ಬ್ರೇಕಿಂಗ್ ನ್ಯೂಸ್
15-09-22 10:59 pm Mangalore Correspondent ಕರಾವಳಿ
ಉಳ್ಳಾಲ, ಸೆ.15 : ಉಳ್ಳಾಲ ನಗರಸಭೆಗೆ ತೆರಿಗೆ ಹಣವನ್ನೂ ಅಧಿಕಾರಿಗಳು ಪಾವತಿಸದೆ ವಂಚಿಸುತ್ತಿದ್ದು, ನಾನಾ ರೀತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ತನ್ನ ಕ್ಷೇತ್ರಕ್ಕೆ ಅನುದಾನ ಮಂಜೂರಾದರೂ ಕಾಮಗಾರಿ ವಿಳಂಬಿಸಿದ ನಗರಾಡಳಿತದ ವಿರುದ್ಧ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರಾದ ರವಿಚಂದ್ರ ಗಟ್ಟಿ ಅರೆ ನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಉಳ್ಳಾಲ ನಗರಸಭೆ ಸದಸ್ಯ ರವಿಚಂದ್ರ ಯಾನೆ ಪಾನಕ ರವಿ ನಗರಾಡಳಿತದ ವಿರುದ್ಧವೇ ಅರೆನಗ್ನವಾಗಿ ಪ್ರತಿಭಟಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಒಂದು ವೀಡಿಯೋ ತುಣುಕಲ್ಲಿ ನಗರಸಭೆಯ ಭ್ರಷ್ಟಾಚಾರದ ಬಗ್ಗೆ ರವಿ ಮಾತನಾಡಿದ್ದು ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷ ಆಯೂಬ್ ಮಂಚಿಲರವರು ನಲ್ವತ್ತರಿಂದ ಐವತ್ತು ಸಾವಿರ ರೂಪಾಯಿಗಳನ್ನ ಪಡೆಯುತ್ತಾರೆಂದು ಆರೋಪಿಸಿದ್ದಾರೆ.


ಅಲ್ಲದೆ ನಗರದಾದ್ಯಂತ ಸಂಗ್ರಹಿಸಿದ ತೆರಿಗೆ ಹಣವನ್ನೂ ನಗರಸಭೆಗೆ ಕಟ್ಟದೆ ಜನರಿಗೆ ಸೈಬರ್ ನಲ್ಲಿ ಮುದ್ರಿತ ನಕಲಿ ರಶೀದಿ ನೀಡಿ ವಂಚಿಸುತ್ತಿದ್ದು ಇದರಲ್ಲಿ ತುಳಸಿ, ಚಂದ್ರ ಮತ್ತು ಆರೋಗ್ಯ ಅಧಿಕಾರಿಗಳು ಶಾಮೀಲಾಗಿರುವುದಾಗಿ ಆರೋಪಿಸಿದ್ದಾರೆ. ನಗರಸಭೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗುತ್ತಿದ್ದರೂ ಹಿಂದಿನ ಪೌರಾಯುಕ್ತ ರಾಯಪ್ಪ ಅವರು ಕೇವಲ ಸ್ವಚ್ಛ ಭಾರತವೆಂದು ಕಸದ ಹಿಂದೆ ಬಿದ್ದಿದ್ದರು. ಇದೀಗ ನೂತನವಾಗಿ ಬಂದಿರುವ ಪೌರಾಯುಕ್ತರು ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕ ಬೇಕೆಂದು ಒತ್ತಾಯಿಸಿದ್ದಾರೆ.

ರವಿ ಪ್ರತಿನಿಧಿಸುತ್ತಿರುವ ವಾರ್ಡ್ ಗೆ ಕಾಮಗಾರಿ ನಡೆಸಲು 14 ನೇ ಹಣಕಾಸು ಯೋಜನೆಯಡಿ ಅನುದಾನ ಮಂಜೂರಾದರೂ ಕಾಮಗಾರಿ ಆರಂಭಿಸದ ಧೋರಣೆ ವಿರುದ್ಧ ಗುರುವಾರ ನಗರಾಡಳಿತದ ಕಚೇರಿಯಲ್ಲಿ ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
Mangalore Ullal town municipality corruption, Congress member does half naked protest.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm