ಬ್ರೇಕಿಂಗ್ ನ್ಯೂಸ್
08-10-20 09:53 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್. 08 : ತುಳು ಅಕಾಡೆಮಿ ಮಾಜಿ ಸದಸ್ಯ, ಹಿರಿಯ ತುಳು ಸಾಹಿತಿ, ತುಳು ಸಂಘಟಕ ಶಿವಾನಂದ ಕರ್ಕೇರ (73) ತಮ್ಮ ಮನೆಯಲ್ಲಿ ಮಹಡಿಯಿಂದ ಜಾರಿ ಬಿದ್ದು ನಿಧನರಾಗಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಶಿವಾನಂದ ಕರ್ಕೇರ ಅವರು ಪಾಂಡೇಶ್ವರದ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿದ್ದು ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕೆಳಗೆ ಬಿದ್ದಿದ್ದು ಹೇಗೆ ಎನ್ನುವುದು ಸರಿಯಾಗಿ ಯಾರಿಗೂ ಗೊತ್ತಿಲ್ಲ. ಅಪಾರ್ಟ್ಮೆಂಟ್ ಗೇಟ್ ಹೊರ ಭಾಗದಲ್ಲಿ ಕರ್ಕೇರ ಅವರು ಬಿದ್ದಿರುವುದನ್ನು ಪಕ್ಕದ ಮನೆಯ ಮಗುವೊಂದು ನೋಡಿ, ಹೆತ್ತವರಿಗೆ ತಿಳಿಸಿದೆ. ಕೂಡಲೇ ಅವರನ್ನು ಸ್ಥಳೀಯರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ,ಅದಾಗಲೇ ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧಿಕಾರಿಯಾಗಿದ್ದ ಕರ್ಕೇರ ಅವರು, ನಿವೃತ್ತಿ ಬಳಿಕ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ತುಳು ನಾಟಕ, ಕವನ ಬರೆಯುವ ಹವ್ಯಾಸ ಹೊಂದಿದ್ದರು. ಇವರು ಕಡಲ್ ಕವಿತಾ ಸಂಕಲನ ಮತ್ತು ಎರು ಮೈಂದೆ ನಾಟಕಗಳಿಗೆ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
ಗೋಕರ್ಣನಾಥ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರು, ಯಕ್ಷಾಂಗಣದ ಸ್ಥಾಪಕ ಉಪಾಧ್ಯಕ್ಷರು ಆಗಿದ್ದರು. ಇವರು ತುಳು ಅಕಾಡೆಮಿ ಸದಸ್ಯರಾಗಿದ್ದ ಅವಧಿಯಲ್ಲಿ ತುಳು ಭಾಷೆಯಲ್ಲಿ ಮೊದಲ ಬಾರಿಗೆ ಎಂಎ ಸ್ನಾತಕೋತ್ತರ ಪದವಿ ಆರಂಭಗೊಂಡಿತ್ತು. ಮೊದಲ ಬ್ಯಾಚಿನಲ್ಲಿ ತುಳು ಎಂ.ಎ. ವಿದ್ಯಾರ್ಥಿಯಾಗಿ ಸೇರಿದ್ದಲ್ಲದೆ ತುಳು ಕಲಿಯಬೇಕೆಂಬ ನೆಲೆಯಲ್ಲಿ ಕಿರಿಯರಿಗೆ ಪ್ರೋತ್ಸಾಹ ತುಂಬುತ್ತಿದ್ದರು. ಆರೋಗ್ಯದಲ್ಲಿ ತುಂಬು ಜವ್ವನ ಹೊಂದಿದ್ದ ಕರ್ಕೇರ ಅವರು, ಹಠಾತ್ ನಿಧನರಾಗಿರುವುದು ಅವರ ಆಪ್ತರಲ್ಲಿ ಮತ್ತು ತುಳು ಸಂಘಟಕರಲ್ಲಿ ದಿಗ್ಭ್ರಮೆ ಮೂಡಿಸಿದೆ
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm