಿ ಘೋಷಣೆಗಳನ್ನು ಕೂಗಿದವರನ್ನು ಕಾಂಗ್ರೆಸ್ ಸೇರಿಸಿದೆ. ಇದು ದೇಶವಿರೋಧಿ ಕೃತ್ಯ. ದೇಶದ ವಿರುದ್ಧ ಘೋಷಣೆ ಕೂಗಿದವರನ್ನು ಬೆಂಬಲಿಸುವುದು ದೇಶಕ್ಕೆ ಮಾಡುವ ದ್ರೋಹ. ಈ ದೇಶವಿರೋಧಿ ಕೃತ್ಯವನ್ನು ಕಾಂಗ್ರೆಸ್ ಕಾರ್ಯಕರ್ತರು ಪ್ರಶ್ನಿಸಬೇಕು. ಕಾಂಗ್ರೆಸ್ ಕರ್ನಾಟಕದ ಜನರ ವಿರುದ್ಧ ತಾರತಮ್ಯ ಮಾಡುತ್ತಿದೆ. ಕಾಂಗ್ರೆಸ್ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಕೇಂದ್ರ ಹಣಕಾಸು ಆಯೋಗದ ಮೂಲಕ ಕರ್ನಾಟಕಕ್ಕೆ 2000 ಕೋಟಿ ರೂ. ನೀಡಿತ್ತು. ಆದರೆ ಡಬಲ್ ಇಂಜಿನ್ ಸರಕಾರ ನಡೆಸುತ್ತಿರುವ ಬಿಜೆಪಿ ರಾಜ್ಯಕ್ಕೆ 5000 ಕೋಟಿ ರೂ. ನೀಡಿದೆ ಎಂದು ತಿಳಿಸಿದರು.
Union Minister for Women and Child Development, Smriti Irani, on Saturday termed the killers of BJP Yuva Morcha activist Praveen Kumar Nettaru, who was hacked to death by bike-borne miscreants on July 26 in Dakshina Kannada district, as cowards.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 10:56 pm
HK News Desk
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm