ಬ್ರೇಕಿಂಗ್ ನ್ಯೂಸ್
12-09-22 10:22 pm Mangalore Correspondent ಕರಾವಳಿ
ಉಳ್ಳಾಲ, ಸೆ.12 : ಕೊರೊನಾ ಲಾಕ್ಡೌನ್ ಸಂದರ್ಭ ಹಣ್ಣು ಕೀಳಲು ಹಲಸಿನ ಮರವೇರಿ ಕೆಳಗೆ ಬಿದ್ದು ಸೊಂಟದ ಸ್ವಾಧೀನವನ್ನೇ ಕಳಕೊಂಡಿದ್ದ ಬೆಳ್ಮ ಗ್ರಾಮದ ಅಶಕ್ತ ಕುಟುಂಬದ ಯುವಕನೋರ್ವನಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒಂದು ಲಕ್ಷ ರೂಪಾಯಿ ಪರಿಹಾರ ಧನ ಲಭಿಸಿದೆ.
ಬೆಳ್ಮ ಗ್ರಾಮದ ಬರಿಕೆ, ಕುಂಭಲಚ್ಚಿಲ್ ನಿವಾಸಿಗಳಾದ ಬಾಲಕೃಷ್ಣ ಪೂಜಾರಿ ಮತ್ತು ಪುಷ್ಪಾವತಿ ದಂಪತಿಯ ದ್ವಿತೀಯ ಪುತ್ರ ಭಾಸ್ಕರ ಪೂಜಾರಿ ಅವರು ಕಳೆದ ಒಂದೂವರೆ ವರುಷದ ಹಿಂದೆ ಹಣ್ಣು ಕೀಳಲು ಹಲಸಿನ ಮರ ಏರಿದ್ದಾಗ ರೆಂಬೆ ತುಂಡಾಗಿ ಕೆಳಗೆ ಬಿದ್ದು ಸೊಂಟದ ಸ್ವಾಧೀನ ಕಳಕೊಂಡು ಹಾಸಿಗೆ ಹಿಡಿದಿದ್ದರು. ಭಾಸ್ಕರ್ ಅವರ ಚಿಕಿತ್ಸೆಗೆ ಅನೇಕ ಸಂಘ, ಸಂಸ್ಥೆಗಳು, ಸ್ಥಳೀಯರು ಸೇರಿ ಆರ್ಥಿಕ ಸಹಕಾರ ನೀಡಿದ್ದರು.ಆ ಸಂದರ್ಭದಲ್ಲಿ ಅಲೆಮಾರಿ, ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿದ್ದ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ಭಾಸ್ಕರ್ ಅವರಿಗೆ ವೈಯಕ್ತಿಕ ಸಹಾಯ ನೀಡಿದಲ್ಲದೆ ವಿಶೇಷ ಮುತುವರ್ಜಿ ವಹಿಸಿ ಅಂದಿನ ಸಿಎಂ ಬಿ.ಎಸ್ ಯಡಿಯೂರಪ್ಪ ಅವರಲ್ಲಿ ಪರಿಹಾರ ನಿಧಿಗಾಗಿ ಮನವಿ ಮಾಡಿದ್ದರು. ಮಾಜಿ ಸಿಎಂ ಬಿಎಸ್ ವೈ ಆದೇಶದಂತೆ ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರು ಭಾಸ್ಕರ್ ಅವರಿಗೆ ಒಂದು ಲಕ್ಷ ರೂಪಾಯಿಗಳನ್ನ ಪರಿಹಾರವಾಗಿ ನೀಡಿದ್ದಾರೆ.



ಅಲೆಮಾರಿ, ಅರೆ ಅಲೆಮಾರಿ ನಿಗಮದ ಮಾಜಿ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ದಿ ಮೈಸೂರು ಇಲೆಕ್ಟ್ರಿಕಲ್ಸ್ (ಲಿ)ನ ಮಾಜಿ ಅಧ್ಯಕ್ಷರಾದ ಸಂತೋಷ್ ರೈ ಬೋಳಿಯಾರ್ ನೇತೃತ್ವದ ತಂಡದ ಸದಸ್ಯರು ಪರಿಹಾರ ನಿಧಿಯ ಫಲಾನುಭವಿ ಭಾಸ್ಕರ್ ಅವರನ್ನ ಭೇಟಿ ಮಾಡಿ ಧೈರ್ಯ ತುಂಬಿದರು.
ತಮ್ಮ ಮನವಿಗೆ ಸ್ಪಂದಿಸಿ ಪರಿಹಾರ ಧನ ನೀಡಿದ ಮಾಜಿ ಸಿ.ಎಂ ಬಿಎಸ್ ವೈ ಮತ್ತು ಹಾಲಿ ಸಿ.ಎಂ ಬಸವರಾಜ ಬೊಮ್ಮಾಯಿ ಅವರಿಗೆ ರವೀಂದ್ರ ಶೆಟ್ಟಿ ಅವರು ಅಭಿನಂದನೆ ಸಲ್ಲಿಸಿದ್ದು, ಭಾಸ್ಕರ್ ಅವರು ಹಂತ, ಹಂತವಾಗಿ ಚೇತರಿಸುತ್ತಿದ್ದು ಸಮಾಜದ ಸಹೃದಯಿಗಳು ಮುಂದೆಯೂ ಅವರಿಗೆ ಸಹಾಯ, ಸಹಕಾರ ನೀಡುವಂತೆ ಕೋರಿದ್ದಾರೆ.
Ullal Man loses strength to walk after falling down from tree, CM Fund issued after visiting his house in Belman.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm