ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm