ಬ್ರೇಕಿಂಗ್ ನ್ಯೂಸ್
08-10-20 09:53 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್. 08 : ತುಳು ಅಕಾಡೆಮಿ ಮಾಜಿ ಸದಸ್ಯ, ಹಿರಿಯ ತುಳು ಸಾಹಿತಿ, ತುಳು ಸಂಘಟಕ ಶಿವಾನಂದ ಕರ್ಕೇರ (73) ತಮ್ಮ ಮನೆಯಲ್ಲಿ ಮಹಡಿಯಿಂದ ಜಾರಿ ಬಿದ್ದು ನಿಧನರಾಗಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಶಿವಾನಂದ ಕರ್ಕೇರ ಅವರು ಪಾಂಡೇಶ್ವರದ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿದ್ದು ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕೆಳಗೆ ಬಿದ್ದಿದ್ದು ಹೇಗೆ ಎನ್ನುವುದು ಸರಿಯಾಗಿ ಯಾರಿಗೂ ಗೊತ್ತಿಲ್ಲ. ಅಪಾರ್ಟ್ಮೆಂಟ್ ಗೇಟ್ ಹೊರ ಭಾಗದಲ್ಲಿ ಕರ್ಕೇರ ಅವರು ಬಿದ್ದಿರುವುದನ್ನು ಪಕ್ಕದ ಮನೆಯ ಮಗುವೊಂದು ನೋಡಿ, ಹೆತ್ತವರಿಗೆ ತಿಳಿಸಿದೆ. ಕೂಡಲೇ ಅವರನ್ನು ಸ್ಥಳೀಯರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ,ಅದಾಗಲೇ ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧಿಕಾರಿಯಾಗಿದ್ದ ಕರ್ಕೇರ ಅವರು, ನಿವೃತ್ತಿ ಬಳಿಕ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ತುಳು ನಾಟಕ, ಕವನ ಬರೆಯುವ ಹವ್ಯಾಸ ಹೊಂದಿದ್ದರು. ಇವರು ಕಡಲ್ ಕವಿತಾ ಸಂಕಲನ ಮತ್ತು ಎರು ಮೈಂದೆ ನಾಟಕಗಳಿಗೆ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
ಗೋಕರ್ಣನಾಥ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರು, ಯಕ್ಷಾಂಗಣದ ಸ್ಥಾಪಕ ಉಪಾಧ್ಯಕ್ಷರು ಆಗಿದ್ದರು. ಇವರು ತುಳು ಅಕಾಡೆಮಿ ಸದಸ್ಯರಾಗಿದ್ದ ಅವಧಿಯಲ್ಲಿ ತುಳು ಭಾಷೆಯಲ್ಲಿ ಮೊದಲ ಬಾರಿಗೆ ಎಂಎ ಸ್ನಾತಕೋತ್ತರ ಪದವಿ ಆರಂಭಗೊಂಡಿತ್ತು. ಮೊದಲ ಬ್ಯಾಚಿನಲ್ಲಿ ತುಳು ಎಂ.ಎ. ವಿದ್ಯಾರ್ಥಿಯಾಗಿ ಸೇರಿದ್ದಲ್ಲದೆ ತುಳು ಕಲಿಯಬೇಕೆಂಬ ನೆಲೆಯಲ್ಲಿ ಕಿರಿಯರಿಗೆ ಪ್ರೋತ್ಸಾಹ ತುಂಬುತ್ತಿದ್ದರು. ಆರೋಗ್ಯದಲ್ಲಿ ತುಂಬು ಜವ್ವನ ಹೊಂದಿದ್ದ ಕರ್ಕೇರ ಅವರು, ಹಠಾತ್ ನಿಧನರಾಗಿರುವುದು ಅವರ ಆಪ್ತರಲ್ಲಿ ಮತ್ತು ತುಳು ಸಂಘಟಕರಲ್ಲಿ ದಿಗ್ಭ್ರಮೆ ಮೂಡಿಸಿದೆ
30-01-26 05:00 pm
Bangalore Correspondent
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 03:43 pm
Mangalore Correspondent
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm