ಬ್ರೇಕಿಂಗ್ ನ್ಯೂಸ್
14-09-22 04:36 pm HK News Desk ಕರಾವಳಿ
ಮಂಗಳೂರು, ಸೆ.14: ಬಸ್ಸಿನಿಂದ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಮೆದುಳು ನಿಷ್ಕ್ರಿಯಗೊಂಡಿದ್ದ ಪಿಯುಸಿ ವಿದ್ಯಾರ್ಥಿಯ ಅಂಗಾಂಗಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ನಗರದ ಇಂಡಿಯಾನ ಆಸ್ಪತ್ರೆಯಿಂದ ಬೆಂಗಳೂರು ಮತ್ತು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಝೀರೋ ಟ್ರಾಫಿಕಲ್ಲಿ ಲಿವರ್, ಕಿಡ್ನಿ ಮತ್ತು ಕಣ್ಣುಗಳನ್ನು ತೆಗೆದು ರವಾನೆ ಮಾಡಲಾಗಿದೆ.
ಉಳ್ಳಾಲದ ತ್ಯಾಗರಾಜ್ – ಮಮತಾ ಕರ್ಕೇರ ಅವರ ಪುತ್ರ, 16 ವರ್ಷದ ಯಶರಾಜ್ ವಾರದ ಹಿಂದೆ ಖಾಸಗಿ ಸಿಟಿ ಬಸ್ಸಿನಲ್ಲಿ ಬರುತ್ತಿದ್ದಾಗ ಉಳ್ಳಾಲದ ನೇತ್ರಾವತಿ ಸೇತುವೆಯ ಬಳಿ ಹೆದ್ದಾರಿಯಲ್ಲಿ ಬಸ್ಸಿನಿಂದ ಎಸೆಯಲ್ಪಟ್ಟಿದ್ದ. ಬಸ್ಸಿನಲ್ಲಿ ರಶ್ ಇದ್ದ ಕಾರಣ ನೇತಾಡುತ್ತಾ ಹೋಗುತ್ತಿದ್ದಾಗ ಹುಡುಗ ಹೊರಗೆ ಎಸೆಯಲ್ಪಟ್ಟಿದ್ದು, ತಲೆಯ ಭಾಗಕ್ಕೆ ತೀವ್ರ ಗಾಯಗೊಂಡು ಇಂಡಿಯಾನ ಆಸ್ಪತ್ರೆಗೆ ದಾಖಲಾಗಿದ್ದ.



ಚಿಂತಾಜನಕ ಸ್ಥಿತಿಯಲ್ಲಿದ್ದ ಯಶರಾಜ್ ನನ್ನು ಬದುಕಿಸಲು ವೈದ್ಯರು ಶತ ಪ್ರಯತ್ನ ಮಾಡಿದ್ದಾರೆ. ಕೊನೆಗೆ, ಮಂಗಳವಾರ ಸಂಜೆ ಮೆದುಳು ಡೆಡ್ ಆಗಿರುವುದಾಗಿ ವೈದ್ಯರು ತಿಳಿಸಿದ್ದು, ಅಂಗಾಂಗ ದಾನ ಮಾಡುವ ಬಗ್ಗೆ ಕುಟುಂಬಸ್ಥರಿಗೆ ಸಲಹೆ ಮಾಡಿದ್ದಾರೆ. ಮಗನನ್ನು ಕಳಕೊಂಡ ದುಃಖದ ನಡುವೆಯೂ ಹೆತ್ತವರು ಅಂಗಾಂಗ ದಾನಕ್ಕೆ ಒಪ್ಪಿದ್ದು, ಅದರಂತೆ ರಾಜ್ಯ ಸರಕಾರದ ಜೀವ ಸಾರ್ಥಕತೆ ತಂಡದವರು ಅಂಗಾಂಗ ಕಸಿಗೆ ಏರ್ಪಾಡು ಮಾಡಿದ್ದಾರೆ. ಕಿಡ್ನಿ, ಲಿವರನ್ನು ತೆಗೆದು ನಾಲ್ಕು ಗಂಟೆಯ ಒಳಗೆ ಇನ್ನೊಬ್ಬರಿಗೆ ಕಸಿ ಮಾಡಬೇಕಿರುವುದರಿಂದ ಅದನ್ನು ತುರ್ತಾಗಿ ಒಯ್ದು ಅಳವಡಿಸುವುದು ಸವಾಲಾಗಿರುತ್ತದೆ.



