ಬ್ರೇಕಿಂಗ್ ನ್ಯೂಸ್
21-09-22 10:47 pm Mangalore Correspondent ಕರಾವಳಿ
ಮಂಗಳೂರು, ಸೆ.21: ಶಿವಮೊಗ್ಗದಲ್ಲಿ ಬಂಧಿತನಾದ ಶಂಕಿತ ಉಗ್ರ ಮಾಝ್ ಮುನೀರ್ ಅಹ್ಮದ್ ನನ್ನು ಡಿವೈಎಸ್ಪಿ ನೇತೃತ್ವದ ತಂಡ ಮಂಗಳೂರಿಗೆ ಕರೆತಂದಿದ್ದು, ಬಂಟ್ವಾಳ ತಾಲೂಕಿನ ವಿವಿಧ ಪ್ರದೇಶಗಳಿಗೆ ಕರೆದೊಯ್ದು ಸ್ಥಳ ಮಹಜರು ನಡೆಸಿದೆ. ತೀರ್ಥಹಳ್ಳಿ ಡಿವೈಎಸ್ಪಿ ಶಾಂತವೀರಯ್ಯ ಹಾಗೂ ಆಗುಂಬೆ ಪಿಎಸ್ಐ ಶಿವಕುಮಾರ್ ನೇತೃತ್ವದ ತಂಡ ಮಾಝ್ ಮುನೀರನ್ನು ಕರೆತಂದು ವಿವಿಧ ಕಡೆಗಳಿಗೆ ಕರೆದೊಯ್ದು ಶೋಧ ಕಾರ್ಯ ನಡೆಸಿದೆ.
ಬುಧವಾರ ಮಧ್ಯಾಹ್ನ ಬಂಟ್ವಾಳ ತಾಲೂಕಿನ ನಾವುರ ಗ್ರಾಮದ ಸುಲ್ತಾನ್ ಕಟ್ಟೆ ಎಂಬಲ್ಲಿಗೆ ಕರೆದೊಯ್ದು ಅಲ್ಲಿ ಸ್ಥಳ ಪರಿಶೀಲನೆ ನಡೆಸಲಾಗಿದೆ. ಮಹಜರು ವೇಳೆ ಡಾಗ್ ಸ್ಕ್ವಾಡ್ ಕೂಡ ಜೊತೆಗಿದ್ದು ಅಲ್ಲಿ ಹುದುಗಿಸಿಟ್ಟಿದ್ದಾರೆ ಎನ್ನಲಾದ ಸ್ಫೋಟಕ ವಸ್ತುಗಳ ಬಗ್ಗೆ ಹುಡುಕಾಟ ನಡೆಸಲಾಗಿದೆ. ನಾವುರ ಸಮೀಪದ ಅಗ್ರಹಾರ ಎಂಬಲ್ಲಿಯೂ ಪೊಲೀಸರು ಆರೋಪಿಯನ್ನು ಕರೆದೊಯ್ದು ಶೋಧ ನಡೆಸಿದ್ದಾರೆ. ಬಂಟ್ವಾಳ, ಮಂಗಳೂರು ತಾಲೂಕಿನ ವಿವಿಧ ಕಡೆಗಳಿಗೆ ಪೊಲೀಸರು ಆರೋಪಿ ಮಾಝ್ ನನ್ನು ಕರೆದೊಯ್ದಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಬಂಟ್ವಾಳದ ಹಲವೆಡೆ ನಿರ್ಜನ ಪ್ರದೇಶದಲ್ಲಿ ಬಾಂಬ್ ಸ್ಫೋಟದ ಪ್ರಯೋಗ, ತರಬೇತಿ ನಡೆಸಿರುವ ಬಗ್ಗೆ ಮಾಝ್ ಮುನೀರ್ ಅಹ್ಮದ್ ತನಿಖೆಯ ವೇಳೆ ಬಾಯ್ಬಿಟ್ಟಿದ್ದಾನೆ. ಹೀಗಾಗಿ ಬಾಂಬ್ ಸ್ಕ್ವಾಡ್ ಹಾಗೂ ಡಾಗ್ ಸ್ಕ್ವಾಡನ್ನು ಜೊತೆಗೆ ಕರೆದುಕೊಂಡೇ ಬಂದಿರುವ ಪೊಲೀಸರು ವಿವಿಧ ಕಡೆಗಳಿಗೆ ಕರೆದೊಯ್ದು ಸ್ಫೋಟಕ ಪತ್ತೆಗಾಗಿ ಹುಡುಕಾಟ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಹಲವು ಮಹತ್ವದ ಪುರಾವೆಗಳು ಲಭಿಸಿವೆ ಎನ್ನಲಾಗುತ್ತಿದೆ.

ಮಾಝ್ ಮುನೀರ್ ಅಹ್ಮದ್ ಮಂಗಳೂರಿನಲ್ಲಿದ್ದರೆ, ಸಯ್ಯದ್ ಯಾಸೀನ್ ಶಿವಮೊಗ್ಗದಲ್ಲಿಯೇ ಇದ್ದ. ಇವರಿಬ್ಬರು ಕೂಡ ಒಂದೇ ರೀತಿಯಲ್ಲಿ ಕೆಲಸ ಮಾಡುತ್ತಿದ್ದರು. ಯಾಸೀನ್ ತುಂಗಭದ್ರಾ ನದಿಯ ಆಸುಪಾಸಿನಲ್ಲಿ ನಿರ್ಜನ ಪ್ರದೇಶಗಳಲ್ಲಿ ಬಾಂಬ್ ಹುದುಗಿಸಿಟ್ಟು ಸ್ಫೋಟದ ರಿಹರ್ಸಲ್ ನಡೆಸಿದ್ದಾನೆ ಎನ್ನುವ ಮಾಹಿತಿಗಳಿವೆ. ಅಲ್ಲದೆ, ಆಧುನಿಕ ಮಾದರಿಯಲ್ಲಿ ಬಾಂಬ್ ತಯಾರಿಸಲು ನಿರ್ಜನ ಕಾಡು ಪ್ರದೇಶದಲ್ಲಿದ್ದುಕೊಂಡು ಇವರು ಪ್ರಯೋಗ ನಡೆಸುತ್ತಿದ್ದರು ಎನ್ನುವ ಬಗ್ಗೆ ಮಾಹಿತಿ ಇರುವುದರಿಂದ ಪೊಲೀಸರು ಇಬ್ಬರು ಆರೋಪಿಗಳನ್ನು ವಿವಿಧ ಕಡೆಗಳಿಗೆ ಕರೆದೊಯ್ದು ತನಿಖೆ ನಡೆಸುತ್ತಿದ್ದಾರೆ. ಅಲ್ಲದೆ, ಇವರು ನೀಡಿರುವ ಮಾಹಿತಿ ಆಧರಿಸಿ ಹಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
Shivamogga Terror suspect, accused brought to Bantwal in Mangalore got spot Mahajar.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
14-07-26 01:37 pm
HK News Staffer
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
14-07-26 02:43 pm
HK News Staffer
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm