ಬ್ರೇಕಿಂಗ್ ನ್ಯೂಸ್
23-09-22 10:56 pm Mangalore Correspondent ಕರಾವಳಿ
ಮಂಗಳೂರು, ಸೆ.23: ದಸರಾ ಹಿನ್ನೆಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಾಲ್ಕು ದಿನಗಳ ಹೆಚ್ಚುವರಿಯಾಗಿ ದಸರಾ ರಜೆಯನ್ನು ನೀಡಲಾಗಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯಿಂದ ಸೆ.28ರಿಂದ ಅ.1ರ ವರೆಗೆ ನಾಲ್ಕು ದಿನಗಳ ಹೆಚ್ಚುವರಿ ರಜೆ ಘೋಷಿಸಿ ಆದೇಶ ಮಾಡಲಾಗಿದೆ.
ದಸರಾ ರಜೆಯನ್ನು ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ ಅ.3ರಿಂದ 16ರ ವರೆಗೆ ನಿಗದಿ ಪಡಿಸಲಾಗಿದೆ. ಆದರೆ ಮಂಗಳೂರಿನಲ್ಲಿ ಸೆ.26ರಿಂದಲೇ ಕುದ್ರೋಳಿ, ಮಂಗಳೂರು ದಸರಾ ಉತ್ಸವ ಇರುವುದರಿಂದ ಅದೇ ಸಂದರ್ಭದಲ್ಲಿ ರಜೆ ನೀಡಬೇಕೆಂದು ಒತ್ತಾಯ ಕೇಳಿಬಂದಿತ್ತು. ಇದಕ್ಕೆ ಪೂರಕವಾಗಿ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಶಿಕ್ಷಣ ಸಚಿವರಿಗೂ ಮನವಿ ನೀಡಿದ್ದರು. ಅದರಂತೆ, ಜಿಲ್ಲಾಧಿಕಾರಿಗಳು ಮಂಗಳೂರಿನ ಮಟ್ಟಿಗೆ ರಜೆಯನ್ನು ಸೆ.26ರಿಂದ ಅ.10ರ ವರೆಗೆ ಮಾಡಬಹುದೆಂದು ಶಿಕ್ಷಣ ಸಚಿವರು ಸೂಚನೆ ನೀಡಿದ್ದರು. ಅದನ್ನೇ ಅನುಸರಿಸಿ ಕೆಲವು ಖಾಸಗಿ ಶಾಲೆಗಳು ಈಗಾಗಲೇ ಸೆ.27ರಿಂದ ತೊಡಗಿ ಅ.10ರ ವರೆಗೆ ರಜೆ ನೀಡಲು ಮುಂದಾಗಿತ್ತು.
ಆದರೆ ಇದರ ನಡುವೆಯೇ ಶಿಕ್ಷಣ ಇಲಾಖೆಯಿಂದ ಮಂಗಳೂರು ತಾಲೂಕು ವ್ಯಾಪ್ತಿಗೆ ಸಂಬಂಧಿಸಿ ಪ್ರಾಥಮಿಕ ಶಾಲೆ ಮತ್ತು ಪ್ರೌಢಶಾಲೆಗಳಿಗೆ ನವರಾತ್ರಿ ಹಬ್ಬದ ಆಚರಣೆಗೆ ಪೂರಕವಾಗುವಂತೆ ದಸರಾ ರಜೆಯನ್ನು ಸೆ.28ರಿಂದ ಅ.1ರ ವರೆಗೆ ಹೆಚ್ಚುವರಿಯಾಗಿ ನಾಲ್ಕು ದಿನಗಳ ಕಾಲ ನೀಡಲು ಆದೇಶ ಮಾಡಲಾಗಿದೆ. ಇದರ ನಡುವೆ ಅ.2ರಂದು ಮಹಾತ್ಮ ಗಾಂಧಿ ಜಯಂತಿಯನ್ನು ಶಾಲೆಯಲ್ಲಿ ಆಚರಣೆ ಮಾಡಬೇಕು. ಮತ್ತು ಹೆಚ್ಚುವರಿ ನೀಡಿರುವ ರಜೆಗಳನ್ನು ನವೆಂಬರ್ ತಿಂಗಳಲ್ಲಿ ಶನಿವಾರ ಪೂರ್ತಿ ತರಗತಿ ನಡೆಸುವ ಮೂಲಕ ಸರಿದೂಗಿಸಬೇಕು ಎಂದು ಸೂಚಿಸಲಾಗಿದೆ.
Mangalore Dasara 2022, extra 4 days holidays for schools ordered by the Education department. With Mangaluru Dasara beginning from September 26, holidays have been declared for all primary and high school students from September 28 to October 16.
29-05-26 10:41 pm
HK News Staffer
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
CM Siddaramaiah, Supporters crying, Kaveri: ಸ...
28-05-26 05:31 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am