ಬ್ರೇಕಿಂಗ್ ನ್ಯೂಸ್
15-09-22 10:59 pm Mangalore Correspondent ಕರಾವಳಿ
ಉಳ್ಳಾಲ, ಸೆ.15 : ಉಳ್ಳಾಲ ನಗರಸಭೆಗೆ ತೆರಿಗೆ ಹಣವನ್ನೂ ಅಧಿಕಾರಿಗಳು ಪಾವತಿಸದೆ ವಂಚಿಸುತ್ತಿದ್ದು, ನಾನಾ ರೀತಿಯಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ತನ್ನ ಕ್ಷೇತ್ರಕ್ಕೆ ಅನುದಾನ ಮಂಜೂರಾದರೂ ಕಾಮಗಾರಿ ವಿಳಂಬಿಸಿದ ನಗರಾಡಳಿತದ ವಿರುದ್ಧ ಆಡಳಿತ ಕಾಂಗ್ರೆಸ್ ಪಕ್ಷದ ಸದಸ್ಯರಾದ ರವಿಚಂದ್ರ ಗಟ್ಟಿ ಅರೆ ನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
ಉಳ್ಳಾಲ ನಗರಸಭೆ ಸದಸ್ಯ ರವಿಚಂದ್ರ ಯಾನೆ ಪಾನಕ ರವಿ ನಗರಾಡಳಿತದ ವಿರುದ್ಧವೇ ಅರೆನಗ್ನವಾಗಿ ಪ್ರತಿಭಟಿಸಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.ಒಂದು ವೀಡಿಯೋ ತುಣುಕಲ್ಲಿ ನಗರಸಭೆಯ ಭ್ರಷ್ಟಾಚಾರದ ಬಗ್ಗೆ ರವಿ ಮಾತನಾಡಿದ್ದು ಕಟ್ಟಡಗಳಿಗೆ ಡೋರ್ ನಂಬರ್ ನೀಡಲು ನಗರಸಭೆಯ ಅಧ್ಯಕ್ಷರಾದ ಚಿತ್ರಕಲಾ, ಉಪಾಧ್ಯಕ್ಷ ಆಯೂಬ್ ಮಂಚಿಲರವರು ನಲ್ವತ್ತರಿಂದ ಐವತ್ತು ಸಾವಿರ ರೂಪಾಯಿಗಳನ್ನ ಪಡೆಯುತ್ತಾರೆಂದು ಆರೋಪಿಸಿದ್ದಾರೆ.


ಅಲ್ಲದೆ ನಗರದಾದ್ಯಂತ ಸಂಗ್ರಹಿಸಿದ ತೆರಿಗೆ ಹಣವನ್ನೂ ನಗರಸಭೆಗೆ ಕಟ್ಟದೆ ಜನರಿಗೆ ಸೈಬರ್ ನಲ್ಲಿ ಮುದ್ರಿತ ನಕಲಿ ರಶೀದಿ ನೀಡಿ ವಂಚಿಸುತ್ತಿದ್ದು ಇದರಲ್ಲಿ ತುಳಸಿ, ಚಂದ್ರ ಮತ್ತು ಆರೋಗ್ಯ ಅಧಿಕಾರಿಗಳು ಶಾಮೀಲಾಗಿರುವುದಾಗಿ ಆರೋಪಿಸಿದ್ದಾರೆ. ನಗರಸಭೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರವಾಗುತ್ತಿದ್ದರೂ ಹಿಂದಿನ ಪೌರಾಯುಕ್ತ ರಾಯಪ್ಪ ಅವರು ಕೇವಲ ಸ್ವಚ್ಛ ಭಾರತವೆಂದು ಕಸದ ಹಿಂದೆ ಬಿದ್ದಿದ್ದರು. ಇದೀಗ ನೂತನವಾಗಿ ಬಂದಿರುವ ಪೌರಾಯುಕ್ತರು ಭ್ರಷ್ಟಾಚಾರಕ್ಕೆ ಬ್ರೇಕ್ ಹಾಕ ಬೇಕೆಂದು ಒತ್ತಾಯಿಸಿದ್ದಾರೆ.

ರವಿ ಪ್ರತಿನಿಧಿಸುತ್ತಿರುವ ವಾರ್ಡ್ ಗೆ ಕಾಮಗಾರಿ ನಡೆಸಲು 14 ನೇ ಹಣಕಾಸು ಯೋಜನೆಯಡಿ ಅನುದಾನ ಮಂಜೂರಾದರೂ ಕಾಮಗಾರಿ ಆರಂಭಿಸದ ಧೋರಣೆ ವಿರುದ್ಧ ಗುರುವಾರ ನಗರಾಡಳಿತದ ಕಚೇರಿಯಲ್ಲಿ ಅರೆನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ.
Mangalore Ullal town municipality corruption, Congress member does half naked protest.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 07:01 pm
HK News Staffer
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm