ಬ್ರೇಕಿಂಗ್ ನ್ಯೂಸ್
24-09-22 09:16 pm Mangalore Correspondent ಕರಾವಳಿ
ಮಂಗಳೂರು, ಸೆ.24: ಹಾಸ್ಟೆಲ್ ಕಿಟಕಿ ಮುರಿದು ಓಡಿ ಹೋಗಿ ಆತಂಕ ಮೂಡಿಸಿದ್ದ ಮೂವರು ವಿದ್ಯಾರ್ಥಿನಿಯರು ಕಡೆಗೂ ಸುರಕ್ಷಿತವಾಗಿ ಮರಳಿದ್ದಾರೆ. ದೂರದ ಚೆನ್ನೈನಲ್ಲಿದ್ದ ಮೂವರು ವಿದ್ಯಾರ್ಥಿನಿಯರನ್ನು ಮರಳಿ ಮಂಗಳೂರಿಗೆ ಪೊಲೀಸರು ಕರೆತಂದಿದ್ದಾರೆ. ಇಷ್ಟಕ್ಕೂ ಎರಡೇ ದಿನದಲ್ಲಿ ಇವರು ಮರಳಿ ಬರುವಂತಾಗಲು ಬಸ್ಸು, ರೈಲಿನಲ್ಲಿ ತಿರುಗಾಡಿ ಸುಸ್ತು ಹೊಡೆದಿದ್ದೇ ಕಾರಣವಂತೆ.
ಎರಡು ದಿನಗಳ ಹಿಂದೆ ಮಂಗಳೂರಿನ ಖಾಸಗಿ ಕಾಲೇಜಿನ ಹಾಸ್ಟೆಲ್ ಕೊಠಡಿಯಿಂದ ಕಿಟಕಿ ಮುರಿದು ಹೊರಗೆ ತೆರಳಿದ್ದ ವಿದ್ಯಾರ್ಥಿನಿಯರು ಭಾರೀ ಆತಂಕಕ್ಕೆ ಕಾರಣವಾಗಿದ್ದರು. ಯುವತಿಯರು ನಸುಕಿನ ಮೂರು ಗಂಟೆ ಸುಮಾರಿಗೆ ಲಗ್ಗೇಜು, ಬ್ಯಾಗ್ ಹೊತ್ತುಕೊಂಡು ರಸ್ತೆಯಲ್ಲಿ ನಡೆದುಕೊಂಡು ಸಾಗಿದ್ದು ಸಿಸಿಟಿವಿಯಲ್ಲಿ ಕಂಡುಬಂದಿತ್ತು. ಬೆಳಗ್ಗಿನ ಹೊತ್ತಿಗೆ ಮೂವರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದು ತಿಳಿಯುತ್ತಲೇ ಪೊಲೀಸರು ಟ್ರೇಸಿಂಗ್ ಆರಂಭಿಸಿದ್ದರು. ಆದರೆ, ಮೊಬೈಲ್ ಕೂಡ ಇಲ್ಲದೆ ತೆರಳಿದ್ದ ವಿದ್ಯಾರ್ಥಿನಿಯರ ಬಗ್ಗೆ ಮಾಹಿತಿ ಇರಲಿಲ್ಲ. ರೈಲು ನಿಲ್ದಾಣ ತಲುಪಿದ್ದರು ಅನ್ನೋದಷ್ಟೇ ಮಾಹಿತಿಗಳಿದ್ದವು.

ಎರಡು ದಿನ ಕಳೆಯುತ್ತಲೇ ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಇರುವ ಬಗ್ಗೆ ಮಂಗಳೂರು ಪೊಲೀಸರಿಗೆ ಮಾಹಿತಿ ಬಂದಿತ್ತು. ಮಂಗಳೂರಿನಿಂದ ಕೊಯಂಬತ್ತೂರಿಗೆ ರೈಲಿನಲ್ಲಿ ತೆರಳಿದ್ದ ವಿದ್ಯಾರ್ಥಿನಿಯರು ಅಲ್ಲಿಂದ ಬಸ್ ಹಿಡಿದು ಚೆನ್ನೈಗೆ ತೆರಳಿ, ಪಾಂಡಿಚೇರಿ ಹೋಗಿದ್ದರು. ಒಬ್ಬಾಕೆಯ ಸಂಬಂಧಿಕರ ಮನೆ ಚೆನ್ನೈನಲ್ಲಿದ್ದು ಅಲ್ಲಿಗೆ ತೆರಳುವ ಬಗ್ಗೆ ಪ್ಲಾನ್ ಹಾಕಿದ್ದರು. ಆದರೆ, ಅದು ಸಾಧ್ಯವಾಗದೇ ಎರಡು ದಿನ ಪೂರ್ತಿ ಅಲೆದಾಡಿದ್ದಾರೆ. ಬಸ್, ಆಟೋ ಎಂದು ಚೆನ್ನೈ ಸುತ್ತಿದ್ದಾರೆ. ಕೈಯಲ್ಲಿದ್ದ ಹಣವೂ ಖಾಲಿಯಾಗಿದೆ. ಮನೆಯವರ ಬಗ್ಗೆಯೂ ಚಿಂತೆಯಾಗಿದೆ. ನಾವು ಓಡಿ ಬಂದಿದ್ದರಿಂದ ಮನೆಯವರು ಗಾಬರಿ ಆಗಿರಬೇಕು ಎಂದು ಆಟೋ ಚಾಲಕನಿಗೆ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಮಾಹಿತಿ ನೀಡಿದ್ದಾರೆ. ಚೆನ್ನೈ ಪೊಲೀಸರು ಬಳಿಕ ಮಂಗಳೂರು ಪೊಲೀಸರಿಗೆ ಮಾಹಿತಿ ನೀಡಿದ್ದು, ವಿದ್ಯಾರ್ಥಿನಿಯರನ್ನು ಮರಳಿ ಮಂಗಳೂರಿಗೆ ಕರೆತರಲಾಗಿದೆ.
ಮಾಹಿತಿ ಪ್ರಕಾರ, ಕಾಲೇಜಿನಲ್ಲಿ ಇತ್ತೀಚೆಗೆ ಇಂಟರ್ನಲ್ ಪರೀಕ್ಷೆ ನಡೆದಿದ್ದು ಅದರಲ್ಲಿ ಕಡಿಮೆ ಅಂಕ ಬಂದಿತ್ತು. ಇದರಿಂದ ಮನೆಯವರಿಗೆ ಹೇಗೆ ತಿಳಿಸುವುದು ಎಂದು ಆತಂಕದಲ್ಲಿದ್ದ ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆದಿದ್ದರು. ಆದರೆ ಹೊರ ಜಗತ್ತಿನ ಪರಿವೇ ಇಲ್ಲದೆ ಹೊರಟಿದ್ದವರು ಎರಡೇ ದಿನದಲ್ಲಿ ಸುಸ್ತಾಗಿದ್ದಾರೆ. ಇತ್ತ ವಿದ್ಯಾರ್ಥಿನಿಯರ ನಾಪತ್ತೆ ವಿಚಾರ ಪೋಷಕರಿಂದ ಹೆಚ್ಚು ಕಾಲೇಜು ಆಡಳಿತಕ್ಕೆ ತಲೆನೋವಿಗೆ ಕಾರಣವಾಗಿತ್ತು. ಚಿಂತೆಗೊಳಗಾಗಿದ್ದ ಕಾಲೇಜು ಆಡಳಿತ ವಿದ್ಯಾರ್ಥಿನಿಯರು ಸುರಕ್ಷಿತ ಮರಳುತ್ತಿದ್ದಂತೆ ನಿಟ್ಟಿಸಿರು ಬಿಟ್ಟಿದೆ. ಪರೀಕ್ಷೆಯ ಭಯದಿಂದ ಹಾಸ್ಟೆಲ್ ಬಿಟ್ಟು ತೆರಳಿದ್ದಾರೆ. ಅವರಿಗೆ ಸೂಕ್ತ ಕೌನ್ಸೆಲಿಂಗ್ ನಡೆಸಲಾಗುವುದು. ಅಲ್ಲದೆ, ಹಾಸ್ಟೆಲ್ ಭದ್ರತೆಯನ್ನೂ ಹೆಚ್ಚಿಸಲಾಗುವುದು ಎಂದು ಕಾಲೇಜಿನ ಪ್ರಿನ್ಸಿಪಾಲ್ ಹೇಳಿದ್ದಾರೆ.
Three private college girl students, who were missing from the college hostel, were found in Chennai on September 23. Addressing media on Saturday September 24, police commissioner N Shashi Kumar said, “The three girls, one from Chitradurga and two from Bengaluru, went missing from their hostel on September 21. In a CCTV footage, the trio was found walking on the street with luggage. A missing complaint was filed.
09-04-26 09:30 pm
HK News Staffer
ಗ್ಯಾರಂಟಿ ಯೋಜನೆಗಳ ಬಗ್ಗೆ ವರದಿ ಕೇಳಿದ ಚುನಾವಣಾ ಆಯೋ...
09-04-26 04:33 pm
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
09-04-26 11:03 pm
HK News Staffer
ಹರ್ಮುಜ್ ಜಲಸಂಧಿಗೆ ಇರಾನ್ ಸುಂಕ ; ಭಾರತಕ್ಕೆ ಭಾರೀ...
09-04-26 07:43 pm
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 09:16 pm
HK News Staffer
ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಮಗು ;...
09-04-26 01:03 pm
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm