ಬ್ರೇಕಿಂಗ್ ನ್ಯೂಸ್
08-10-20 09:53 am Headline Karnataka News Network ಕರಾವಳಿ
ಮಂಗಳೂರು, ಅಕ್ಟೋಬರ್. 08 : ತುಳು ಅಕಾಡೆಮಿ ಮಾಜಿ ಸದಸ್ಯ, ಹಿರಿಯ ತುಳು ಸಾಹಿತಿ, ತುಳು ಸಂಘಟಕ ಶಿವಾನಂದ ಕರ್ಕೇರ (73) ತಮ್ಮ ಮನೆಯಲ್ಲಿ ಮಹಡಿಯಿಂದ ಜಾರಿ ಬಿದ್ದು ನಿಧನರಾಗಿದ್ದಾರೆ.
ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಶಿವಾನಂದ ಕರ್ಕೇರ ಅವರು ಪಾಂಡೇಶ್ವರದ ಅಪಾರ್ಟ್ಮೆಂಟ್ ನಿಂದ ಹೊರಗೆ ಬಂದಿದ್ದು ಮಹಡಿಯಿಂದ ಕೆಳಕ್ಕೆ ಬಿದ್ದಿದ್ದಾರೆ ಎನ್ನಲಾಗುತ್ತಿದೆ. ಆದರೆ, ಕೆಳಗೆ ಬಿದ್ದಿದ್ದು ಹೇಗೆ ಎನ್ನುವುದು ಸರಿಯಾಗಿ ಯಾರಿಗೂ ಗೊತ್ತಿಲ್ಲ. ಅಪಾರ್ಟ್ಮೆಂಟ್ ಗೇಟ್ ಹೊರ ಭಾಗದಲ್ಲಿ ಕರ್ಕೇರ ಅವರು ಬಿದ್ದಿರುವುದನ್ನು ಪಕ್ಕದ ಮನೆಯ ಮಗುವೊಂದು ನೋಡಿ, ಹೆತ್ತವರಿಗೆ ತಿಳಿಸಿದೆ. ಕೂಡಲೇ ಅವರನ್ನು ಸ್ಥಳೀಯರು ಅತ್ತಾವರ ಕೆಎಂಸಿ ಆಸ್ಪತ್ರೆಗೆ ದಾಖಲು ಮಾಡಿದ್ದು ,ಅದಾಗಲೇ ಮೃತಪಟ್ಟಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಸಿಂಡಿಕೇಟ್ ಬ್ಯಾಂಕ್ ಮಾಜಿ ಅಧಿಕಾರಿಯಾಗಿದ್ದ ಕರ್ಕೇರ ಅವರು, ನಿವೃತ್ತಿ ಬಳಿಕ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದರು. ತುಳು ನಾಟಕ, ಕವನ ಬರೆಯುವ ಹವ್ಯಾಸ ಹೊಂದಿದ್ದರು. ಇವರು ಕಡಲ್ ಕವಿತಾ ಸಂಕಲನ ಮತ್ತು ಎರು ಮೈಂದೆ ನಾಟಕಗಳಿಗೆ ಅಕಾಡೆಮಿ ಪ್ರಶಸ್ತಿ ಪಡೆದಿದ್ದರು.
ಗೋಕರ್ಣನಾಥ ಸಹಕಾರಿ ಬ್ಯಾಂಕ್ ಮಾಜಿ ಅಧ್ಯಕ್ಷರು, ಯಕ್ಷಾಂಗಣದ ಸ್ಥಾಪಕ ಉಪಾಧ್ಯಕ್ಷರು ಆಗಿದ್ದರು. ಇವರು ತುಳು ಅಕಾಡೆಮಿ ಸದಸ್ಯರಾಗಿದ್ದ ಅವಧಿಯಲ್ಲಿ ತುಳು ಭಾಷೆಯಲ್ಲಿ ಮೊದಲ ಬಾರಿಗೆ ಎಂಎ ಸ್ನಾತಕೋತ್ತರ ಪದವಿ ಆರಂಭಗೊಂಡಿತ್ತು. ಮೊದಲ ಬ್ಯಾಚಿನಲ್ಲಿ ತುಳು ಎಂ.ಎ. ವಿದ್ಯಾರ್ಥಿಯಾಗಿ ಸೇರಿದ್ದಲ್ಲದೆ ತುಳು ಕಲಿಯಬೇಕೆಂಬ ನೆಲೆಯಲ್ಲಿ ಕಿರಿಯರಿಗೆ ಪ್ರೋತ್ಸಾಹ ತುಂಬುತ್ತಿದ್ದರು. ಆರೋಗ್ಯದಲ್ಲಿ ತುಂಬು ಜವ್ವನ ಹೊಂದಿದ್ದ ಕರ್ಕೇರ ಅವರು, ಹಠಾತ್ ನಿಧನರಾಗಿರುವುದು ಅವರ ಆಪ್ತರಲ್ಲಿ ಮತ್ತು ತುಳು ಸಂಘಟಕರಲ್ಲಿ ದಿಗ್ಭ್ರಮೆ ಮೂಡಿಸಿದೆ
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 05:29 pm
HK News Staffer
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm