ಬ್ರೇಕಿಂಗ್ ನ್ಯೂಸ್
08-10-20 09:53 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್. 08 : ತುಳು ಅಕಾಡೆಮಿ ಮಾಜಿ ಸದಸ್ಯ, ಹಿರಿಯ ತುಳು ಸಾಹಿತಿ, ತುಳು ಸಂಘಟಕ ಶಿವಾನಂದ ಕರ್ಕೇರ (73) ತಮ್ಮ ಮನೆಯಲ್ಲಿ ಮಹಡಿಯಿಂದ ಜಾರಿ ಬಿದ್ದು ನಿಧನರಾಗಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಶಿವಾನಂದ ಕರ್ಕೇರ ಅವರು ಪಾಂಡೇಶ್ವರದ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿದ್ದು ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕೆಳಗೆ ಬಿದ್ದಿದ್ದು ಹೇಗೆ ಎನ್ನುವುದು ಸರಿಯಾಗಿ ಯಾರಿಗೂ ಗೊತ್ತಿಲ್ಲ. ಅಪಾರ್ಟ್ಮೆಂಟ್ ಗೇಟ್ ಹೊರ ಭಾಗದಲ್ಲಿ ಕರ್ಕೇರ ಅವರು ಬಿದ್ದಿರುವುದನ್ನು ಪಕ್ಕದ ಮನೆಯ ಮಗುವೊಂದು ನೋಡಿ, ಹೆತ್ತವರಿಗೆ ತಿಳಿಸಿದೆ. ಕೂಡಲೇ ಅವರನ್ನು ಸ್ಥಳೀಯರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ,ಅದಾಗಲೇ ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧಿಕಾರಿಯಾಗಿದ್ದ ಕರ್ಕೇರ ಅವರು, ನಿವೃತ್ತಿ ಬಳಿಕ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ತುಳು ನಾಟಕ, ಕವನ ಬರೆಯುವ ಹವ್ಯಾಸ ಹೊಂದಿದ್ದರು. ಇವರು ಕಡಲ್ ಕವಿತಾ ಸಂಕಲನ ಮತ್ತು ಎರು ಮೈಂದೆ ನಾಟಕಗಳಿಗೆ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
ಗೋಕರ್ಣನಾಥ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರು, ಯಕ್ಷಾಂಗಣದ ಸ್ಥಾಪಕ ಉಪಾಧ್ಯಕ್ಷರು ಆಗಿದ್ದರು. ಇವರು ತುಳು ಅಕಾಡೆಮಿ ಸದಸ್ಯರಾಗಿದ್ದ ಅವಧಿಯಲ್ಲಿ ತುಳು ಭಾಷೆಯಲ್ಲಿ ಮೊದಲ ಬಾರಿಗೆ ಎಂಎ ಸ್ನಾತಕೋತ್ತರ ಪದವಿ ಆರಂಭಗೊಂಡಿತ್ತು. ಮೊದಲ ಬ್ಯಾಚಿನಲ್ಲಿ ತುಳು ಎಂ.ಎ. ವಿದ್ಯಾರ್ಥಿಯಾಗಿ ಸೇರಿದ್ದಲ್ಲದೆ ತುಳು ಕಲಿಯಬೇಕೆಂಬ ನೆಲೆಯಲ್ಲಿ ಕಿರಿಯರಿಗೆ ಪ್ರೋತ್ಸಾಹ ತುಂಬುತ್ತಿದ್ದರು. ಆರೋಗ್ಯದಲ್ಲಿ ತುಂಬು ಜವ್ವನ ಹೊಂದಿದ್ದ ಕರ್ಕೇರ ಅವರು, ಹಠಾತ್ ನಿಧನರಾಗಿರುವುದು ಅವರ ಆಪ್ತರಲ್ಲಿ ಮತ್ತು ತುಳು ಸಂಘಟಕರಲ್ಲಿ ದಿಗ್ಭ್ರಮೆ ಮೂಡಿಸಿದೆ
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm