ಬ್ರೇಕಿಂಗ್ ನ್ಯೂಸ್
15-09-22 10:59 pm Mangalore Correspondent ಕರಾವಳಿ
ಉಳ್ಳಾಲ, ಸೆ.15 : ಉಳ್ಳಾಲ ನಗರಸಭೆಗೆ ತೆರಿಗೆ ಹಣವನ್ನೂ ಅಧಿಕಾರಿಗಳು ಪಾವತಿಸದೆ ವಂಚಿಸುತ್ತಿದ್ದು, ನಾನಾ ರೀತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ತನ್ನ ಕ್ಷೇತ್ರಕ್ಕೆ ಅನುದಾನ ಮಂಜೂರಾದರೂ ಕಾಮಗಾರಿ ವಿಳಂಬಿಸಿದ ನಗರಾಡಳಿತದ ವಿರುದ್ಧ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರಾದ ರವಿಚಂದ್ರ ಗಟ್ಟಿ ಅರೆ ನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಉಳ್ಳಾಲ ನಗರಸಭೆ ಸದಸ್ಯ ರವಿಚಂದ್ರ ಯಾನೆ ಪಾನಕ ರವಿ ನಗರಾಡಳಿತದ ವಿರುದ್ಧವೇ ಅರೆನಗ್ನವಾಗಿ ಪ್ರತಿಭಟಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಒಂದು ವೀಡಿಯೋ ತುಣುಕಲ್ಲಿ ನಗರಸಭೆಯ ಭ್ರಷ್ಟಾಚಾರದ ಬಗ್ಗೆ ರವಿ ಮಾತನಾಡಿದ್ದು ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷ ಆಯೂಬ್ ಮಂಚಿಲರವರು ನಲ್ವತ್ತರಿಂದ ಐವತ್ತು ಸಾವಿರ ರೂಪಾಯಿಗಳನ್ನ ಪಡೆಯುತ್ತಾರೆಂದು ಆರೋಪಿಸಿದ್ದಾರೆ.


ಅಲ್ಲದೆ ನಗರದಾದ್ಯಂತ ಸಂಗ್ರಹಿಸಿದ ತೆರಿಗೆ ಹಣವನ್ನೂ ನಗರಸಭೆಗೆ ಕಟ್ಟದೆ ಜನರಿಗೆ ಸೈಬರ್ ನಲ್ಲಿ ಮುದ್ರಿತ ನಕಲಿ ರಶೀದಿ ನೀಡಿ ವಂಚಿಸುತ್ತಿದ್ದು ಇದರಲ್ಲಿ ತುಳಸಿ, ಚಂದ್ರ ಮತ್ತು ಆರೋಗ್ಯ ಅಧಿಕಾರಿಗಳು ಶಾಮೀಲಾಗಿರುವುದಾಗಿ ಆರೋಪಿಸಿದ್ದಾರೆ. ನಗರಸಭೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗುತ್ತಿದ್ದರೂ ಹಿಂದಿನ ಪೌರಾಯುಕ್ತ ರಾಯಪ್ಪ ಅವರು ಕೇವಲ ಸ್ವಚ್ಛ ಭಾರತವೆಂದು ಕಸದ ಹಿಂದೆ ಬಿದ್ದಿದ್ದರು. ಇದೀಗ ನೂತನವಾಗಿ ಬಂದಿರುವ ಪೌರಾಯುಕ್ತರು ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕ ಬೇಕೆಂದು ಒತ್ತಾಯಿಸಿದ್ದಾರೆ.

ರವಿ ಪ್ರತಿನಿಧಿಸುತ್ತಿರುವ ವಾರ್ಡ್ ಗೆ ಕಾಮಗಾರಿ ನಡೆಸಲು 14 ನೇ ಹಣಕಾಸು ಯೋಜನೆಯಡಿ ಅನುದಾನ ಮಂಜೂರಾದರೂ ಕಾಮಗಾರಿ ಆರಂಭಿಸದ ಧೋರಣೆ ವಿರುದ್ಧ ಗುರುವಾರ ನಗರಾಡಳಿತದ ಕಚೇರಿಯಲ್ಲಿ ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
Mangalore Ullal town municipality corruption, Congress member does half naked protest.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm