ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
22-06-25 07:52 pm
HK News Desk
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
22-06-25 07:48 pm
HK News Desk
Yoga Haram Muslims; ಯೋಗವನ್ನು ಒಪ್ಪುತ್ತೇವೆ, ಸೂರ...
22-06-25 04:57 pm
Pahalgam Attack, NIA Arrest; ಪಹಲ್ಗಾಮ್ ದಾಳಿಗೂ...
22-06-25 04:49 pm
Israel Iran Conflict, B-2 Stealth Bombers; ಇಸ...
22-06-25 10:58 am
IndiGo Flight News, Bangalore; ಇಂಡಿಗೋ ವಿಮಾನದಲ...
21-06-25 08:50 pm
21-06-25 11:04 pm
Mangaluru Correspondent
Krishnaveni Mines Geology, Mangalore;18 ದಿನ ಜ...
21-06-25 03:56 pm
Fake NEET Marksheet, Udupi Topper; ನಕಲಿ ನೀಟ್...
21-06-25 01:59 pm
Sakleshpur, Mangalore Bangalore Train; ಸಕಲೇಶಪ...
21-06-25 12:03 pm
Kudupu Murder, Sajith Shetty Post, Sudheer Ku...
20-06-25 11:04 pm
23-06-25 11:47 am
Udupi Correspondent
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm
Mangalore, Bantwal Pregnant Woman Murder, Sui...
19-06-25 04:37 pm