ಹೀಗಾಗಿ ಅಗತ್ಯವುಳ್ಳವರು ಮೊದಲೇ ಬೇಡಿಕೆ ಸಲ್ಲಿಸಿದ್ದರೆ, ಅಂಥವರ ಲಿಸ್ಟ್ ಆಧರಿಸಿ ಜೀವ ಸಾರ್ಥಕತೆ ತಂಡದವರು ಫೈನಲ್ ಮಾಡುತ್ತಾರೆ. ಬೇಡಿಕೆ ಆಧರಿಸಿ ಲಿವರನ್ನು ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿರುವ ಕೆಎಂಸಿ ಆಸ್ಪತ್ರೆಗೆ ಒಯ್ಯಲು ವ್ಯವಸ್ಥೆ ಮಾಡಿದ್ದರೆ, ಒಂದು ಕಿಡ್ನಿ ಮತ್ತು ಎರಡು ಕಣ್ಣುಗಳನ್ನು ಉಡುಪಿ ಜಿಲ್ಲೆಯ ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ಒಯ್ಯಲಾಗಿದೆ. ಬೆಂಗಳೂರಿಗೆ ಒಯ್ಯಲು ನಗರದಿಂದ ಬಜ್ಪೆ ಏರ್ಪೋರ್ಟಿಗೆ ಝೀರೋ ಟ್ರಾಫಿಕ್ ಮಾಡಲಾಗಿತ್ತು. ಅಲ್ಲಿಂದ ವಿಮಾನದ ಮೂಲಕ ಒಯ್ದು ಲಿವರ್ ಕಸಿ ಮಾಡಲು ವ್ಯವಸ್ಥೆ ಮಾಡಲಾಗಿದೆ. ಮಣಿಪಾಲದ ಕೆಎಂಸಿ ಆಸ್ಪತ್ರೆಗೂ ಝೀರೋ ಟ್ರಾಫಿಕಲ್ಲಿ ಒಯ್ಯಲಾಗಿದೆ. ಮತ್ತೊಂದು ಕಿಡ್ನಿಯನ್ನು ಇಂಡಿಯಾನ ಆಸ್ಪತ್ರೆಯಲ್ಲಿಯೇ ಬೇರೊಬ್ಬ ವ್ಯಕ್ತಿಗೆ ಕಸಿ ಮಾಡಲಾಗಿದೆ.
ಯಶರಾಜ್ ಹೆತ್ತವರಿಗೆ ಒಬ್ಬನೇ ಮಗನಾಗಿದ್ದು ಇನ್ನೊಬ್ಬಳು ತಂಗಿ ಐದನೇ ಕ್ಲಾಸ್ ಕಲಿಯುತ್ತಿದ್ದಾಳೆ. ಯಶರಾಜ್ ಅಕಾಲಿಕ ಮರಣ ಹೆತ್ತವರು, ಸಂಬಂಧಿಕರನ್ನು ಶೋಕದಲ್ಲಿ ಮುಳುಗಿಸಿದ್ದು, ಅಂಗಾಂಗ ಕಸಿ ಮಾಡುವ ಸಂದರ್ಭದಲ್ಲೂ ಸ್ನೇಹಿತರು, ಸಂಬಂಧಿಕರು ಆಸ್ಪತ್ರೆಗೆ ಆಗಮಿಸಿದ್ದರು. ಒಬ್ಬನ ಜೀವ ಉಳಿಸುವಲ್ಲಿ ಅಂಗಾಂಗ ಕಸಿ ಪ್ರಧಾನ ಪಾತ್ರ ವಹಿಸುತ್ತದೆ. ಕಣ್ಣುಗಳನ್ನು ಸಾವಿನ ಬಳಿಕವೂ ಆರು ಗಂಟೆ ಒಳಗೆ ತೆಗೆದು ಇನ್ನೊಬ್ಬನಿಗೆ ಕಸಿ ಮಾಡಬಹುದಾಗಿದ್ದರೆ, ಇತರೇ ಅಂಗಗಳನ್ನು ವ್ಯಕ್ತಿ ಜೀವಂತ ಇರುವಾಗಲೇ ತೆಗೆದು ಕಸಿ ಮಾಡಬೇಕಿರುತ್ತದೆ. ಹೀಗಾಗಿ ಬ್ರೈನ್ ಡೆಡ್ ಸಂದರ್ಭದಲ್ಲಿ ಜೀವ ಸಾರ್ಥಕತೆ ಅನ್ನುವ ಯೋಜನೆಯಡಿ ಅಂಗಾಂಗ ಕಸಿಯನ್ನು ರಾಜ್ಯ ಸರಕಾರದಿಂದಲೇ ಮಾಡಲಾಗುತ್ತಿದೆ.
Mangalore Viral organs of youth from ullal who was brian dead transported to Bangalore via zero traffic. Yasraj a PUC student who had a fall from the bus was admitted in Indiana hospital and later was declared brian dead. The family later then decided to donate the organs which will now save many lives.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm