ಬ್ರೇಕಿಂಗ್ ನ್ಯೂಸ್
15-09-22 06:20 pm Mangalore Correspondent ಕರಾವಳಿ
ಮಂಗಳೂರು, ಸೆ.15 : ಸುರತ್ಕಲ್ ಎನ್ ಐ ಟಿ ಕೆ ಬಳಿಯಲ್ಲಿರುವ ಅಕ್ರಮ ಟೋಲ್ ಗೇಟ್ ಕಡೆಗೂ ತೆರವುಗೊಳ್ಳುವುದು ಬಹುತೇಕ ಖಚಿತ ಆಗಿದೆ. ಟೋಲ್ ತೆರವಾದರೆ ಅಲ್ಲಿ ಕೆಲಸಕ್ಕಿದ್ದ 30ರಷ್ಟು ಕಾರ್ಮಿಕರು ಕೆಲಸ ಕಳೆದುಕೊಳ್ಳಲಿದ್ದಾರೆ. ಅವರ ಜೀವನ ಭದ್ರತೆಗಾಗಿ ಶಿಕ್ಷಣ, ಸಾಮರ್ಥ್ಯ ಅನುಸರಿಸಿ ಬೇರೆ ಕಡೆಗಳಲ್ಲಿ ಉದ್ಯೋಗ ದೊರಕಿಸುವ ಭರವಸೆ ನೀಡುತ್ತೇನೆ ಎಂದು ಕೆಪಿಸಿಸಿ ಸಂಯೋಜಕಿ, ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಹೇಳಿದ್ದಾರೆ.
ಸುದ್ದಿಗೋಷ್ಟಿ ಕರೆದು ಮಾತನಾಡಿದ ಅವರು, ಕಳೆದ ಹಲವು ವರ್ಷಗಳಿಂದ ಕಾರ್ಯಾಚರಣೆ ನಡೆಸುತ್ತಿರುವ ಟೋಲ್ ಗೇಟನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ, ಸಂಸದ ನಳಿನ್ ಕುಮಾರ್ ಕಟೀಲ್ ತೆರವು ಮಾಡುವುದಾಗಿ ದಿನಾಂಕದ ಮೇಲೆ ದಿನಾಂಕ ಘೋಷಣೆ ಮಾಡಿದ್ದರೂ ಟೋಲ್ ಮುಚ್ಚಲು ಅವರಿಂದ ಸಾಧ್ಯವಾಗಿಲ್ಲ. ನೂರಾರು ಸಮಾನ ಮನಸ್ಕ ಸಂಘಟನೆಗಳು, ವಿವಿಧ ರಾಜಕೀಯ ಪಕ್ಷಗಳು ಜೊತೆ ಸೇರಿ ಟೋಲ್ ಗೇಟ್ ವಿರೋಧಿ ಸಮಿತಿ ನಡೆಸಿರುವ ಹೋರಾಟಕ್ಕೆ ಸದ್ಯದಲ್ಲೇ ಗೆಲುವು ಸಿಗಲಿದೆ. ಕೆಲವೇ ಸಮಯದಲ್ಲಿ ಟೋಲ್ ಕೇಂದ್ರ ಅಲ್ಲಿಂದ ಎತ್ತಂಗಡಿ ಆಗುವುದು ನಿಶ್ಚಿತ. ಸದ್ಯ ಟೋಲ್ ಗೇಟ್ ನಲ್ಲಿ 31ಕ್ಕೂ ಹೆಚ್ಚು ಮಂದಿ ಯುವಕ-ಯುವತಿಯರು ಕೆಲಸ ಮಾಡುತ್ತಿದ್ದು ಟೋಲ್ ತೆರವುಗೊಂಡರೆ ಅವರ ಕುಟುಂಬದ ಜೀವನ ನಿರ್ವಹಣೆ ಕಷ್ಟವಾಗಲಿದೆ. ಇದನ್ನು ಮನಗಂಡು ಅವರಿಗೆ ಮುಂದಿನ ದಿನಗಳಲ್ಲಿ ಉದ್ಯೋಗ ನೀಡುವ ಭರವಸೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಸುರತ್ಕಲ್ ಟೋಲ್ ಗೇಟ್ ನಲ್ಲಿ ಒಟ್ಟು 31 ಮಂದಿ ಕಾರ್ಮಿಕರು ದುಡಿಯುತ್ತಿದ್ದು ಅವರಲ್ಲಿ ಯುವಕ-ಯುವತಿಯರು ಸೇರಿದ್ದಾರೆ. ಟೋಲ್ ತೆರವುಗೊಳ್ಳುವುದರಿಂದ ಅವರು ಉದ್ಯೋಗ ಕಳೆದುಕೊಳ್ಳಲಿದ್ದು ಕುಟುಂಬಕ್ಕೆ ಆರ್ಥಿಕ ಹೊರೆ ಬೀಳಲಿದೆ. ಇದನ್ನು ಮನಗಂಡು ಅವರ ವಿದ್ಯಾರ್ಹತೆ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಉದ್ಯೋಗ ನೀಡಲು ಈಗಾಗಲೇ ವಿವಿಧ ಕಂಪೆನಿಗಳು ಮತ್ತು ಉದ್ಯಮಿಗಳ ಜೊತೆ ಚರ್ಚಿಸಿದ್ದೇನೆ ಎಂದು ಪ್ರತಿಭಾ ಹೇಳಿದರು.
ಇದಲ್ಲದೆ, ಟೋಲ್ ಗೇಟ್ ನಲ್ಲಿ ದುಡಿಯುತ್ತಿರುವ ಕಾರ್ಮಿಕರ ಮೇಲೆ ಹತ್ತಾರು ಕ್ರಿಮಿನಲ್ ಕೇಸ್ ಗಳಿದ್ದು ಟೋಲ್ ತೆರವುಗೊಂಡ ಬಳಿಕ ಅತಂತ್ರ ಸ್ಥಿತಿ ಎದುರಿಸಲಿದ್ದಾರೆ. ಕಾರ್ಮಿಕರು ಮತ್ತವರ ಕುಟುಂಬ ಸದಸ್ಯರು ಸಂಪರ್ಕದಲ್ಲಿದ್ದು ಟೋಲ್ ತೆರವುಗೊಂಡ ತಕ್ಷಣ ಅವರ ಉದ್ಯೋಗ ಭದ್ರತೆಗೆ ಸೂಕ್ತ ಕ್ರಮ ಜರುಗಿಸುವುದಾಗಿ ಪ್ರತಿಭಾ ತಿಳಿಸಿದ್ದಾರೆ.
Surathkal toll gate closure, staff will be given new job says congress Pratibha Kulai.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm