ಬ್ರೇಕಿಂಗ್ ನ್ಯೂಸ್
24-09-22 12:52 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನಲ್ಲಿ ತರುವುದು ಹಾಗೂ ಸುಪ್ರಿಂ ಕೋರ್ಟ್ ಆದೇಶದನ್ವಯ ಬಸ್, ಲಾರಿ ಮತ್ತು ಆಟೋ ರಿಕ್ಷಾ ಮುಂತಾದ ವಾಹನಗಳಿಗೆ ಪ್ರತಿಫಲಿತ (ರಿಫ್ಲೆಕ್ಟರ್) ಸ್ಟಿಕ್ಕರ್ ಅಳವಡಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ನೇತೃತ್ವ ವಹಿಸಿ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಭೇಟಿಯಾಗಿ ಮಹತ್ವದ ಸಭೆ ನಡೆಸಿದರು.
ಬ್ಯಾಟರಿ ಚಾಲಿತ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನೊಳಗೆ ತರದಿರುವ ಕಾರಣ ಆಟೋ ರಿಕ್ಷಾ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿರುವ ಕಾರಣ ಸಾರಿಗೆ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಜೀವನೋಪಾಯಕ್ಕಾಗಿ ಆಟೋ ರಿಕ್ಷಾವನ್ನೇ ನಂಬಿರುವ ಅಸಂಖ್ಯ ಇಂಧನ ಚಾಲಿತ ಆಟೋ ರಿಕ್ಷಾ ಚಾಲಕರ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ದೃಷ್ಟಿಯಿಂದ ಸಭೆ ನಡೆಸಲಾಗಿದ್ದು ಈ ಸಮಸ್ಯೆಯನ್ನು ಬಗೆಹರಿಸುವ ಜವಾಬ್ದಾರಿ ನಮ್ಮ ಮೇಲಿದೆ, ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು. ಹಾಗಾಗಿ ಇಂಧನ ಚಾಲಿತ ರಿಕ್ಷಾ ಚಾಲಕರು ಆತಂಕಪಡುವ ಅಗತ್ಯವಿಲ್ಲ. ಸಮಸ್ಯೆಯನ್ನು ಬಗೆಹರಿಸುವುದು ನನ್ನ ಜವಬ್ದಾರಿ ಎಂದು ಶಾಸಕ ಕಾಮತ್ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಬಸ್, ಲಾರಿ ಹಾಗೂ ಆಟೋ ರಿಕ್ಷಾ ಸೇರಿದಂತೆ ವಾಹನಗಳಿಗೆ ಪ್ರತಿಫಲನ ಸ್ಟಿಕ್ಕರ್ ಅಳವಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಅವೆಲ್ಲವನ್ನೂ ಸಮರ್ಥವಾಗಿ ಜಾರಿಗೊಳಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಕುರಿತು ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ ಪ್ರಸಾದ್, ಹೆಚ್ಚುವರಿ ಸಾರಿಗೆ ಆಯುಕ್ತರಾದ ಮಲ್ಲಿಕಾರ್ಜುನ್, ಆಯುಕ್ತರಾದ ಟಿ.ಎಚ್.ಎಂ ಕುಮಾರ್, ಬಸ್ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Mla Vedavyas Kamath meets Minister of Transport Department Sriramulu.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm