ಬ್ರೇಕಿಂಗ್ ನ್ಯೂಸ್
21-09-22 10:47 pm Mangalore Correspondent ಕರಾವಳಿ
ಮಂಗಳೂರು, ಸೆ.21: ಶಿವಮೊಗ್ಗದಲ್ಲಿ ಬಂಧಿತನಾದ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ನನ್ನು ಡಿವೈಎಸ್ಪಿ ನೇತೃತ್ವದ ತಂಡ ಮಂಗಳೂರಿಗೆ ಕರೆತಂದಿದ್ದು, ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಯ್ಯ ಹಾಗೂ ಆಗುಂಬೆ ಪಿಎಸ್ಐ ಶಿವಕುಮಾರ್ ನೇತೃತ್ವದ ತಂಡ ಮಾಝ್ ಮುನೀರನ್ನು ಕರೆತಂದು ವಿವಿಧ ಕಡೆಗಳಿಗೆ ಕರೆದೊಯ್ದು ಶೋಧ ಕಾರ್ಯ ನಡೆಸಿದೆ.
ಬುಧವಾರ ಮಧ್ಯಾಹ್ನ ಬಂಟ್ವಾಳ ತಾಲೂಕಿನ ನಾವುರ ಗ್ರಾಮದ ಸುಲ್ತಾನ್ ಕಟ್ಟೆ ಎಂಬಲ್ಲಿಗೆ ಕರೆದೊಯ್ದು ಅಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಮಹಜರು ವೇಳೆ ಡಾಗ್ ಸ್ಕ್ವಾಡ್ ಕೂಡ ಜೊತೆಗಿದ್ದು ಅಲ್ಲಿ ಹುದುಗಿಸಿಟ್ಟಿದ್ದಾರೆ ಎನ್ನಲಾದ ಸ್ಫೋಟಕ ವಸ್ತುಗಳ ಬಗ್ಗೆ ಹುಡುಕಾಟ ನಡೆಸಲಾಗಿದೆ. ನಾವುರ ಸಮೀಪದ ಅಗ್ರಹಾರ ಎಂಬಲ್ಲಿಯೂ ಪೊಲೀಸರು ಆರೋಪಿಯನ್ನು ಕರೆದೊಯ್ದು ಶೋಧ ನಡೆಸಿದ್ದಾರೆ. ಬಂಟ್ವಾಳ, ಮಂಗಳೂರು ತಾಲೂಕಿನ ವಿವಿಧ ಕಡೆಗಳಿಗೆ ಪೊಲೀಸರು ಆರೋಪಿ ಮಾಝ್ ನನ್ನು ಕರೆದೊಯ್ದಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳದ ಹಲವೆಡೆ ನಿರ್ಜನ ಪ್ರದೇಶದಲ್ಲಿ ಬಾಂಬ್ ಸ್ಫೋಟದ ಪ್ರಯೋಗ, ತರಬೇತಿ ನಡೆಸಿರುವ ಬಗ್ಗೆ ಮಾಝ್ ಮುನೀರ್ ಅಹ್ಮದ್ ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ. ಹೀಗಾಗಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡನ್ನು ಜೊತೆಗೆ ಕರೆದುಕೊಂಡೇ ಬಂದಿರುವ ಪೊಲೀಸರು ವಿವಿಧ ಕಡೆಗಳಿಗೆ ಕರೆದೊಯ್ದು ಸ್ಫೋಟಕ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಹಲವು ಮಹತ್ವದ ಪುರಾವೆಗಳು ಲಭಿಸಿವೆ ಎನ್ನಲಾಗುತ್ತಿದೆ.

ಮಾಝ್ ಮುನೀರ್ ಅಹ್ಮದ್ ಮಂಗಳೂರಿನಲ್ಲಿದ್ದರೆ, ಸಯ್ಯದ್ ಯಾಸೀನ್ ಶಿವಮೊಗ್ಗದಲ್ಲಿಯೇ ಇದ್ದ. ಇವರಿಬ್ಬರು ಕೂಡ ಒಂದೇ ರೀತಿಯಲ್ಲಿ ಕೆಲಸ ಮಾಡುತ್ತಿದ್ದರು. ಯಾಸೀನ್ ತುಂಗಭದ್ರಾ ನದಿಯ ಆಸುಪಾಸಿನಲ್ಲಿ ನಿರ್ಜನ ಪ್ರದೇಶಗಳಲ್ಲಿ ಬಾಂಬ್ ಹುದುಗಿಸಿಟ್ಟು ಸ್ಫೋಟದ ರಿಹರ್ಸಲ್ ನಡೆಸಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಆಧುನಿಕ ಮಾದರಿಯಲ್ಲಿ ಬಾಂಬ್ ತಯಾರಿಸಲು ನಿರ್ಜನ ಕಾಡು ಪ್ರದೇಶದಲ್ಲಿದ್ದುಕೊಂಡು ಇವರು ಪ್ರಯೋಗ ನಡೆಸುತ್ತಿದ್ದರು ಎನ್ನುವ ಬಗ್ಗೆ ಮಾಹಿತಿ ಇರುವುದರಿಂದ ಪೊಲೀಸರು ಇಬ್ಬರು ಆರೋಪಿಗಳನ್ನು ವಿವಿಧ ಕಡೆಗಳಿಗೆ ಕರೆದೊಯ್ದು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ, ಇವರು ನೀಡಿರುವ ಮಾಹಿತಿ ಆಧರಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Shivamogga Terror suspect, accused brought to Bantwal in Mangalore got spot Mahajar.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am