ಬ್ರೇಕಿಂಗ್ ನ್ಯೂಸ್
24-09-22 12:52 pm Mangalore Correspondent ಕರಾವಳಿ
ಮಂಗಳೂರು, ಸೆ.23: ನಗರದಲ್ಲಿ ಬ್ಯಾಟರಿ ಚಾಲಿತ ಆಟೋ ರಿಕ್ಷಾಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನಲ್ಲಿ ತರುವುದು ಹಾಗೂ ಸುಪ್ರಿಂ ಕೋರ್ಟ್ ಆದೇಶದನ್ವಯ ಬಸ್, ಲಾರಿ ಮತ್ತು ಆಟೋ ರಿಕ್ಷಾ ಮುಂತಾದ ವಾಹನಗಳಿಗೆ ಪ್ರತಿಫಲಿತ (ರಿಫ್ಲೆಕ್ಟರ್) ಸ್ಟಿಕ್ಕರ್ ಅಳವಡಿಸುವ ಕುರಿತು ಶಾಸಕ ವೇದವ್ಯಾಸ್ ಕಾಮತ್ ಅವರು ನೇತೃತ್ವ ವಹಿಸಿ ಸಾರಿಗೆ ಸಚಿವರಾದ ಶ್ರೀರಾಮುಲು ಅವರನ್ನು ಭೇಟಿಯಾಗಿ ಮಹತ್ವದ ಸಭೆ ನಡೆಸಿದರು.
ಬ್ಯಾಟರಿ ಚಾಲಿತ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಚೌಕಟ್ಟಿನೊಳಗೆ ತರದಿರುವ ಕಾರಣ ಆಟೋ ರಿಕ್ಷಾ ಚಾಲಕರಿಗೆ ಸಾಕಷ್ಟು ಸಮಸ್ಯೆ ಉಂಟಾಗುತ್ತಿರುವ ಕಾರಣ ಸಾರಿಗೆ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ. ಜೀವನೋಪಾಯಕ್ಕಾಗಿ ಆಟೋ ರಿಕ್ಷಾವನ್ನೇ ನಂಬಿರುವ ಅಸಂಖ್ಯ ಇಂಧನ ಚಾಲಿತ ಆಟೋ ರಿಕ್ಷಾ ಚಾಲಕರ ಸಮಸ್ಯೆಯನ್ನು ಶೀಘ್ರದಲ್ಲೇ ಪರಿಹರಿಸುವ ದೃಷ್ಟಿಯಿಂದ ಸಭೆ ನಡೆಸಲಾಗಿದ್ದು ಈ ಸಮಸ್ಯೆಯನ್ನು ಬಗೆಹರಿಸುವ ಜವಾಬ್ದಾರಿ ನಮ್ಮ ಮೇಲಿದೆ, ಅದನ್ನು ಸಮರ್ಪಕವಾಗಿ ನಿರ್ವಹಿಸಲಾಗುವುದು. ಹಾಗಾಗಿ ಇಂಧನ ಚಾಲಿತ ರಿಕ್ಷಾ ಚಾಲಕರು ಆತಂಕಪಡುವ ಅಗತ್ಯವಿಲ್ಲ. ಸಮಸ್ಯೆಯನ್ನು ಬಗೆಹರಿಸುವುದು ನನ್ನ ಜವಬ್ದಾರಿ ಎಂದು ಶಾಸಕ ಕಾಮತ್ ಅವರು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಆದೇಶದಂತೆ ಬಸ್, ಲಾರಿ ಹಾಗೂ ಆಟೋ ರಿಕ್ಷಾ ಸೇರಿದಂತೆ ವಾಹನಗಳಿಗೆ ಪ್ರತಿಫಲನ ಸ್ಟಿಕ್ಕರ್ ಅಳವಡಿಸುವ ಕುರಿತು ಸಭೆಯಲ್ಲಿ ಚರ್ಚೆ ನಡೆಯಿತು. ಅವೆಲ್ಲವನ್ನೂ ಸಮರ್ಥವಾಗಿ ಜಾರಿಗೊಳಿಸಲು ಶೀಘ್ರದಲ್ಲೇ ಕ್ರಮ ಕೈಗೊಳ್ಳುವ ಕುರಿತು ಸಾರಿಗೆ ಸಚಿವರಿಗೆ ಮನವರಿಕೆ ಮಾಡಲಾಯಿತು ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಎನ್.ವಿ ಪ್ರಸಾದ್, ಹೆಚ್ಚುವರಿ ಸಾರಿಗೆ ಆಯುಕ್ತರಾದ ಮಲ್ಲಿಕಾರ್ಜುನ್, ಆಯುಕ್ತರಾದ ಟಿ.ಎಚ್.ಎಂ ಕುಮಾರ್, ಬಸ್ ಸಂಘದ ಅಧ್ಯಕ್ಷರಾದ ಸುರೇಶ್ ನಾಯಕ್ ಉಪಸ್ಥಿತರಿದ್ದರು.
Mla Vedavyas Kamath meets Minister of Transport Department Sriramulu.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
29-08-26 03:36 pm
HK News Staffer
ನೇಪಾಳದಲ್ಲಿ ಜಲಪ್ರಳಯ ; ಸಾವಿನ ಸಂಖ್ಯೆ 160ಕ್ಕೆ ಏರ...
27-08-26 12:39 pm
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
29-08-26 08:35 pm
HK News Staffer
ಪಶ್ಚಿಮ ವಲಯ ಐಜಿಪಿ ಅಮಿತ್ ಸಿಂಗ್, ಮಂಗಳೂರು ಡಿಸಿಪಿ...
29-08-26 07:01 pm
ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ; ತುಳುವನ್ನು ರಾಜ್ಯ...
29-08-26 04:39 pm
ಮಂಗಳೂರು ರೈಲ್ವೇ ; ಕೇರಳದಲ್ಲಿ ಯಾರು ಬಟ್ಟೆ ಬಿಚ್ಚಿ...
29-08-26 04:05 pm
ಪ್ರತಿಷ್ಠಿತ ಫೋರ್ಬ್ಸ್ ಇಂಡಿಯಾ ಪಟ್ಟಿಯಲ್ಲಿ ಸ್ಥಾನ ಪ...
28-08-26 08:57 pm
29-08-26 01:02 pm
HK News Staffer
ತುಮಕೂರು ; ಓವರ್ಟೇಕ್ ಭರದಲ್ಲಿ ಕಾರುಗಳ ನಡುವೆ ಮುಖ...
29-08-26 11:40 am
ಡೇಟಿಂಗ್ ಆ್ಯಪ್ನಲ್ಲಿ ಪರಿಚಯವಾಗಿದ್ದ ಹುಡುಗಿಯ ಕತರ್...
28-08-26 09:03 pm
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm