ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
12-11-25 02:54 pm
HK News Desk
ದೆಹಲಿ ಘಟನೆ, ಆತ್ಮಹತ್ಯಾ ಬಾಂಬರ್ ಆಗಿರಲಿಲ್ಲ, ಆಕಸ್ಮ...
11-11-25 10:56 pm
Mangaluru Kasaragod Highway: ಮಂಗಳೂರು- ಕಾಸರಗೋಡ...
11-11-25 10:20 pm
ಕೆಂಪುಕೋಟೆ ಕಾರು ಬ್ಲಾಸ್ಟ್ ಪ್ರಕರಣ ; ಜೈಶ್ ಉಗ್ರರ ಲ...
11-11-25 03:28 pm
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
11-11-25 10:42 pm
Mangalore Correspondent
Bomb blast in New Delhi, High Alert in Dakshi...
11-11-25 10:15 pm
Bhagvati Prem Ship, Mangalore: ಸುರತ್ಕಲ್ ; ಮರಳ...
08-11-25 08:31 pm
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
12-11-25 12:32 pm
Mangalore Correspondent
ಬೆಳ್ತಂಗಡಿ ಶ್ರೀರಾಮ ಕ್ರೆಡಿಟ್ ಸೊಸೈಟಿಯಲ್ಲಿ ಭಾರೀ ಅ...
11-11-25 06:33 pm
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm