ಬ್ರೇಕಿಂಗ್ ನ್ಯೂಸ್
19-09-22 02:01 pm Mangalore Correspondent ಕರಾವಳಿ
ಮಂಗಳೂರು, ಸೆ.19: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಈ ಬಾರಿ ಮಂಗಳೂರು ದಸರಾ ಮಹೋತ್ಸವ ಸೆ.26ರಿಂದ ಅ.6ರ ವರೆಗೆ ಅತ್ಯಂತ ವೈಭವದಿಂದ ನಡೆಯಲಿದೆ ಎಂದು ಕ್ಷೇತ್ರದ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ತಿಳಿಸಿದ್ದಾರೆ.
ದಸರಾ ಮಹೋತ್ಸವ ಕುರಿತು ಭಾನುವಾರ ವಿವಿಧ ಸಮಿತಿಗಳ ಪೂರ್ವಭಾವಿ ಸಭೆ ನಡೆಸಲಾಗಿದ್ದು ಬಳಿಕ ಮಾಧ್ಯಮಕ್ಕೆ ಮಾಹಿತಿ ನೀಡಿದರು. ದಸರಾ ಉದ್ಘಾಟನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗುವುದು. ಆಮಂತ್ರಣ ಪತ್ರಿಕೆಯನ್ನು ಅವರಿಗೆ ಕಳುಹಿಸಿ ಕೊಟ್ಟು ಸ್ವತಃ ನಾನೇ ಆಹ್ವಾನಿಸುತ್ತೇನೆ. ಅವರ ಸಮಯ ಗೊತ್ತುಪಡಿಸಿ ಉದ್ಘಾಟನೆ ನಿಗದಿ ಪಡಿಸಲಾಗುವುದು ಎಂದು ಪೂಜಾರಿ ತಿಳಿಸಿದ್ದಾರೆ.


ಮಂಗಳೂರು ದಸರಾಕ್ಕೆ ದೂರದ ಊರುಗಳಿಂದ 10 ಲಕ್ಷಕ್ಕೂ ಅಧಿಕ ಮಂದಿ ಬರಲಿದ್ದಾರೆ. ಅದಕ್ಕೆ ತಕ್ಕಂತೆ ಭಾರೀ ಸಿದ್ಧತೆಯನ್ನೂ ಮಾಡಲಾಗುತ್ತಿದೆ. ಪ್ರತೀ ದಿನ ಧಾರ್ಮಿಕ ಸೇವೆಗಳ ಜತೆಗೆ ಅನ್ನದಾನ ಇರಲಿದೆ. ಭಕ್ತರ ಅನುಕೂಲಕ್ಕಾಗಿ ಈ ಬಾರಿ ಚಂಡಿಕಾ ಯಾಗವನ್ನು ದೇವಸ್ಥಾನದ ಹಿಂಬದಿಯ ಗಾಜಿನ ಮನೆಯಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದರು.


ಶಾರದೆಗೆ 12 ಕೆಜಿ ತೂಕದ ರಜತಪೀಠ
ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಮಾತನಾಡಿ, ಮಂಗಳೂರು ದಸರಾದ ಶಾರದೆಗೆ ಈ ಬಾರಿ 12 ಲಕ್ಷ ರೂ. ವೆಚ್ಚದಲ್ಲಿ 12 ಕೆ.ಜಿ. ತೂಕದ ರಜತ ಪೀಠವನ್ನು ಕುದ್ರೋಳಿ ಶ್ರೀ ಗೋಕರ್ಣನಾಥ ಸೇವಾದಳ ಮತ್ತು ಭಕ್ತರ ಸೇವೆಯಾಗಿ ಪುತ್ತೂರಿನಲ್ಲಿ ನಿರ್ಮಿಸಲಾಗುತ್ತಿದೆ. ಸೆ. 24ರಂದು ಇದನ್ನು ಕ್ಷೇತ್ರದಲ್ಲಿ ಸಮರ್ಪಣೆ ಮಾಡಲಾಗುವುದು. ಭಕ್ತರೊಬ್ಬರು ಬೆಳ್ಳಿ ವೀಣೆಯನ್ನು ಕಾಣಿಕೆಯಾಗಿ ನೀಡಲಿದ್ದಾರೆ ಎಂದರು.

ಮೇಯರ್ ಜಯಾನಂದ ಅಂಚನ್, ಕ್ಷೇತ್ರಾಡಳಿತ ಮಂಡಳಿ ಅಧ್ಯಕ್ಷ ಎಚ್.ಎಸ್. ಸಾಯಿರಾಮ್, ಉಪಾಧ್ಯಕ್ಷೆ ಊರ್ಮಿಳಾ ರಮೇಶ್, ಕಾರ್ಯದರ್ಶಿ ಮಾಧವ ಸುವರ್ಣ, ಟ್ರಸ್ಟಿಗಳಾದ ರವಿಶಂಕರ ಮಿಜಾರು, ಕೆ. ಮಹೇಶ್ಚಂದ್ರ, ಎಂ. ಶೇಖರ್ ಪೂಜಾರಿ, ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಉಪಾಧ್ಯಕ್ಷ ಬಿ.ಜಿ. ಸುವರ್ಣ, ಸದಸ್ಯರಾದ ಹರಿಕೃಷ್ಣ ಬಂಟ್ವಾಳ, ರಮಾನಾಥ್ ಕಾರಂದೂರು, ಶೈಲೇಂದ್ರ ವೈ. ಸುವರ್ಣ, ಎಚ್.ಎಸ್. ಜಯರಾಜ್, ಕೃತಿನ್ ಡಿ. ಅಮೀನ್, ಚಂದನ್ದಾಸ್ ಮೊದಲಾದವರು ಸಭೆಯಲ್ಲಿದ್ದರು.
Mangalore Kudroli dasara to be held from September 6th to October 6th, CM Bommai invited for inauguration said B. Janardhana Poojary.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm