ಬ್ರೇಕಿಂಗ್ ನ್ಯೂಸ್
25-09-22 04:58 pm Mangalore Correspondent ಕರಾವಳಿ
ಮಂಗಳೂರು, ಸೆ.25: ನವ ವಿವಾಹಿತ ಯುವಕ ರೈಲಿನಡಿಗೆ ತಲೆ ಇಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಕ್ಕೂರಿನಲ್ಲಿ ನಡೆದಿದೆ. ಜಪ್ಪಿನಮೊಗರು ತಂದೋಳಿಗೆ ನಿವಾಸಿ ಧೀರಜ್ ಕುಲಾಲ್(32) ಮೃತ ದುರ್ದೈವಿ.
ಖಾಸಗಿ ಕಂಪನಿಯಲ್ಲಿ ಮಾರ್ಕೆಂಟಿಗ್ ಮ್ಯಾನೇಜರ್ ಆಗಿದ್ದ ಧೀರಜ್ ಆರೇಳು ತಿಂಗಳ ಹಿಂದಷ್ಟೆ ವಿವಾಹವಾಗಿದ್ದರು. ಧೀರಜ್ ಭಾನುವಾರ ಮಧ್ಯಾಹ್ನ ಎಕ್ಕೂರು ರೈಲ್ವೇ ಮೇಲ್ಸೇತುವೆ ಕೆಳಗಡೆಯ ರೈಲ್ವೇ ಹಳಿಯಲ್ಲಿ ಸಾವಿಗೆ ಶರಣಾಗಿದ್ದಾರೆ. ಧೀರಜ್ ಅವರ ತಾಯಿ ಗಿರಿಜಾ ಅವರು 1995 ರಲ್ಲಿ ಅಪಘಾತದಲ್ಲಿ ಸಾವನ್ನಪ್ಪಿದ್ದರು. ತಂದೆ ತಾಯಿಗೆ ಪುಷ್ಪರಾಜ್ ಮತ್ತು ಧೀರಜ್ ಇಬ್ಬರೇ ಮಕ್ಕಳು. ಧೀರಜ್ ಅವರ ತಂದೆ, ಪತ್ನಿ ಸಾವಿನ ಬಳಿಕ ಮಕ್ಕಳನ್ನ ತೊರೆದು ಹೋಗಿದ್ದರು ಎನ್ನಲಾಗಿದೆ.
ಆನಂತರ, ಅನಾಥರಾಗಿದ್ದ ಧೀರಜ್ ಮತ್ತು ಪುಷ್ಪರಾಜ್ ದೊಡ್ಡಮ್ಮನ ಪಾಲನೆಯಲ್ಲಿ ಬೆಳೆದಿದ್ದರು. ಈ ನಡುವೆ, ಧೀರಜ್ ಅವರ ಸೋದರ ಪುಷ್ಪರಾಜ್ ಎರಡು ವರ್ಷಗಳ ಹಿಂದೆ ಪದವಿನಂಗಡಿಯಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಹೀಗೆ ಅಪಘಾತಗಳಲ್ಲೆ ತನ್ನವರನ್ನ ಕಳಕೊಂಡಿದ್ದ ಧೀರಜ್ ಕೂಡ ಇದೀಗ ಆತ್ಮಹತ್ಯೆಗೆ ಶರಣಾಗಿದ್ದು ಅಕಾಲ ಮೃತ್ಯುವನ್ನು ತಂದುಕೊಂಡಿದ್ದಾರೆ. ಧೀರಜ್ ಸಾವು ಕುಟುಂಬ ಮತ್ತು ಸ್ನೇಹಿತರನ್ನ ಶೋಕ ಸಾಗರದಲ್ಲಿ ಮುಳುಗಿಸಿದೆ. ಹಣಕಾಸಿನ ಮುಗ್ಗಟ್ಟು ಆತ್ಮಹತ್ಯೆಗೆ ಕಾರಣವೆಂದು ತಿಳಿದುಬಂದಿದೆ. ರೈಲ್ವೇ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.
32 year old man commits suicide by giving his head to the train at Yekkur in Mangalore. The deceased has been identified as Deeraj Kulal. Financial crises is the reason for the extreme step it is said.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
10-09-25 11:02 am
Mangalore Correspondent
"ಅಮೃತ ಸೋಮೇಶ್ವರ ರಸ್ತೆ" ನಾಮಕರಣಕ್ಕೆ ಸೋಮೇಶ್ವರ ಪುರ...
09-09-25 10:47 pm
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm